ಕಾಂಗ್ರೆಸಿಗರ ವ್ಯಕ್ತಿತ್ವದಲ್ಲಿಯೇ ರೌಡಿತನ ಕಾಣಿಸುತ್ತೆ : ನಳಿನ್ ಕುಮಾರ್
ಮಂಗಳೂರು : ಕಾಂಗ್ರೆಸಿಗರ ವ್ಯಕ್ತಿತ್ವದಲ್ಲಿಯೇ ರೌಡಿತನ ಕಾಣಿಸುತ್ತದೆ. ಅವರ ಇತಿಹಾಸ ತೆಗೆದು ನೋಡಿದರೆ, ರೌಡಿ ಮಾತ್ರವಲ್ಲ ಈ ದೇಶದಲ್ಲಿ ಎಲ್ಲಾ ಕೆಟ್ಟಚಾಳಿಗಳಿಗೆ ಪ್ರೇರಣೆ ಅವರೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.
ಬೆಂಬಲಿಗನಿಗೆ ಡಿಕೆಶಿವಕುಮಾರ್ ಕಪಾಲಮೋಕ್ಷ ವಿಚಾರವಾಗಿ ಮಾತನಾಡಿದ ಅವರು, ದೇವಾಲಯದ ಪ್ರತೀಕದಂತಿರುವ ವಿಧಾನಸೌಧಕ್ಕೆ ಅಗೌರವ ತೋರಿರುವ ಕಾಂಗ್ರೆಸಿಗರು, ಕಾರ್ಯಕರ್ತರಿಗೆ ಗೌರವ ತೋರುತ್ತಾರಾ ಎಂದು ಪ್ರಶ್ನಿಸಿದರು.
ರಾಜಕಾರಣಿಗಳು ಯಾರೇ ಆಗಲಿ ಎಲ್ಲೆ ಮೀರಿ ವರ್ತಿಸಬಾರದು. ಇದು ಸರಿಯಾದ ನಡತೆಯಲ್ಲ. ಕಾಂಗ್ರೆಸಿಗರ ಸಂಸ್ಕøತಿಯನ್ನು ಇದು ಬಿಂಬಿಸುತ್ತದೆ.
ಕಾಂಗ್ರೆಸಿಗರು ಹಲ್ಲೆ ಮಾಡಿರೋದು ಇದು ಮೊದಲೇನಲ್ಲ. ವಿಧಾನಸೌಧಕ್ಕೆ ಸಿದ್ದರಾಮಯ್ಯ ಹೇಗೆ ಪ್ರವೇಶಿಸಿದ್ದಾರೆಂದು ಎಲ್ಲರಿಗೆ ಗೊತ್ತಿದೆ. ಕೈಚಾಚಿ, ಯುದ್ಧಕ್ಕೆ ಕರೆದು, ತೊಡೆತಟ್ಟಿ ಒಳಹೊಕ್ಕಿದ್ದಾರೆ ಎಂದು ಕಿಡಿಕಾರಿದರು.
ಕಾಂಗ್ರೆಸಿಗರ ವ್ಯಕ್ತಿತ್ವದಲ್ಲಿಯೇ ರೌಡಿತನ ಕಾಣಿಸುತ್ತದೆ ಎಂದು ದೂರಿದ ಕಟೀಲ್, ಕಾಂಗ್ರೆಸಿಗರ ಇತಿಹಾಸ ತೆಗೆದು ನೋಡಿದರೆ, ರೌಡಿ ಮಾತ್ರವಲ್ಲ ಈ ದೇಶದಲ್ಲಿ ಎಲ್ಲಾ ಕೆಟ್ಟಚಾಳಿಗಳಿಗೆ ಪ್ರೇರಣೆ ಅವರೇ ಟೀಸಿದರು.