ADVERTISEMENT
Thursday, December 11, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Namma clinics : ಜನವರಿ ಅಂತ್ಯಕ್ಕೆ ಎಲ್ಲಾ 438 ನಮ್ಮ ಕ್ಲಿನಿಕ್‌ಗಳು ಕಾರ್ಯಾರಂಭ: ಡಾ.ಕೆ.ಸುಧಾಕರ್‌

ಹೊಸ ವರ್ಷದ ಜನವರಿ ಅಂತ್ಯಕ್ಕೆ ಎಲ್ಲಾ 438 ʼನಮ್ಮ ಕ್ಲಿನಿಕ್‌ʼಗಳು ಕಾರ್ಯಾರಂಭವಾಗಲಿವೆ. ಹಾಗೆಯೇ ಮಹಿಳೆಯರಿಗೆ ಮೀಸಲಾದ ʼಆಯುಷ್ಮತಿʼ ಕ್ಲಿನಿಕ್‌ಗಳನ್ನೂ ಜನವರಿಯಲ್ಲೇ ಉದ್ಘಾಟಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

Naveen Kumar B C by Naveen Kumar B C
December 14, 2022
in Newsbeat, Health, ಆರೋಗ್ಯ
K sudhakar Namma clinics
Share on FacebookShare on TwitterShare on WhatsappShare on Telegram

ಜನವರಿ ಅಂತ್ಯಕ್ಕೆ ಎಲ್ಲಾ 438 ನಮ್ಮ ಕ್ಲಿನಿಕ್‌ಗಳು ಕಾರ್ಯಾರಂಭ: ಡಾ.ಕೆ.ಸುಧಾಕರ್‌

 

Related posts

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

December 11, 2025
ಕರ್ನಾಟಕ ಭೂ ಕಂದಾಯ ಕಾಯ್ದೆ 1964: ಪ್ರಮುಖ ತಿದ್ದುಪಡಿ ಮಂಡನೆಗೆ ರಾಜ್ಯ ಸರ್ಕಾರ ಸಜ್ಜು

ಕರ್ನಾಟಕ ಭೂ ಕಂದಾಯ ಕಾಯ್ದೆ 1964: ಪ್ರಮುಖ ತಿದ್ದುಪಡಿ ಮಂಡನೆಗೆ ರಾಜ್ಯ ಸರ್ಕಾರ ಸಜ್ಜು

December 11, 2025

ಹೊಸ ವರ್ಷದ ಜನವರಿ ಅಂತ್ಯಕ್ಕೆ ಎಲ್ಲಾ 438 ʼನಮ್ಮ ಕ್ಲಿನಿಕ್‌ʼಗಳು ಕಾರ್ಯಾರಂಭವಾಗಲಿವೆ. ಹಾಗೆಯೇ ಮಹಿಳೆಯರಿಗೆ ಮೀಸಲಾದ ʼಆಯುಷ್ಮತಿʼ ಕ್ಲಿನಿಕ್‌ಗಳನ್ನೂ ಜನವರಿಯಲ್ಲೇ ಉದ್ಘಾಟಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

 

ಹುಬ್ಬಳ್ಳಿಯಲ್ಲಿ ಮೊದಲ ʼನಮ್ಮ ಕ್ಲಿನಿಕ್‌ʼಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಚಿವರು, ನಮ್ಮ ಕ್ಲಿನಿಕ್‌ನಲ್ಲಿ ಲ್ಯಾಬ್‌ ಪರೀಕ್ಷೆ, ತಪಾಸಣೆ, ಔಷಧಿ ಸಂಪೂರ್ಣ ಉಚಿತವಾಗಿದ್ದು, ಇದು ಆರೋಗ್ಯ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆ ತರುವ ಹೆಜ್ಜೆಯಾಗಿದೆ. ಸದ್ಯ 114 ಕ್ಲಿನಿಕ್‌ಗಳನ್ನು ಉದ್ಘಾಟಿಸಲಾಗುತ್ತಿದೆ. ಇನ್ನು ಮುಂದೆ ಪ್ರತಿ ವಾರಕ್ಕೆ 100 ರಂತೆ ಕ್ಲಿನಿಕ್‌ಗಳನ್ನು ಉದ್ಘಾಟನೆ ಮಾಡಿ, ಜನವರಿ ಅಂತ್ಯಕ್ಕೆ ಎಲ್ಲಾ 438 ಕ್ಲಿನಿಕ್‌ಗಳನ್ನು ಆರಂಭಿಸಲಾಗುವುದು. ಹಾಗೆಯೇ, ಆಯುಷ್ಮತಿ ಕ್ಲಿನಿಕ್‌ ಕೂಡ ಆರಂಭವಾಗಲಿದೆ. ಇದು ಮಹಿಳೆಯರಿಗೆ ನಮ್ಮ ಸರ್ಕಾರ ನೀಡುತ್ತಿರುವ ಹೊಸ ವರ್ಷದ ಕೊಡುಗೆ ಎಂದು ತಿಳಿಸಿದರು.

 

ಮನೆ ಬಾಗಿಲಿಗೆ ಔಷಧಿ

 

ರಾಜ್ಯದಲ್ಲಿ 7 ಸಾವಿರಕ್ಕೂ ಅಧಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ಈಗಾಗಲೇ ಆರಂಭಿಸಿದ್ದು, ಇಲ್ಲಿ 30 ವರ್ಷ ವಯಸ್ಸು ಮೇಲ್ಪಟ್ಟ ಎಲ್ಲರೂ ವರ್ಷಕ್ಕೆ ಒಮ್ಮೆ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಭಾರತ ಈಗ ಮಧುಮೇಹದ ಕೇಂದ್ರವಾಗಿದ್ದು, ಇಂತಹ ಅಸಾಂಕ್ರಾಮಿಕ ರೋಗಗಳ ಪತ್ತೆ ಅಗತ್ಯವಿದೆ. ಇದಕ್ಕಾಗಿ ಕಳೆದ ಒಂದು ವರ್ಷದಲ್ಲಿ ಈ ಕೇಂದ್ರಗಳಲ್ಲಿ ಶೇ.60 ರಷ್ಟು ಜನರನ್ನು ತಪಾಸಣೆ ಮಾಡಿದ್ದು, ವಿವಿಧ ರೋಗಗಳಿಗೆ ಉಚಿತ ಔಷಧಿ ನೀಡಲಾಗುತ್ತಿದೆ. ಜನವರಿ ತಿಂಗಳಿಂದ ಮಧುಮೇಹ, ಬಿಪಿ, ಕ್ಷಯ ಮೊದಲಾದ ರೋಗಗಳಿಗೆ ಔಷಧಿಯನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

 

ಇತಿಹಾಸದಲ್ಲಿ ಯಾವ ಸರ್ಕಾರವೂ ಒಂದೇ ಬಾರಿಗೆ 114 ಕ್ಲಿನಿಕ್‌ಗಳನ್ನು ಉದ್ಘಾಟನೆ ಮಾಡಿಲ್ಲ. ಇಂದು ನಮ್ಮ ಸರ್ಕಾರದ ಮೂಲಕ ಸಾರ್ವಕಾಲಿಕ ದಾಖಲೆಯಾಗಿದೆ. ಸಾಮಾನ್ಯ ಜನರ ಮುಖ್ಯಮಂತ್ರಿಯಾಗಿರುವ, ʼಕಾಮನ್‌ ಮ್ಯಾನ್‌ʼ ಬಸವರಾಜ ಬೊಮ್ಮಾಯಿ ಅವರಿಂದ ʼನಮ್ಮ ಕ್ಲಿನಿಕ್‌ʼಗಳು ಉದ್ಘಾಟನೆಯಾಗಿವೆ ಎಂದರು.

 

ನಗರಗಳೆಂದರೆ ಶ್ರೀಮಂತರೇ ಇರುವ ಪ್ರದೇಶ ಎಂಬ ತಪ್ಪು ಕಲ್ಪನೆ ಇದೆ. ನಗರಗಳಲ್ಲಿರುವ ಬಡವರು, ಕೂಲಿ ಕಾರ್ಮಿಕರು, ವಲಸೆ ಬಂದವರು, ಕೊಳೆಗೇರಿ ನಿವಾಸಿಗಳ ಆರೋಗ್ಯ ರಕ್ಷಣೆಗಾಗಿ ನಮ್ಮ ಕ್ಲಿನಿಕ್‌ ಆರಂಭಿಸಲಾಗಿದೆ. ಇಂದು ಮೊದಲ ನಮ್ಮ ಕ್ಲಿನಿಕ್‌ನ್ನು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಉದ್ಘಾಟಿಸುತ್ತಿರುವುದು ವಿಶೇಷವಾಗಿದೆ. ಒಟ್ಟು 114 ಕ್ಲಿನಿಕ್‌ಗಳನ್ನು ವಿವಿಧ ಜಿಲ್ಲೆಗಳಲ್ಲಿ ಏಕ ಕಾಲಕ್ಕೆ ಉದ್ಘಾಟಿಸಲಾಗುತ್ತಿದೆ ಎಂದು ತಿಳಿಸಿದರು.

 

ಒಂದು ಕ್ಲಿನಿಕ್‌ನಲ್ಲಿ ಒಬ್ಬ ವೈದ್ಯ, ಲ್ಯಾಬ್‌ ತಂತ್ರಜ್ಞ, ನರ್ಸ್‌, ಡಿ ಗ್ರೂಪ್‌ ನೌಕರ ಇರುತ್ತಾರೆ. ಜ್ವರ, ಕೆಮ್ಮು, ನೆಗಡಿ ಮೊದಲಾದ ಸಣ್ಣ ಸಮಸ್ಯೆಗಳಿಗೆ ಹಿಂದೆ ಜಿಲ್ಲಾಸ್ಪತ್ರೆಗೆ ಹೋಗಬೇಕಿತ್ತು. ಆದರೆ ಈಗ ನಮ್ಮ ಕ್ಲಿನಿಕ್‌ಗೆ ಹೋಗಿ ಉಚಿತವಾಗಿ ಸೇವೆ ಪಡೆಯಬಹುದು. ಬೇರೆ ಆಸ್ಪತ್ರೆಗಳಲ್ಲಿ 10 ರೂ. ಶುಲ್ಕ ಪಡೆಯಲಾಗುತ್ತಿತ್ತು. ಆದರೆ ನಮ್ಮ ಕ್ಲಿನಿಕ್‌ನಲ್ಲಿ ಬಿಡಿಗಾಸನ್ನೂ ನೀಡಬೇಕಿಲ್ಲ ಎಂದು ವಿವರಿಸಿದರು.

 

ಆಯುಷ್ಮಾನ್‌ ಕಾರ್ಡ್‌, ಪ್ರಧಾನಿಗಳಿಂದ ವಿತರಣೆ

 

ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಇಲ್ಲದಿದ್ದರೆ ಸಂಪದ್ಭರಿತ ನಾಡನ್ನು ಸೃಷ್ಟಿಸಲು ಸಾಧ್ಯವಿಲ್ಲ. ಒಂದು ದೇಶ-ಒಂದು ಪಡಿತರ ಚೀಟಿ, ಒಂದು ದೇಶ-ಒಂದು ತೆರಿಗೆ ಎಂಬಂತೆ, ಒಂದು ದೇಶ-ಒಂದು ಹೆಲ್ತ್‌ ಕಾರ್ಡ್‌ ಎಂಬ ಘೋಷಣೆಯ ಆಯುಷ್ಮಾನ್‌ ಕಾರ್ಡ್‌ಗಳನ್ನು ನೀಡಲಾಗುತ್ತಿದೆ. 1.20 ಕೋಟಿ ಕಾರ್ಡ್‌ಗಳ ನೋಂದಣಿ ಪೂರ್ಣಗೊಂಡಿದ್ದು, ಈ ಕಾರ್ಯಕ್ರಮಕ್ಕೂ ಚಾಲನೆ ನೀಡಬೇಕಿತ್ತು. ಆದರೆ ಕೇಂದ್ರದ ಆರೋಗ್ಯ ಸಚಿವರು ಕರೆ ಮಾಡಿ ಶ್ಲಾಘಿಸಿ, ಪ್ರಧಾನಿ ನರೇಂದ್ರ ಮೋದಿಯವರಿಂದಲೇ ಈ ಕಾರ್ಡ್‌ ವಿತರಣೆ ಮಾಡಿಸಲಾಗುವುದು ಎಂದು ತಿಳಿಸಿದ್ದಾರೆ. ಆದ್ದರಿಂದ ಪ್ರಧಾನಿಗಳ ಕೈಯಿಂದಲೇ ಕಾರ್ಡ್‌ಗಳನ್ನು ಜನರಿಗೆ ಕೊಡಿಸಲಾಗುವುದು ಎಂದು ತಿಳಿಸಿದರು.

 

42 ಲಕ್ಷ ಜನರಿಗೆ ಉಚಿತ ಚಿಕಿತ್ಸೆ

 

ಕೆಲವರು ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಟೀಕೆ ಮಾಡುತ್ತಾರೆ. ಆದರೆ ನಾಲ್ಕು ವರ್ಷಗಳಲ್ಲಿ 42 ಲಕ್ಷ ಜನರಿಗೆ ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತ ಸೇವೆ ನೀಡಿದ್ದು, ಅದಕ್ಕಾಗಿ 5 ಸಾವಿರ ಕೋಟಿ ರೂ. ಖರ್ಚು ಮಾಡಲಾಗಿದೆ. ಈ ಪೈಕಿ ಶೇ.70 ರಷ್ಟು ರೋಗಿಗಳು ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದಿದ್ದಾರೆ. ಸರ್ಕಾರಿ ಆರೋಗ್ಯ ವ್ಯವಸ್ಥೆ ಸರಿ ಇಲ್ಲ ಎಂದು ದೂರುವುದು ಸುಲಭ. ಆದರೆ ಉಚಿತ ಸೇವೆಯ ಪರಂಪರೆಯನ್ನು ನೋಡಬೇಕು. ನಮ್ಮ ಅವಧಿಯಲ್ಲಿ ಆಸ್ಪತ್ರೆಗಳ ಮೂಲಸೌಕರ್ಯದಲ್ಲಿ 5-6 ಪಟ್ಟು ಪ್ರಗತಿ, ಉಚಿತ ಔಷಧಿ ವಿತರಣೆ, ಡಯಾಲಿಸಿಸ್‌ ಸಂಖ್ಯೆಯನ್ನು 30 ಸಾವಿರದಿಂದ 60 ಸಾವಿರಕ್ಕೆ ಹೆಚ್ಚಳ ಸೇರಿದಂತೆ ಅನೇಕ ಸುಧಾರಣೆ ಮಾಡಲಾಗಿದೆ ಎಂದರು.

 

Namma clinics: All 438 of Namma clinics are operational by the end of January: Dr.K.Sudhakar

Tags: Dr. K SudhakarNamma clinics
ShareTweetSendShare
Join us on:

Related Posts

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

by Shwetha
December 11, 2025
0

ಬೆಂಗಳೂರು ಕ್ರಿಕೆಟ್ ಅಭಿಮಾನಿಗಳಿಗೆ, ವಿಶೇಷವಾಗಿ RCB ಫ್ಯಾನ್ಸ್‌ಗಳಿಗೆ ರಾಜ್ಯ ಸರ್ಕಾರದಿಂದ ಸಂತಸದ ಸುದ್ದಿ ಬಂದಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿರುವಂತೆ, ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಸೇರಿದಂತೆ ಕ್ರಿಕೆಟ್...

ಕರ್ನಾಟಕ ಭೂ ಕಂದಾಯ ಕಾಯ್ದೆ 1964: ಪ್ರಮುಖ ತಿದ್ದುಪಡಿ ಮಂಡನೆಗೆ ರಾಜ್ಯ ಸರ್ಕಾರ ಸಜ್ಜು

ಕರ್ನಾಟಕ ಭೂ ಕಂದಾಯ ಕಾಯ್ದೆ 1964: ಪ್ರಮುಖ ತಿದ್ದುಪಡಿ ಮಂಡನೆಗೆ ರಾಜ್ಯ ಸರ್ಕಾರ ಸಜ್ಜು

by Shwetha
December 11, 2025
0

ರಾಜ್ಯದಲ್ಲಿ ಭೂ ಸಂಬಂಧಿತ ಕಾನೂನುಗಳನ್ನು ಸ್ಮಾರ್ಟ್ ಮತ್ತು ಸುಗಮಗೊಳಿಸುವ ನಿಟ್ಟಿನಲ್ಲಿ ಬಹು ನಿರೀಕ್ಷಿತ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿ ಮಂಡನೆಗೆ ಬರುತ್ತಿದೆ. ರಾಜ್ಯ ರೆವಿನ್ಯೂ...

ಧರ್ಮಸ್ಥಳದ ವಿರುದ್ಧದ ಮಹಾ ಷಡ್ಯಂತ್ರ ಬಯಲು: ಶವ ಹೂತ ಕಥೆ ಕಟ್ಟಿದ ಬುರುಡೆ ಗ್ಯಾಂಗ್‌ಗೆ ಸಂಕಷ್ಟ, ಕ್ಷೇತ್ರಕ್ಕೆ ಸಿಕ್ತು ಕ್ಲೀನ್ ಚಿಟ್!

ಧರ್ಮಸ್ಥಳದ ವಿರುದ್ಧದ ಮಹಾ ಷಡ್ಯಂತ್ರ ಬಯಲು: ಶವ ಹೂತ ಕಥೆ ಕಟ್ಟಿದ ಬುರುಡೆ ಗ್ಯಾಂಗ್‌ಗೆ ಸಂಕಷ್ಟ, ಕ್ಷೇತ್ರಕ್ಕೆ ಸಿಕ್ತು ಕ್ಲೀನ್ ಚಿಟ್!

by Shwetha
December 11, 2025
0

ಬೆಳ್ತಂಗಡಿ: ನಾಡಿನ ಪವಿತ್ರ ಯಾತ್ರಾ ಸ್ಥಳ ಶ್ರೀಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆ ತರುವ ದುರುದ್ದೇಶದಿಂದ ಹೆಣೆಯಲಾದ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಭಾರಿ ಷಡ್ಯಂತ್ರದ ಮುಖವಾಡ ಕಳಚಿದೆ....

RTO ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಟ್ಟುನಿಟ್ಟಿನ ಬ್ರೇಕ್: ಸಚಿವರ ಎಚ್ಚರಿಕೆ

RTO ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಟ್ಟುನಿಟ್ಟಿನ ಬ್ರೇಕ್: ಸಚಿವರ ಎಚ್ಚರಿಕೆ

by Shwetha
December 11, 2025
0

ರಾಜ್ಯದಲ್ಲಿನ RTO ಕಚೇರಿಗಳಲ್ಲಿ ನಡೆದುಬಂದಿರುವ ಮಧ್ಯವರ್ತಿಗಳ ಹಾವಳಿಗೆ ಸರ್ಕಾರ ಈಗ ಕಠಿಣ ಕ್ರಮಕ್ಕೆ ಮುಂದಾಗಿದೆ. ಮಧ್ಯವರ್ತಿಗಳ ಮೂಲಕ ಕೆಲಸ ಮಾಡಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾರಿಗೆ ಮತ್ತು...

ನಮ್ಮಲ್ಲಿ ಅಕ್ಕಿ ತಂದು ಸುರಿಯಬೇಡಿ ಭಾರತದ ವಿರುದ್ಧ ಟ್ರಂಪ್ ಗರಂ :ಭಾರತದ ಅಕ್ಕಿ ಆಮದಿಗೆ ಬ್ರೇಕ್ ಹಾಕಲು ಟ್ರಂಪ್ ನಿರ್ಧಾರ

ನಮ್ಮಲ್ಲಿ ಅಕ್ಕಿ ತಂದು ಸುರಿಯಬೇಡಿ ಭಾರತದ ವಿರುದ್ಧ ಟ್ರಂಪ್ ಗರಂ :ಭಾರತದ ಅಕ್ಕಿ ಆಮದಿಗೆ ಬ್ರೇಕ್ ಹಾಕಲು ಟ್ರಂಪ್ ನಿರ್ಧಾರ

by Shwetha
December 11, 2025
0

ನ್ಯೂಯಾರ್ಕ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ತಮ್ಮ 'ಅಮೆರಿಕ ಫಸ್ಟ್' ನೀತಿಯನ್ನು ಪ್ರಬಲವಾಗಿ ಪ್ರತಿಪಾದಿಸಿದ್ದು, ಭಾರತದ ವ್ಯಾಪಾರ ವಲಯಕ್ಕೆ ದೊಡ್ಡ ಆಘಾತ ನೀಡಿದ್ದಾರೆ. ಅಮೆರಿಕದ ಮಾರುಕಟ್ಟೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram