Mysuru Dasara 2022 | ಜಂಬೂ ಸವಾರಿ ಭದ್ರತೆಗೆ 5000 ಪೊಲೀಸರ ನಿಯೋಜನೆ
ಮೈಸೂರು : ವಿಶ್ವ ವಿಖ್ಯಾತ ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಶುರುವಾಗಿದೆ.
ಅಂಬಾರಿಯನ್ನು ಹೊತ್ತು ರಾಜಮಾರ್ಗದಲ್ಲಿ ಸಾಗಲು ಗಜಪಡೆ ಸಿದ್ಧವಾಗಿದೆ. ಈ ಬಾರಿ ಜಾನಪದ ತಂಡ, ಸ್ತಬ್ದ ಚಿತ್ರಗಳು ಹೆಚ್ಚು ಇರಲಿವೆ.
ಹೀಗಾಗಿ ಹೆಚ್ಚಿನ ಭದ್ರತೆ ಹಮ್ಮಿಕೊಳ್ಳಲಾಗಿದ್ದು, ಸುಮಾರು 5 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.
ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ನೇತೃತ್ವದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಮೈಸೂರು ನಗರದ 1255 ಪೊಲೀಸರು, ಹೊರ ಜಿಲ್ಲೆಯಿಂದ 3580 ಪೊಲೀಸರು, ಗೃಹ ರಕ್ಷಕ ದಳದ 650 ಸಿಬ್ಬಂದಿ ಇರಲಿದ್ದಾರೆ.
ಜೊತೆಗೆ ಮನೆ, ಖಾಸಗಿ ಸಂಸ್ಥೆಗಳು ಸೇರಿ 13 ಸಾವಿರ ಸಿಸಿ ಟಿವಿ ಕ್ಯಾಮೆತಾಗಳು ಹಾಗೂ ಅಂಬಾರಿ ಮಾರ್ಗಕ್ಕೆ ಪೊಲೀಸ್ ಇಲಾಖೆಯಿಂದ ಹೆಚ್ಚುವರಿ 59 ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ.

ಮಧ್ಯಾಹ್ನ 2.36 ರಿಂದ 2.50ರ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿ ಧ್ವಜಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪೂಜೆ ಸಲ್ಲಿಸಲಿದ್ದಾರೆ. ಜಂಬೂ ಸವಾರಿ ಮರೆವಣಿಗೆಗೆ ಚಾಲನೆ ನೀಡಲಿದ್ದಾರೆ.
ಸಂಜೆ 5.07ರಿಂದ 5.18ರವರೆಗೆ ಮಕರ ಲಗ್ನ ಮುಹೂರ್ತದಲ್ಲಿ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿ ವಿಗ್ರಹಕ್ಕೆ ಸಿಎಂ ಬೊಮ್ಮಾಯಿ ಪುಷ್ಪಾರ್ಚನೆ ಮಾಡಲಿದ್ದಾರೆ.
ಜಂಬೂ ಸವಾರಿ ಮೆರವಣಿಗೆಯಲ್ಲಿ 750 ಕೆಜಿ ತೂಕದ ಅಂಬಾರಿಯಲ್ಲಿ ಚಾಮುಂಡಿ ದೇವಿಯನ್ನ ಹೊತ್ತು ಆನೆ ಅಭಿಮನ್ಯು ಸಾಗಲಿದ್ದಾನೆ. ಅರಮನೆ ಆವರಣದಿಂದ ಬನ್ನಿ ಮಂಟಪದವರೆಗೆ ಮೆರವಣಿಗೆ ನಡೆಯಲಿದೆ.
ಈ ಬಾರಿ ಜಾನಪದ ತಂಡ, ಸ್ತಬ್ದ ಚಿತ್ರಗಳು ಹೆಚ್ಚು ಇರಲಿವೆ. ಹೀಗಾಗಿ ಜಂಬೂ ಸವಾರಿಯಲ್ಲಿ 9 ಆನೆಗಳು ಮಾತ್ರ ಭಾಗಿಯಾಗಲಿವೆ.