ಸ್ಯಾಂಡಲ್ ವುಡ್ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಹೃದಯಾಘಾತವಾಗಿದ್ದು, ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೈಸೂರಿನ ತಮ್ಮ ನಿವಾಸದಲ್ಲಿರುವಾಗ ನಿನ್ನೆ ತಡರಾತ್ರಿ ಅರ್ಜುನ್ ಜನ್ಯ ಅವರಿಗೆ ಹೃದಯಾಘಾತವಾಗಿದೆ ಎನ್ನಲಾಗಿದೆ. ಈ ವೇಳೆ ತಕ್ಷಣಕ್ಕೆ ಮನೆಯವರು ಚಿಕಿತ್ಸೆಗಾಗಿ ಸ್ಥಳೀಯ ಅಪೋಲೋ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಅರ್ಜುನ್ ಜನ್ಯ ಅವರಿಗೆ ರಾತ್ರಿಯೇ ಆಯಂಜಿಯೋ ಪ್ಲ್ಯಾಸ್ಟಿ ಮಾಡಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಸದ್ಯ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.
ಕನ್ನಡ ಚಿತ್ರರಂಗದ ಸ್ಟಾರ್ ನಿರ್ದೇಶಕರಲ್ಲಿ ಒಬ್ಬರಾದ ಅರ್ಜುನ್ ಜನ್ಯ ಕನ್ನಡ ಸಾಕಷ್ಟು ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಸಂಗೀತ ನಿರ್ದೇಶನದ ಜೊತೆಗೆ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರಾಗಿ ಗುರುತಿಸಿಕೊಂಡಿದ್ದಾರೆ. ಒಟ್ಟಾರೆ ಮ್ಯೂಸಿಕ್ ಮಾಂತ್ರಿಕನ ಆರೋಗ್ಯದಲ್ಲಿ ಏರುಪೇರಾಗಿರುವುದಕ್ಕೆ ಮನನೊಂದ ಅವರ ಅಭಿಮಾನಿಗಳು ಆದಷ್ಟು ಬೇಗ ಗುಣಮುಖರಾಗಲೆಂದು ದೇವರರಲ್ಲಿ ಪ್ರಾರ್ಥನೆ ಮಾಡಿಕೊಂಡಿದ್ದಾರೆ.