ಕ್ರಿಕೆಟ್ ಬೆಟ್ಟಿಂಗ್ ವಿಚಾರಕ್ಕೆ ಯುವಕನ ಕೊಲೆ
ಚಿಕ್ಕಮಗಳೂರು: ಕ್ರಿಕೆಟ್ ಬೆಟ್ಟಿಂಗ್ ವಿಚಾರಕ್ಕೆ ಎರಡು ಗುಂಪಿನ ನಡುವೆ ಘರ್ಷಣೆ ನಡೆದು ಓರ್ವ ಯುವಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ನಗರದ ಕೋಟೆ ಟ್ಯಾಂಕ್ ಬಳಿ ನಡೆದಿದೆ.
ಧ್ರುವರಾಜ್ ಅರಸ್ (23) ಮೃತ ದುರ್ದೈವಿ. ಡ್ರ್ಯಾಗರ್ ನಿಂದ ಇರಿದು ಯುವಕನನ್ನು ಕೊಲೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಲೆಗೈದ ವಸ್ತಾರೆಯ ಪ್ರಮೋದ್ ತಲೆಮರೆಸಿಕೊಂಡಿದ್ದು, ಘಟನೆಗೆ ಕ್ರಿಕೆಟ್ ಬೆಟ್ಟಿಂಗ್ ಮೂಲ ಕಾರಣ ಎನ್ನಲಾಗಿದೆ.
ಹಣದ ವಿಷಯವಾಗಿ ಮಾತುಕತೆ ನಡೆಸಲು ಯುವಕನನ್ನು ನಗರದ ಕೋಟೆ ಟ್ಯಾಂಕ್ ಬಳಿ ಕರೆದುಕೊಂಡು ಹೋಗಿ ಹಣ ವಸೂಲಿಗೆ ಮುಂದಾಗಿದ್ದರು. ಈ ವೇಳೆ ಪರಸ್ಪರ ಮಾತಿನ ಚಕಮಕಿ ನಡೆದು ಮಾರಕಾಸ್ತ್ರದಿಂದ ಇರಿದು ಕೊಲೆ ಮಾಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.