ನವದೆಹಲಿ : ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸುವ ಹಿನ್ನೆಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ದೆಹಲಿಯಿಂದ ಅಯೋಧ್ಯೆಯತ್ತ ಪ್ರಯಾಣಿಸಿದ್ದಾರೆ. ಕುರ್ತಾ ಮತ್ತು ಪಂಚೆ ತೊಟ್ಟಿರುವ ಪ್ರಧಾನಿಗಳು, ದೆಹಲಿಯಿಂದ ವಿಶೇಷ ವಿಮಾನದಲ್ಲಿ ಅಯೋಧ್ಯೆಯತ್ತ ಹೊರಟಿದ್ದಾರೆ.
ಪ್ರಧಾನಿಗಳು ಈಗಾಗಲೇ ಲಖನೌ ವಿಮಾನ ನಿಲ್ದಾಣ ತಲುಪಿರುವ ಮೋದಿ, 11.30ಕ್ಕೆ ಅಯೋಧ್ಯೆಯ ಸಾಕೇತ್ ಕಾಲನಿಗೆ ಆಗಮಿಸಲಿದ್ದಾರೆ. 11.45ಕ್ಕೆ ಹನುಮಾನ್ ಗಡಿಯಲ್ಲಿ ಪ್ರಾರ್ಥನೆ ಮಾಡಿದ ಬಳಿಕ ಸರಯೂ ನದಿಗೆ ಪೂಜೆ ಸಲ್ಲಿಸಿ, ಮಧ್ಯಾಹ್ನ 12 ಗಂಟೆಗೆ ರಾಮಜನ್ಮಭೂಮಿಗೆ ಆಗಮಿಸಲಿದ್ದಾರೆ. ಬಳಿಕ 12.30ಕ್ಕೆ ಭೂಮಿಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾಗಿ 12.40 ಗಂಟೆಗೆ ರಾಮಮಂದಿರಕ್ಕೆ ಅಡಿಗಲ್ಲು ಹಾಕಲಿದ್ದಾರೆ.
ನಂತರ 1.10ಕ್ಕೆ ರಾಮಜನ್ಮಭೂಮಿ ಸಂಕೀರ್ಣ ವೀಕ್ಷಿಸಲಿರುವ ಮೋದಿ, ಶ್ರೀರಾಮ ಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್ ಅಧ್ಯಕ್ಷ ನೃತ್ಯ ಗೋಪಾಲದಾಸ್ ಮತ್ತಿತರ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಮಧ್ಯಾಹ್ನ 02:05ಕ್ಕೆ ಅಯೋಧ್ಯೆಯಿಂದ ಹೆಲಿಕಾಪ್ಟರ್ ಮೂಲಕ ಲಕ್ನೋಗೆ ಪ್ರಯಾಣ ಬೆಳೆಸಲಿದ್ದಾರೆ.







