ನಳಿನ್ ಕುಮಾರ್ ಕಟೀಲ್ ಓರ್ವ ಭಯೋತ್ಪಾದಕ : ಸಿದ್ದರಾಮಯ್ಯ Nalin Kumar Kateel saaksha tv
ಚಿತ್ರದುರ್ಗ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಓರ್ವ ಭಯೋತ್ಪಾದಕ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ಇಂದು ಚಿತ್ರದುರ್ಗದಲ್ಲಿ ವಿಧಾನಪರಿಷತ್ ಚುನಾವಣಾ ಪ್ರಚಾರ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ಭಯೋತ್ಪಾದನೆಗೆ ಬಡ್ತಿ ನೀಡುತ್ತದೆ ಎಂಬ ಕಟೀಲ್ ಹೇಳಿಕೆಗೆ ತಿರುಗೇಟು ನೀಡಿದರು.
ನಳಿನ್ ಕುಮಾರ್ ಕಟೀಲ್ ಓರ್ವ ಭಯೋತ್ಪಾದಕ. ಅವರ ಮಾತಿಗೆ ಮೂರು ಕಾಸಿನ ಕಿಮ್ಮತ್ತಿಲ್ಲ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಇದೇ ವೇಳೆ ಮುಂದಿನ ಬಾರಿಯೂ ನಾವೇ ಅಧಿಕಾರಕ್ಕೆ ಬರ್ತಿವಿ ಎಂಬ ಬಿಎಸ್ ವೈ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅವರ ಜೇಬಿನಲ್ಲಿ ಮತಗಳು ಇದ್ದಾವಾ..? ಎಂದು ಪ್ರಶ್ನಿಸಿದರು.
ಅಲ್ಲದೇ ರಾಜ್ಯದ ಜನ ಬಿಜೆಪಿಯನ್ನು ಕಿತ್ತೊಗೆಯಲ್ಲಿದ್ದಾರೆ ಎಂದರು.