nalin kumar kateel
ರಾಯಚೂರು: ಮೈತ್ರಿ ಸರ್ಕಾರ ಕೆಡವಿದ್ದು, ಬಿಜೆಪಿ ಅಲ್ಲ, ಮಾಜಿ ಸಿಎಂ ಸಿದ್ದರಾಮಯ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿರುವ ಅವರು ಜನಾದೇಶಕ್ಕೆ ವಿರುದ್ಧವಾಗಿ ರಾತ್ರೋ ರಾತ್ರಿ ಪ್ರೇಮ ವಿವಾಹ ಮಾಡಿಕೊಂಡ ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರ ರಚನೆ ಮಾಡಿದರು. ಆದರೆ, ಇದು ಸಿದ್ದರಾಮಯ್ಯಗೆ ಬೇಕಾಗಿರಲಿಲ್ಲ. ಹೀಗಾಗಿ ಕುಮಾರಸ್ವಾಮಿ ಸರ್ಕಾರವನ್ನು ಕೆಡವಿದರು ಎಂದು ಹೇಳಿಕೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಟೀಕಾಪ್ರಹಾರ ಮುಂದುವರೆಸಿದ ಯತ್ನಾಳ..!
ಅಲ್ಲದೇ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ರಾಜ್ಯದಲ್ಲಿ 24 ಹಿಂದುಗಳ ಕೊಲೆಯಾಯಿತು. ಟಿಪ್ಪು ಜಯಂತಿ ಆಚರಣೆ ಜಾರಿಗೆ ತರುವ ಮೂಲಕ ಹಿಂದೂ ಮುಸ್ಲಿಂ ಸಮುದಾಯದಲ್ಲಿ ಜಗಳ ಹಚ್ಚುವ ಕೆಲಸ ಮಾಡಿದರು ಎಂದು ಸಿದ್ದರಾಮಯ್ಯ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

nalin kumar kateel
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel