ಬಣ್ಣಿಸಲು ಪದಗಳಿಲ್ಲ : ಬಿ.ಎಸ್.ವೈ ಅವರನ್ನು ಕೊಂಡಾಡಿದ ನಮೋ
ನವದೆಹಲಿ : ರಾಜ್ಯದ ನಿರ್ಗಮಿತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಯಡಿಯೂರಪ್ಪ ಅವರನ್ನು ಹೊಗಳಿರುವ ಪ್ರಧಾನಿ ಮೋದಿ, ಯಡಿಯೂರಪ್ಪನವರು ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ರೀತಿ ಅವಿಸ್ಮರಣೀಯ ಎಂದು ಕೊಂಡಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮೋದಿ, ಕರ್ನಾಟಕದಲ್ಲಿ ಪಕ್ಷದ ಅಭಿವೃದ್ಧಿಗೆ ಯಡಿಯೂರಪ್ಪ ಕೊಡುಗೆ ಬಣ್ಣಿಸಲು ಪದಗಳಿಲ್ಲ.
ಬಿ.ಎಸ್. ಯಡಿಯೂರಪ್ಪ ದಶಕಗಳ ಕಾಲ ಶ್ರಮಿಸಿ ರಾಜ್ಯದ ಮೂಲೆ ಮೂಲೆಗೂ ಸುತ್ತಾಡಿ, ಜನರನ್ನು ಒಂದೆಡೆ ಸೇರಿಸಿ ಬಿಜೆಪಿ ಕಟ್ಟಿ ಬೆಳೆಸಿದ್ದು ಸ್ಮರಣೀಯ.
ಯಡಿಯೂರಪ್ಪನವರಿಗೆ ಪಕ್ಷದ ಮೇಲಿನ ನಿಷ್ಠೆ, ಸಮಾಜ ಕಲ್ಯಾಣಕ್ಕಾಗಿ ಅವರ ಬದ್ಧತೆ ಮೆಚ್ಚಲೇಬೇಕು ಎಂದು ಬರೆದುಕೊಂಡಿದ್ದಾರೆ.