ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಂಗಶಿಕ್ಷಣವೂ ಅಂಕಗಳಿಕೆಯ ಪದ್ದತಿಗೆ ಒಳಪಟ್ಟಾಗಲೇ ಅದರ ಪ್ರಾಮುಖ್ಯತೆ ಹೆಚ್ಚಾಗಲು ಸಾಧ್ಯ: ಟಿ ಎಸ್‌ ನಾಗಾಭರಣ

Mahesh M Dhandu by Mahesh M Dhandu
June 22, 2021
in Newsbeat, State, ರಾಜ್ಯ
nagabharana
Share on FacebookShare on TwitterShare on WhatsappShare on Telegram

ರಂಗಶಿಕ್ಷಣವೂ ಅಂಕಗಳಿಕೆಯ ಪದ್ದತಿಗೆ ಒಳಪಟ್ಟಾಗಲೇ ಅದರ ಪ್ರಾಮುಖ್ಯತೆ ಹೆಚ್ಚಾಗಲು ಸಾಧ್ಯ: ಟಿ ಎಸ್‌ ನಾಗಾಭರಣ

ಬೆಂಗಳೂರು : ಪದವಿ ತರಗತಿಗಳಲ್ಲಿ ರಂಗಶಿಕ್ಷಣದ ಶೈಕ್ಷಣಿಕ ಮಹತ್ವ ಬಹಳ ಹೆಚ್ಚಾಗಿದೆ. ಆದರೆ ಇದಕ್ಕೆ ಹೆಚ್ಚಿನ ಪ್ರಾಮುಖ್ಯತೆ ದೊರೆಯಬೇಕಾದರೆ ಅದನ್ನು ಅಂಕಗಳಿಕೆಯ ಪದ್ದತಿಗೆ ಅಳವಡಿಸುವುದು ಅಗತ್ಯ ಎಂದು ಹಿರಿಯ ರಂಗಕರ್ಮಿ ಹಾಗೂ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್‌ ನಾಗಾಭರಣ ಅಭಿಪ್ರಾಯಪಟ್ಟರು.

Related posts

shilpa-shaila-commonwealth-games-bronze-medal-karnataka-para-athlete

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ.

July 28, 2026
vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

July 28, 2026

ಇಂದು ವೆಬಿನಾರ್‌ ಮೂಲಕ ಕಾಲೇಜು ಶಿಕ್ಷಣ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಜಯನಗರ, ಸುರಾನಾ ಕಾಲೇಜು ಸಂಯುಕ್ತಾಶ್ರಯದಲ್ಲಿ ಹಾಗೂ ಎರಡೂ ಕಾಲೇಜುಗಳ ಐ.ಕ್ಯೂ.ಎ.ಸಿ ಸಮಿತಿಯ ಸಹಕಾರ ಮತ್ತು ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಪ್ರದರ್ಶನ ಕಲಾ ವಿಭಾಗ ಇವರ ಸಹಯೋಗದಲ್ಲಿ ಆಯೋಜಿಸಲಾಗಿರುವ ಪದವಿ ತರಗತಿಗಳಲ್ಲಿ ರಂಗ ಶಿಕ್ಷಣದ ಮಹತ್ವ (ನಾಟಕ ಪಠ್ಯ – ಪ್ರದರ್ಶನ – ಭೋಧನೆ) ಏಳು ದಿನಗಳ ರಾಷ್ಟಮಟ್ಟದ ಎಫ್‌ಡಿಪಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

nagabharana

ಪದವಿ ಶಿಕ್ಷಣದಲ್ಲಿ ಅನ್ವಯಿಕ ರಂಗಪ್ರಕಾರವನ್ನು ಅಳವಡಿಸಿಕೊಳ್ಳುವ ಬಗ್ಗೆ ಹೆಚ್ಚಿನ ಚರ್ಚೆ ನಡೆಯಬೇಕಾಗಿದೆ. ಏಕೆಂದರೆ ರಂಗಶಿಕ್ಷಣವನ್ನು ನಾವು ಶಿಕ್ಷಣದ ಶಿಸ್ತಿಗೆ ಅಳವಡಿಸಿಕೊಳ್ಳಬೇಕಾದರೆ ಅದು ಅಗತ್ಯವಾಗಿದೆ. ಆದ್ಯತೆಯ ಶಿಕ್ಷಣ ಪದ್ದತಿಯಲ್ಲಿ ಬೌದ್ದಿಕ ಗ್ರಹಿಕೆಯ ಹೆಚ್ಚಾಗಲು ಇಂತಹ ವಿಷಯಗಳ ಪಠಣ ಅವಶ್ಯಕವಾಗಿದೆ. ರಂಗಭೂಮಿ ಎಂದರೆ ಕೇವಲ ಚಳುವಳಿ ಎಂದಲ್ಲ. ಅದೊಂದು ಪ್ರಭೇದ ಅಷ್ಟೇ. ಆದರೆ, ಮನೋವಿಕಾಸ ಎನ್ನುವುದು ಮತ್ತು ಸಾಂಸ್ಕೃತಿಕ ವಲಯದ ಸೃಷ್ಟಿ ಬಹಳ ದೊಡ್ಡ ಕರ್ತವ್ಯವಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಬರುವ ಹತ್ತು ಹಲವು ಯೋಜನೆಗಳನ್ನು ಅರ್ಥಮಾಡಿಕೊಳ್ಳುವುದು ಬಹಳ ಅಗತ್ಯವಿದೆ. ಅದರಲ್ಲಿ ಏಕರೂಪ ಪಠ್ಯಕ್ರಮ ಇಲ್ಲ. ಸೃಜನಾತ್ಮಕತೆ ಇದೆ, ಭಿನ್ನತೆ ಇದೆ ಅಲ್ಲದೆ ಹೊಸತನದ ಹಾದಿಯನ್ನು ಕಂಡುಕೊಳ್ಳಲು ಅವಕಾಶ ಇದೆ. ಭಾಷೆಯನ್ನು ಬೆಳೆಸುವ ಬಗ್ಗೆ, ಭಾಷೆಯ ನಿರಂತರತೆಯನ್ನು ಕಾಪಾಡುವಲ್ಲಿ, ಸಂಸ್ಕೃತಿಯ ಬೇರುಗಳನ್ನು ಗಟ್ಟಿಗೊಳಿಸುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು ರಂಗಶಿಕ್ಷಣ ಪ್ರಮುಖ ಪಾತ್ರವಹಿಸಲಿದೆ. ಅಲ್ಲದೆ, ಪದವಿ ತರಗತಿಗಳಲ್ಲಿ ರಂಗಶಿಕ್ಷಣದ ಶೈಕ್ಷಣಿಕ ಮಹತ್ವ ಬಹಳ ಹೆಚ್ಚಾಗಿದೆ. ಆದರೆ ಇದಕ್ಕೆ ಹೆಚ್ಚಿನ ಪ್ರಾಮುಖ್ಯತೆ ದೊರೆಯಬೇಕಾದರೆ ಅದನ್ನು ಅಂಕಗಳಿಕೆಯ ಪದ್ದತಿಗೆ ಅಳವಡಿಸುವುದು ಅಗತ್ಯ ಎನ್ನುವುದು ನಮ್ಮ ಒತ್ತಾಯವಾಗಿದೆ ಎಂದು ಹೇಳಿದರು.

ಕರ್ನಾಟಕ ನಾಟಕ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷರಾದ ಜೆ. ಲೋಕೇಶ್‌ ಮಾತನಾಡಿ, ಪದವಿ ತರಗತಿಗಳಲ್ಲಿ ಯಾವ ರೀತಿಯ ನಾಟಕಗಳನ್ನು ಪಠ್ಯಪುಸ್ತಕಗಳನ್ನು ಅಳವಡಿಸಬೇಕು ಎನ್ನುವುದಕ್ಕೆ ಸಮಿತಿಗಳು ಹೆಚ್ಚಿನ ಒತ್ತು ನೀಡಬೇಕು. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಅನುವು ಮಾಡಿಕೊಡುವಂತಹ ರಂಗ ಚಟುವಟಿಕೆಗಳು ಪಠ್ಯದಲ್ಲಿ ಅಳವಡಿಕೆಯಾಗಬೇಕು. ಅಲ್ಲದೆ, ಆ ಚಟುವಟಿಕೆಗಳನ್ನು ಅಂಕಗಳಿಕೆಯ ಪರಿಧಿಯಲ್ಲಿ ತಂದಲ್ಲಿ ಜನರು ಅದರಲ್ಲಿ ತೊಡಗಿಕೊಳ್ಳುತ್ತಾರೆ ಎಂದು ಅಬಿಪ್ರಾಯಪಟ್ಟರು.

ಕಾರ್ಯಕ್ರಮದ ನಿರ್ವಹಣೆಯನ್ನು ಸಂಯೋಜಕರಾದ ಸುರಾನಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ವತ್ಸಲಾ ಮೋಹನ್‌ ನಡೆಸಿಕೊಟ್ಟರು. ಡಾ. ರಾಜಶೇಖರಯ್ಯ ಮಠಪತಿ, ಸಹಾಯಕ ಪ್ರಧ್ಯಾಪಕರು ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಜಯನಗರ, ಬೆಂ.ವಿ.ವಿ ಜ್ಞಾನಭಾರತಿ ಕಲಾವಿಭಾಗದ ನಿರ್ದೇಶಕ ಪ್ರದರ್ಶನ, ಡಾ ಹಂಸಿನಿ ನಾಗೇಂದ್ರ. ಸುರಾನಾ ಕಾಲೇಜು ಸೌತ್‌ ಎಂಡ್‌ ರಸ್ತೆ ಪ್ರಾಂಶುಪಾಲೆ ಡಾ ಭವಾನಿ ಎಂ ಆರ್‌, ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಜಯನಗರದ ಪ್ರಾಂಶುಪಾಲರಾದ ಡಾ ಬಿ ಚಂದ್ರಶೇಖರ್‌, ಕಾರ್ಯಕ್ರಮ ಸಂಯೋಜಕರಲ್ಲೊಬ್ಬರಾದ ಡಾ. ಬಿ.ಆರ್‌. ರಘುನಂದನ್‌ (ಬೇಲೂರು ರಘುನಂದನ್) ವಂದನಾರ್ಪಣೆ ಮಾಡಿದರು. ರಾಜ್ಯ ಮತ್ತು ದೇಶಧ ವಿವಿಧ ಭಾಗಗಳ ಪ್ರಾಧ್ಯಾಪಕರುಗಳು,ರಂಗಾಸಕ್ತರು, ರಂಗನಟರು, ರಂಗಕರ್ಮಿಗಳು ಪಾಲ್ಗೊಂಡಿದ್ದರು.

Tags: KannadakarnatakaTS Nagabharana
ShareTweetSendShare
Join us on:

Related Posts

shilpa-shaila-commonwealth-games-bronze-medal-karnataka-para-athlete

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ.

by admin
July 28, 2026
0

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ..ಗ್ಲಾಸ್ಗೋ ಪೋಡಿಯಂನಲ್ಲಿ ಕರುನಾಡಿನ ರೈತನ ಮಗಳ...

vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

by admin
July 28, 2026
0

ವಾಸ್ತು ಶಾಸ್ತ್ರ –  ದಿಕ್ಕು ನಿರ್ದೇಶನಗಳು, ಬ್ರಹ್ಮಸ್ಥಾನ (ಮಧ್ಯಭಾಗ) ತಟಸ್ಥ ಶಕ್ತಿಯ ಕೇಂದ್ರ (Neutral Energy Zone) ಮನೆಯ ಮಧ್ಯಭಾಗವನ್ನು ತೆರವು ಮತ್ತು ಸ್ವಚ್ಛವಾಗಿಡುವುದು ಉತ್ತಮ. ಶ್ರೀ ಕ್ಷೇತ್ರ...

guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

by admin
July 28, 2026
0

ಬುಧವಾರ ಜುಲೈ 29ರಂದು ಗುರು ಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಆಷಾಢ ಮಾಸದ ಹುಣ್ಣಿಮೆಯನ್ನು ಗುರು ಪೂರ್ಣಿಮೆ ಎನ್ನಲಾಗುವುದು ಈ ಮಂಗಳಕರ ದಿನ ಜ್ಯೋತಿಷ್ಯದಲ್ಲಿ ತುಂಬಾ ವಿಶೇಷವಾಗಿದೆ. ಯಾಕೆಂದರೆ ಈ...

rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

by admin
July 28, 2026
0

ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..! ಅವನು ಶಾಲೆಗೆ ಹೋಗಿ ಓದಿದ್ದು ಬರೀ 8ನೇ...

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

by Shwetha
July 28, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ಈ ಕುರಿತು ಚರ್ಚೆಗಳು ಜೋರಾಗಿವೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram