ಮೈಸೂರು : ಆಂಬ್ಯುಲೆನ್ಸ್ ನಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ
ಮೈಸೂರು: ದೇಶದಲ್ಲಿ ಕೊರೊನಾ ರಣಕೇಕೆ ಹಾಕ್ತಿದೆ. ದೇಶಾದ್ಯಂತ ಬೆಡ್ ಕೊರತೆ , ಆಕ್ಸಿಜನ್ ಕೊರತೆಗಳಿಂದ ಜನ ಸಾಯ್ತಿದ್ದಾರೆ.. ದೇಶದಲ್ಲಿ ಕೊರೊನಾಗೆ ಲೆಕ್ಕವಿಲ್ಲದಷ್ಟು ಮಂದಿ ಬಲಿಯಾಗ್ತಿದ್ದಾರೆ. ಅದೆಷ್ಟೋ ಜನರು ತಮ್ಮವರನ್ನ ಕಳೆದುಕೊಂಡು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಸಿನಿ ತಾರಯರು ಸಹ ತಮ್ಮರನ್ನ ಕಳೆದುಕೊಂಡು ನೋವನ್ನ ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಳ್ತಿದ್ದಾರೆ. ಸೋಂಕಿತರು ಬೆಡ್ ಸಿಗದೇ ಆಕ್ಸಿಜನ್ ಕೊರತೆಯಿಂದ ನರಳಿ ನರಳಿ ಪ್ರಾಣ ಬಿಡುತ್ತಿದ್ದಾರೆ. ಇಂತಹ ಕೆಟ್ಟ ಪರಿಸ್ಥಿತಿಗೆ ಬಂದು ದೇಶ ತಲುಪಿದೆ. ಅಂತಹದ್ರಲ್ಲಿ ತೀರಾ ಮನಕಲಲಕುಂತಹ ಘಟನೆಗಳು ಆಗಾಗ ಬೆಳಕಿಗೆ ಬರುತ್ತಲೇ ಇದೆ..
ಇದೀಗ ಕರೊನಾ ಸೋಂಕಿತರಿಗೆ ಆ್ಯಂಬುಲೆನ್ಸ್ನಲ್ಲೇ ಚಿಕಿತ್ಸೆ ನೀಡಲಾಗಿರುವ ದೃಶ್ಯ ಮೈಸೂರಿನ ಕೆ.ಆರ್.ಆಸ್ಪತ್ರೆಯ ಮುಂದೆ ಕಂಡು ಬಂದಿದೆ.. ಆಸ್ಪತ್ರೆ ಮುಂದೆ ಬೆಡ್ ಗಾಗಿ ಕಾಯುತ್ತಿರುವ ರೋಗಿಗಳು ಕಾದು ನಿಂತಿದ್ದ ದೃಶ್ಯ ಕಂಡುಬಂದಿದೆ.. ಮೈಸೂರಿನಲ್ಲಿ ದಿನೇ ದಿನೇ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗೋದ್ರ ಜೊತೆಗೆ ಬೆಡ್ ಸಮಸ್ಯೆಯೂ ಹೆಚ್ಚಾಗಿದೆ.