ADVERTISEMENT
Saturday, August 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

ಭರತನಹಳ್ಳಿ ಅಬ್ಬೇ ಹೋಗಿ ವರ್ಷ ಕಳೆದಿರಲಿಲ್ಲ ಈಗ ನಾ.ಸು ಭರತನಹಳ್ಳಿ ಮಾಸ್ತರ್‌ ಸಹ ಅವರ ಹಿಂದೆಯೇ ಹೋರಟರು; ವೈಕುಂಠ ಏಕಾದಶಿಯಂದು ದೇಹತ್ಯಾಗಗೈದ ನಾ.ಸು.ಭ

Shwetha by Shwetha
December 25, 2020
in Marjala Manthana, Newsbeat, ನ್ಯೂಸ್ ಬೀಟ್, ಮಾರ್ಜಲ ಮಂಥನ
Marjala manthana Bharathanahalli master
Share on FacebookShare on TwitterShare on WhatsappShare on Telegram

ಭರತನಹಳ್ಳಿ ಅಬ್ಬೇ ಹೋಗಿ ವರ್ಷ ಕಳೆದಿರಲಿಲ್ಲ ಈಗ ನಾ.ಸು ಭರತನಹಳ್ಳಿ ಮಾಸ್ತರ್‌ ಸಹ ಅವರ ಹಿಂದೆಯೇ ಹೋರಟರು; ವೈಕುಂಠ ಏಕಾದಶಿಯಂದು ದೇಹತ್ಯಾಗಗೈದ ನಾ.ಸು.ಭ Marjala manthana Bharathanahalli master

ಮಾಧ್ಯಮರಂಗ, ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಆರು ದಶಕಗಳಿಂದ ಕ್ರಿಯಾಶೀಲರಾಗಿದ್ದ ಹಿರಿಯ ಸಾಹಿತಿ ಅಂಕಣಕಾರ ಹಾಗೂ ಪತ್ರಕರ್ತ ನಾ.ಸು.ಭರತನಹಳ್ಳಿ ವೈಕುಂಠ ಏಕಾದಶಿಯಂದೇ ಸ್ವಗಸ್ಥರಾಗಿದ್ದಾರೆ. ಪ್ರಖರ ಆಧ್ಯಾತ್ಮ ಚಿಂತಕರೂ ಆಗಿದ್ದ 84 ವರ್ಷದ ಭರತನಹಳ್ಳಿ ಮೇಸ್ಟ್ರು ಇಂದು ಶುಕ್ರವಾರದ ದಿನ ವೈಕುಂಠವಾಸಿಗಳಾಗಿದ್ದಾರೆ. ಇದು ಉತ್ತರಕನ್ನಡ ಜಿಲ್ಲೆಯ ಸಾಂಸ್ಕೃತಿಕ ವಲಯಕ್ಕೆ ಆದ ಬಹು ದೊಡ್ಡ ನಷ್ಟ. ಇತ್ತೀಚೆಗಷ್ಟೆ ಪತ್ನಿಯನ್ನು ಕಳೆದುಕೊಂಡಿದ್ದ ನಾ.ಸು ಭರತನಹಳ್ಳಿ ಇಂದು ಇಹಲೋಕದ ವ್ಯಾಪಾರ ಮುಗಿಸಿಬಿಟ್ಟರು. Marjala manthana Bharathanahalli master
Marjala manthana Bharathanahalli master

Related posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

August 14, 2026
shravana-sampath-shukravara-pooja-vidhana

ಶ್ರಾವಣ ಶುಕ್ರವಾರ ಮಹಾಲಕ್ಷ್ಮಿ ಪೂಜೆ: ಸಂಪತ್ ಗೌರಿ ವ್ರತ ಆಚರಿಸುವುದು ಹೇಗೆ? ಇಲ್ಲಿದೆ ಪೂಜಾ ವಿಧಿ ಮತ್ತು ಕಥೆ

August 14, 2026

ಯಲ್ಲಾಪುರ ತಾಲೂಕಿನ ಭರತನಹಳ್ಳಿಯ ನಿವಾಸಿ ನಾ.ಸು.ಭ ಕೇವಲ ಸಾಹಿತಿ, ಪತ್ರಕರ್ತ ಮಾತ್ರವಲ್ಲದೇ ಪ್ರಕಾಶಕರಾಗಿಯೂ 60 ವರ್ಷಗಳಿಗಿಂತ ಹೆಚ್ಚು ವರ್ಷ ಸಾಹಿತ್ಯದ ಸೇವೆ ಮಾಡಿದವರು. ಸ್ವರ್ಣವಲ್ಲಿ ಶ್ರೀಗಳ ಮಾರ್ಗದರ್ಶನದ ಸ್ವರ್ಣವಲ್ಲೀ ಪ್ರಭಾ ಸಂಪಾದಕರಾಗಿ ಸುದೀರ್ಘ 21 ವರ್ಷ ಪತ್ರಿಕೆ ಮುನ್ನಡೆಸಿದ ಹೆಗ್ಗಳಿಕೆ ಅವರದ್ದು. ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಅವರು ಕೈಯಾಡಿಸಿದವರು. ಕಥೆ, ಕಾದಂಬರಿ, ಕವನ, ಪ್ರವಾಸಿ ಕಥನ, ನಾಟಕ, ಮಕ್ಕಳ ಸಾಹಿತ್ಯ, ಅನುವಾದ, ಅಂಕಣ ಬರಹ ಸೇರಿದಂತೆ 26 ಕ್ಕೂ ಹೆಚ್ಚು ಪುಸ್ತಕಗಳನ್ನು ನಾ.ಸು.ಭ ಬರೆದಿದ್ದಾರೆ. ವಿಚಾರ-ವಿಮರ್ಶೆ ಲೇಖನಗಳಂತಹ ಗಂಭೀರ ಸಾಹಿತ್ಯದ 16 ಪುಸ್ತಕಗಳೂ ನಾ.ಸು ಅವರ ಲೇಖನಿಯಿಂದ ರಚಿತವಾಗಲ್ಪಟ್ಟಿದೆ.

ಪ್ರತಿಷ್ಟಿತ ಪ್ರಜಾವಾಣಿ, ಡೆಕ್ಕನ್‌ ಹೆರಾಲ್ಡ್‌ ಪತ್ರಿಕೆಗಳ ವರದಿಗಾರರಾಗಿ, ಹಲವು ಪತ್ರಿಕೆಗಳಿಗೆ ಅಂಕಣಕಾರರಾಗಿ, ಆಕಾಶವಾಣಿಯ ಭಾಷಣಕಾರರಾಗಿ, ಮಾಧ್ಯಮ ಮತ್ತು ಸಾಂಸ್ಕೃತಿಕ ಕ್ಷೇತ್ರದ ಕೃಷಿ ಮಾಡಿದವರು ನಾ.ಸು ಮಾಸ್ತರ್. ಸನ್ಮತಿ ಎಂಬುವುದು ಅವರ ಜೀವನದ ಮಹತ್ವದ ಸಾಧನೆಯನ್ನು ಪ್ರಸ್ತುತ ಪಡಿಸುವ ಅಭಿನಂದನಾ ಗ್ರಂಥ. ಪ್ರೊಫೆಸರ್‌ ಜಿ.ಟಿ ಭಟ್ಟ ಹಾಸಣಗಿಯವರು ಅವ್ಯಾಹ ಪ್ರೀತಿ ಎನ್ನುವ ನಾ.ಸು ಭರತಹಳ್ಳಿವರ ಕುರಿತಾದ ಆಪ್ತ ಬರಹಗಳ ಪುಸ್ತಕವನ್ನು ಬರೆದಿದ್ದಾರೆ. ನಾ.ಸು.ಭ ಅವರು ಸಿದ್ಧಾಪುರದಲ್ಲಿ ನಡೆದಿದ್ದ 14ನೇ ಉತ್ತರ ಕನ್ನಡ ಜಿಲ್ಲೆಯ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿದ್ದರು.
Marjala manthana Bharathanahalli master

ಮಾಧ್ಯಮ ಅಕಾಡೆಮಿ, ಕರ್ನಾಟಕ ಶ್ರೀ, ಕಯ್ಯಾರ ಕಿಂಞಣ್ಣ ರೈ ಪ್ರಶಸ್ತಿ, ಕರ್ಕಿ ವೆಂಕಟರಮಣ ಶಾಸ್ತ್ರಿ ಸೂರಿ ಪ್ರಶಸ್ತಿ, ರಾಜ್ಯ ಸಾಹಿತ್ಯ ಅಕಾಡೆಮಿಯ ಗ್ರಂಥ ಪ್ರಶಸ್ತಿ, ಸಾಹಿತ್ಯ ಅಕಾಡೆಮಿಯ ಸುವರ್ಣ ಗೌರವ ಸೇರಿದಂತೆ ಹತ್ತು ಹಲವು ಗೌರವಗಳು ನಾ.ಸು ಭರತನಹಳ್ಳಿಯವರನ್ನು ಅರಸಿಕೊಂಡು ಬಂದಿತ್ತು. ಇತ್ತೀಚೆಗೆ ಖ್ಯಾತ ಪತ್ರಕರ್ತ ರವಿ ಬೆಳಗೆರೆಯವರ ದೇಹಾಂತ್ಯವಾದ ಸಂಧರ್ಭದಲ್ಲಿ ಅವರೊಂದಿಗಿನ ಒಡನಾಟವನ್ನು ಸ್ಮರಿಸಿಕೊಂಡು ಮಗುವಿನಂತೆ ಅತ್ತಿದ್ದ ಸ್ನೇಹಜೀವಿ ಅವರು. ಸರಳ, ಸಜ್ಜನ, ಸ್ನೇಹಮಯಿ ವ್ಯಕ್ತಿತ್ವದ ವಿದ್ವಾಂಸ ನಾ.ಸು ಭ ತಮ್ಮ ಅಪಾರ ಆತ್ಮೀಯರನ್ನು ಅಭಿಮಾನಿಗಳನ್ನು ಅಗಲಿದ್ದಾರೆ.

-ವಿಭಾ (ವಿಶ್ವಾಸ್ ಭಾರದ್ವಾಜ್)
ಮಾರ್ಜಾಲ ಮಂಥನ ಕಾಲಂ

ಸಾಕ್ಷಾಟಿವಿ ಸುದ್ದಿ ಸಂಪಾದಕ ವಿಶ್ವಾಸ್ ಭಾರದ್ವಾಜ್ ಅವರ ಕಿರು ಪರಿಚಯ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Bharathanahalli mastermarjala manthanaಮಾರ್ಜಾಲ ಮಂಥನವಿಶ್ವಾಸ್ ಭಾರದ್ವಾಜ್
ShareTweetSendShare
Join us on:

Related Posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

by admin
August 14, 2026
0

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ '99 ಸ್ಟೋರ್'! ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್‌ನಲ್ಲಿ ಊಟ ಆರ್ಡರ್...

shravana-sampath-shukravara-pooja-vidhana

ಶ್ರಾವಣ ಶುಕ್ರವಾರ ಮಹಾಲಕ್ಷ್ಮಿ ಪೂಜೆ: ಸಂಪತ್ ಗೌರಿ ವ್ರತ ಆಚರಿಸುವುದು ಹೇಗೆ? ಇಲ್ಲಿದೆ ಪೂಜಾ ವಿಧಿ ಮತ್ತು ಕಥೆ

by admin
August 14, 2026
0

ಶ್ರಾವಣ ಮಾಸದಲ್ಲಿ ಐದು ಶುಕ್ರವಾರ ಬಂದರೆ ಶ್ರೇಷ್ಠ . ಸಂಜೆಯ ಹೊತ್ತು ಮಹಾಲಕ್ಷ್ಮಿಯನ್ನು ಎಲ್ಲ ಮುತ್ತೈದೆಯರು ನಾನಾ ವಿಧವಾಗಿ ಪೂಜೆ ಮಾಡಿ ಆನಂದಿಸುತ್ತಾರೆ ಅದರಲ್ಲೂ ವಿಶೇಷವಾಗಿ ಸಂಪತ್...

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

by Shwetha
August 14, 2026
0

ಬೆಂಗಳೂರು: ರಾಜ್ಯದ ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಅತಿ ಮುಖ್ಯವಾದ ಸೂಚನೆಯೊಂದನ್ನು ನೀಡಿದೆ. ರೇಷನ್ ಕಾರ್ಡ್‌ನಲ್ಲಿ ಹೆಸರಿರುವ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

by Shwetha
August 14, 2026
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟ ದರ್ಶನ್ ಅವರು ಇದೀಗ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್‌ರನ್ನು ಮಾಫಿ ಸಾಕ್ಷಿ...

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

by Shwetha
August 14, 2026
0

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಜೈಲಿನ ಸೆಲ್‌ನಲ್ಲಿ ಆರಾಮವಾಗಿ ಕುಳಿತು ಮೊಬೈಲ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram