ಮೈಸೂರು ದಸರಾ–2026ರ ಮಹೋತ್ಸವಕ್ಕಾಗಿ ಗಜಪಡೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಗಿದೆ.
ಇಂದು ಮತ್ತಿಗೋಡು ಆನೆ ಶಿಬಿರ ಹಾಗೂ ದುಬಾರೆ ಆನೆ ಶಿಬಿರಗಳಲ್ಲಿ ಪಶುವೈದ್ಯರ ತಂಡವು 20ಕ್ಕೂ ಅಧಿಕ ಆನೆಗಳ ಸಮಗ್ರ ಆರೋಗ್ಯ ತಪಾಸಣೆ ನಡೆಸಿದೆ.
ಈ ಬಾರಿ ಮೊದಲ ಬಾರಿಗೆ ECG ಪರೀಕ್ಷೆ ನಡೆಸಲಾಗಿದ್ದು, ಆನೆಗಳ ರಕ್ತ ಮತ್ತು ಮಲದ ಮಾದರಿಗಳನ್ನು ಸಂಗ್ರಹಿಸಿ ವಿವಿಧ ಪ್ರಯೋಗಾಲಯಗಳಿಗೆ ಪರೀಕ್ಷೆಗಾಗಿ ಕಳುಹಿಸಲಾಗಿದೆ.
ಇದಲ್ಲದೆ, ಹೆಣ್ಣಾನೆಗಳಿಗೆ ಅಲ್ಟ್ರಾಸೌಂಡ್ ಮೂಲಕ ಗರ್ಭಧಾರಣೆ ಪರೀಕ್ಷೆ ನಡೆಸಲಾಗಿದೆ. ಈ ಆರೋಗ್ಯ ತಪಾಸಣೆಯ ವರದಿಗಳ ಆಧಾರದ ಮೇಲೆ ದಸರಾ ಗಜಪಡೆಗೆ ಅಂತಿಮವಾಗಿ ಆಯ್ಕೆಯಾಗುವ ಆನೆಗಳನ್ನು ನಿರ್ಧರಿಸಲಾಗುತ್ತದೆ.
ಈ ಪ್ರಕ್ರಿಯೆಯ ಉದ್ದೇಶ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳ ಆರೋಗ್ಯ, ಕ್ಷಮತೆ ಹಾಗೂ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.







