ಪಾಕಿಸ್ತಾನದಿಂದ ಕಾಶ್ಮೀರಕ್ಕೆ ಡ್ರಗ್ಸ್ ತರಿಸಿದ್ದು ಯಾರು : ಕಾಂಗ್ರೆಸ್ ವಿರುದ್ಧ ನಾರಾಯಣಸ್ವಾಮಿ ಕಿಡಿ Congress
ಚಿತ್ರದುರ್ಗ : ಪಾಕಿಸ್ತಾನದಿಂದ ಕಾಶ್ಮೀರಕ್ಕೆ ಡ್ರಗ್ಸ್ ತರಿಸಿದ್ದು ಯಾರು..? ಆ ಜನರನ್ನು ಅಮಲಿನಲ್ಲಿಟ್ಟಿದ್ದು ಯಾರೂ ಎಂದು ಕಾಂಗ್ರೆಸ್ ನವರು ಮೊದಲು ಹೇಳಲಿ ಎಂದು ಕೇಂದ್ರ ಸಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ನಾರಾಯಣಸ್ವಾಮಿ ಕಿಡಿಕಾರಿದರು.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ನಾರಾಯಣಸ್ವಾಮಿ, ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಇದೇ ವೇಳೆ ರಾಜ್ಯದಲ್ಲಿ ಗಣೇಶೋತ್ಸವಕ್ಕೆ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿ ಬಗ್ಗೆ ಮಾತನಾಡಿದ ಅವರು, ಸರ್ಕಾರ ಖಂಡಿತವಾಗಿಯೂ ಮಾರ್ಗಸೂಚಿಯನ್ನು ಬದಲಾಯಿಸುತ್ತದೆ.
ರಾಜ್ಯದಲಿ ಗಣಪತಿ ಹಬ್ಬದ ಆಚರಣೆಯನ್ನು ಸರ್ಕಾರದ ಅನುಮತಿ ಪಡೆದು ಅತ್ಯಂತ ವಿಜೃಂಭಣೆಯಿಂದ ಕೋವಿಡ್ ನಿಯಮ ಪಾಲಿಸಿಕೊಂಡು ಆಚರಣೆ ಮಾಡುತ್ತೆವೆ ಎಂದು ತಿಳಿಸಿದರು.