ಕೊರೊನಾಗೆ ಸಂಸದ ನಂದಕುಮಾರ್ ಸಿಂಗ್ ಚೌಹಾಣ್ ಬಲಿ
ನವದೆಹಲಿ : ಆರಂಭದಲ್ಲಿ ದೇಶವನ್ನ ಶೇಕ್ ಮಾಡಿದ ಕೊರೊನಾ ವೈರಸ್ ಮಧ್ಯೆದಲ್ಲಿ ತಗ್ಗಿದರೂ ಈಗ ಮತ್ತೆ ಅಬ್ಬರಿಸಲು ಶುರು ಮಾಡಿದೆ. ಈ ಮಧ್ಯೆ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಖಾಂಡ್ವಾ ಕ್ಷೇತ್ರದ ಬಿಜೆಪಿ ಸಂಸದ ನಂದಕುಮಾರ್ ಸಿಂಗ್ ಚೌಹಾಣ್ ಮೃತಪಟ್ಟಿದ್ದಾರೆ.
ಕೊರೊನಾ ಹಿನ್ನೆಲೆ ನಂದ್ ಕುಮಾರ್ ಸಿಂಗ್ ಅವರಿಗೆ ದೆಹಲಿ ಎನ್ ಸಿಆರ್ ನ ಮೇದಂಟಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ನಿನ್ನೆ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ ಅನ್ನೋ ಮಾಹಿತಿ ಇದೀಗ ಲಭ್ಯವಾಗಿದೆ.
ಜನವರಿ 11 ರಂದು ನಂದ ಕುಮಾರ್ ಸಿಂಗ್ ಅವರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿತ್ತು. ಕೂಡಲೇ ಅವರನ್ನ ಭೋಪಾಲ್ ನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಆರೋಗ್ಯ ಪರಿಸ್ಥಿತಿ ಹದಗೆಟ್ಟ ಕಾರಣ ಅಲ್ಲಿಂದ ಅವರನ್ನ ದೆಹಲಿಯ ಮೇದಂಟಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇನ್ನು ನಂದಕುಮಾರ್ ಸಿಂಗ್ ಚೌಹಾಣ್ ಅವರ ನಿಧನಕ್ಕೆ ರಾಜಕೀಯ ಗಣ್ಯರು ಕಂಬನಿ ಮಿಡಿಯುತ್ತಿದ್ದಾರೆ.










