ಕೇವಲ 20 ನಿಮಿಷದಲ್ಲಿ ಜಂಬೂ ಸವಾರಿ ಮುಕ್ತಾಯ Mysuru-Dasara saaksha tv
ಮೈಸೂರು : ವಿಶ್ವ ವಿಖ್ಯಾತ ಮೈಸೂರು ಜಂಬೂ ಸವಾರಿ ಈ ಬಾರಿ ಕೇವಲ 20 ನಿಮಿಷದಲ್ಲಿ ಮುಕ್ತಾಯಗೊಂಡಿದೆ.
ಎಂದಿನಂತೆ ರಾಜ್ಯದ ಮುಖ್ಯಮಂತ್ರಿ ಸಂಜೆ 4:32 ರ ಮೀನ ಲಗ್ನದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದರು.
ಇದಾದ ಬಳಿಕ ಸಂಜೆ 5:25ಕ್ಕೆ ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಸಲ್ಲಿಸಿದರು. ಆ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು.
ಕೊರೊನಾ ಕಾರಣದಿಂದಾಗಿ ಈ ಬಾರಿ ಅರಮನೆ ಆವರಣದಲ್ಲಿ ಮಾತ್ರ ಜಂಬೂ ಸವಾರಿ ನಡೆಯಿತು.
2ನೇ ಬಾರಿ ಅಭಿಮನ್ಯು 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ನಾಡದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಹೊತ್ತು ಸಾಗಿದ್ದ.
ಜಂಬೂ ಸವಾರಿ ವೇಳೆ 6 ಸ್ತಬ್ಧಚಿತ್ರಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು.