ಬೆಂಗಳೂರಿನ ವಾತಾವರಣಕ್ಕೂ ಬಳ್ಳಾರಿಯ ವಾತಾವರಣಕ್ಕೂ ತುಂಬಾ ವ್ಯತ್ಯಾಸವಿದೆ. ದರ್ಶನ್ ಈ ವಾತಾವರಣಕ್ಕೆ ಹೊಂದಿಕೊಳ್ಳಲೇಬೇಕು ಎಂದು ಎಸ್ಪಿ ಶೋಭಾರಾಣಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್ ಆರೋಗ್ಯವಾಗಿದ್ದರೆ, ಯಾರೂ ಸುಳ್ಳು ಸುದ್ದಿಗೆ ಕಿವಿಗೋಡಬಾರದು. ಬಳ್ಳಾರಿ ಜೈಲಿಗೆ ಬಂದ ಮೇಲೆ ಅಡ್ಜೆಸ್ಟ್ ಆಗಲೇಬೇಕು. ನಾವು ಕೂಡ ಹೊರಗಡೆಯಿಂದ ಬಂದವರು ಎಂದು ಹೇಳಿದ್ದಾರೆ.
ಪರಪ್ಪನ ಅಗ್ರಹಾರದಲ್ಲಿ ಕೊಲೆ ಆರೋಪಿ ದರ್ಶನ್ ಐಷಾರಾಮಿ ಜೀವನ ಸಾಗಿಸುತ್ತಿರುವುದು ಬೆಳಕಿಗೆ ಬರುತ್ತಿದ್ದಂತೆ ದರ್ಶನ್ ಆಂಡ್ ಗ್ಯಾಂಗ್ ನ್ನು ಬೇರೆ ಬೇರೆ ಜೈಲುಗಳಿಗೆ ಶಿಫ್ಟ್ ಮಾಡಲಾಗಿದೆ.