Mysore
ಮೈಸೂರು : ರಾಜ್ಯದಲ್ಲಿ ಕೊರೊನಾ ಮಹಾಮಾರಿ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
ಇದಕ್ಕೆ ಬ್ರೇಕ್ ಹಾಕುವ ಸಲುವಾಗಿ ಅಕ್ಟೋಬರ್ 17 ರಿಂದ ಮೈಸೂರಿನ ಎಲ್ಲಾ ಪ್ರವಾಸಿ ತಾಣಗಳನ್ನು ಬಂದ್ ಮಾಡಲು ಮೈಸೂರು ಜಿಲ್ಲಾಡಳಿತ ಆದೇಶ ಹೊರಹಾಕಿದೆ.
ಮುಖ್ಯ ಕಾರಣವೆಂದರೆ ಐತಿಹಾಸಿಕ ದಸರಾ ಆಚರಣೆ ಈ ಬಾರಿ ಸರಳವಾಗಿ ನಡೆಸುತ್ತಿದೆ ಆಚರಿಸಲಾಗುತ್ತಿದೆಯಾದರೂ ಜನಸಂದಣಿ ತಡೆಯಲು ಈ ನಿರ್ಧಾರ ಕೈಗೊಳ್ಳಲಾಗಿದೆ.
ಅಕ್ಟೋಬರ್ 17 ರಂದು ಮೈಸೂರಿನ ಎಲ್ಲ ಪ್ರವಾಸಿ ತಾಣಗಳು ಬಂದ್ ಆಗಲಿವೆ.
ಮೈಸೂರು ಅರಮನೆ, ಮೃಗಾಲಯ, ಚಾಮುಂಡಿ ಬೆಟ್ಟ, ನಂಜನಗೂಡು ದೇವಾಲಯಗಳನ್ನು ಬಂದ್ ಮಾಡಲು ಈಗಾಗಲೇ ಆದೇಶ ಹೊರಡಿಸಲಾಗಿದೆ.
ಇನ್ನು ನಿನ್ನೆ ಮಧ್ಯರಾತ್ರಿಯಿಂದಲೇ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.
ಅಲ್ಲದೇ ನವೆಂಬರ್ 1 ರವರೆಗೆ ಎಲ್ಲಾ ಪ್ರವಾಸಿ ತಾಣಗಳಿಗೆ ಪ್ರವೇಶಕ್ಕೆ ನಿರ್ಬಂಧನ ವಿಧಿಸಲಾಗಿದೆ.
ಅಷ್ಟೇ ಅಲ್ಲದೇ ಜನರು ದಸರಾ ರಜೆಗೆ ಮೈಸೂರಿಗೆ ಬಾರದಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಪುತ್ತೂರಿನ ಬೊಳುವಾರು ವೃತ್ತದಲ್ಲಿದ್ದ ಅಂಗಡಿಗಳು ಬೆಂಕಿಗಾಹುತಿ
Mysore
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel