Mysore | ರಾಮದಾಸ್ಜೀ ಸುಮ್ಮನಿರಬೇಕು : ಪ್ರತಾಪ್ ಸಿಂಹ ಸಿಡಿಮಿಡಿ
ಮೈಸೂರು : ನಾನು ಮಾತನಾಡುತ್ತಿದ್ದೇನೆ. ರಾಮದಾಸ್ ಜೀ ಸುಮ್ಮನಿರಬೇಕು ಎಂದು ಸಂಸದ ಪ್ರತಾಪ್ ಸಿಂಹ ಸಿಡಿಮಿಡಿಗೊಂಡಿದ್ದಾರೆ.
ಜೂನ್ 21 ರಂದು ಮೈಸೂರಿನಲ್ಲಿ ಯೋಗ ದಿನಾಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರದ ಅರಮನೆ ಆವರಣದಲ್ಲಿ ಯೋಗ ದಿನಾಚರಣೆಯ ಬಗ್ಗೆ ಪ್ರತಾಪ್ ಸಿಂಹ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಈ ವೇಳೆ ಪ್ರತಾಪ್ ಸಿಂಹ, ಕಾರ್ಯಕ್ರಮದಲ್ಲಿ 7 ರಿಂದ 8 ಸಾವಿರ ಜನರು ಭಾಗವಹಿಸುತ್ತಾರೆ ಎಂದ ಪ್ರತಾಪ್ ಸಿಂಹ ಹೇಳಿದ್ದು, ಈ ವೇಳೆ ಮಧ್ಯ ಪ್ರವೇಶಿಸಿದ ರಾಮದಾಸ್ ಈಗಾಗಲೇ 13 ಸಾವಿರ ನೋಂದಣಿ ಆಗಿದೆ ಎಂದರು.
ಇದಕ್ಕೆ ಸಿಟ್ಟಾದ ಪ್ರತಾಪ್ ಸಿಂಹ, ನಾನು ಮಾತನಾಡುತ್ತಿದ್ದೇನೆ, ರಾಮದಾಸ್ಜೀ ಸುಮ್ಮನಿರಬೇಕು ಎಂದು ಸಿಡಿಮಿಡಿಗೊಂಡರು.
ಇದಾದ ಬಳಿಕ ಘಟನೆಯ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ರಾಮದಾಸ್, ಪ್ರತಾಪ್ ಅವರಿಗೆ ಸರಿಯಾದ ಮಾಹಿತಿ ಇರಲಿಲ್ಲ. ಹಾಗಾಗಿ ವಿವರಣೆ ನೀಡಲು ಯತ್ನಿಸಿದೆ ಎಂದು ಸ್ಪಷ್ಟನೆ ನೀಡಿದರು.