ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮೋದಿ ವರ್ಸಸ್ ದೀದಿ | ಮುಂದಿನ “ಲೋಕ” ಕದನದಲ್ಲಿ “ಮಮತಾ” ಪ್ರಧಾನಿ ಅಭ್ಯರ್ಥಿ

admin by admin
May 4, 2021
in Newsbeat, Politics, ರಾಜಕೀಯ
mamatha banarjree
Share on FacebookShare on TwitterShare on WhatsappShare on Telegram

ಮೋದಿ ವರ್ಸಸ್ ದೀದಿ | ಮುಂದಿನ “ಲೋಕ” ಕದನದಲ್ಲಿ “ಮಮತಾ” ಪ್ರಧಾನಿ ಅಭ್ಯರ್ಥಿ

ಬೆಂಗಳೂರು : ಮುಂದಿನ “ಲೋಕ” ಕದನದಲ್ಲಿ “ಮಮತಾ” ಪ್ರಧಾನಿ ಅಭ್ಯರ್ಥಿ..! ಕೇಸರಿಗೆ ಟಕ್ಕರ್ ಕೊಡಲು ಒಂದಾಗುತ್ವಾ ತೃತೀಯ ರಂಗ ಸಜ್ಜು..! ಪ್ರಾದೇಶಿಕ ಪಕ್ಷಗಳೇ ಈಗ ಪ್ರಬಲ ಪ್ರತಿಪಕ್ಷ..!

Related posts

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

August 2, 2026
84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

August 2, 2026

ಹೌದು..! ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಪ್ರದೇಶಿಕ ಪಕ್ಷಗಳು ಮೇಲುಗೈ ಸಾಧಿಸಿವೆ. ಈ ಫಲಿತಾಂಶ ಸ್ಪಷ್ಟವಾಗಿ ಒಂದು ವಿಚಾರವನ್ನ ಎತ್ತಿ ಹೇಳುತ್ತಿದೆ. ಅದೆನೆಂದರೇ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತೃತೀಯ ರಂಗ ಭಾರಿ ಆಕ್ರಮಣಕಾರಿಯಾಗಿ ಸ್ಪರ್ಧೆ ಮಾಡಲಿದೆ.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ, ತಮಿಳುನಾಡಿನಲ್ಲಿ ಸ್ಟಾಲಿನ್ ನೇತೃತ್ವದ ಟಿಎಂಸಿ, ಕೇರಳದಲ್ಲಿ ಎಡಪಕ್ಷ ಮೈತ್ರಿರಂಗ ಅಧಿಕಾರಕ್ಕೆ ಬಂದಿದೆ. ಇತ್ತ ಅಸ್ಸಾಂನಲ್ಲಿ ಅಸ್ಸಾಂಗಣ ಪರಿಷತ್ ಪ್ರಾಬಲ್ಯ ಸಾಧಿಸಿದೆ. ಇಲ್ಲಿ ರಾಷ್ಟ್ರೀಯ ಪಕ್ಷ ಎನಿಸಿಕೊಂಡಿದ್ದ ಕಾಂಗ್ರೆಸ್ ಎಲ್ಲೂ ಪ್ರಾಬಲ್ಯ ಸಾಧಿಸಿಲ್ಲ.

mamatha banarjree

ಕೇಸರಿಗೆ ಟಕ್ಕರ್ ನೀಡಲು ಒಂದಾಗಲಿವೆ ಪ್ರಾದೇಶಿಕ ಪಕ್ಷಗಳು..!

ರಾಷ್ಟ್ರೀಯ ಪಕ್ಷಗಳನ್ನು ದೂರ ಇಟ್ಟು ಪ್ರಾದೇಶಿಕ ಪಕ್ಷಗಳು ಮೈತ್ರಿಯಿಂದ ಸಾಧ್ಯವಾಗುವ ತೃತೀಯ ರಂಗದ ಕನಸು ಬಹಳ ವರ್ಷಗಳಿಂದ ಇದೆ. 1996-98ರಲ್ಲಿ ಅದು ನಿಜವಾಗಿತ್ತೂ ಕೂಡ. ಆಗ 13 ಪಕ್ಷಗಳು ಸೇರಿಕೊಂಡು ರೂಪಿಸಿದ್ದ ಸಂಯುಕ್ತ ರಂಗ ಕಾಂಗ್ರೆಸ್ ಬಾಹ್ಯ ಬೆಂಬಲದೊಂದಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಿತ್ತು. ಅದರಂತೆ ಇದೀಗ ಮತ್ತೆ ಪ್ರಾದೇಶಿಕ ಪಕ್ಷಗಳು ಒಂದಾಗಳು ಮುಂದಾಗಿವೆ. ಪಶ್ಚಿಮ ಬಂಗಾಳದ ಫಲಿತಾಂಶ ಹೊರಬರುತ್ತಿದ್ದಂತೆ ದೇಶದಲ್ಲಿದ್ದ ಪ್ರಾದೇಶಿಕ ಪಕ್ಷಗಳ ನಾಯಕರು ಮಮತಾ ಬ್ಯಾನರ್ಜಿಗೆ ಖುದ್ದು ಕರೆ ಮಾಡಿ ಶುಭಾಶಯ ತಿಳಿಸಿದ್ದಾರೆ. ಅಲ್ಲದೇ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ತೃತೀಯ ರಂಗ ರಚಿಸುವ ಇಚ್ಚೆಯನ್ನೂ ಕೂಡ ವ್ಯಕ್ತಪಡಿಸಿದ್ದಾರೆ. ನಾವಿಲ್ಲಿ ಒಂದು ವಿಚಾರವನ್ನು ಗಮನಿಸಬೇಕು, ಅದೇನೆಂದರೆ ಪಶ್ಚಿಮ ಬಂಗಾಳದ ಚುನಾವಣೆಗೂ ಮುನ್ನಾ ಮಮತಾ ಬ್ಯಾನರ್ಜಿ “ಕಾಂಗ್ರೆಸ್ ಸೇರಿದಂತೆ 15 ಪಕ್ಷಗಳ ವರಿಷ್ಠರಿಗೆ ಪತ್ರ ಬರೆದು ಬಿಜೆಪಿಯನ್ನು ಒಟ್ಟಾಗಿ ಎದುರಿಸುವಂತೆ ಕರೆ ನೀಡಿದ್ದರು”. ಇದೀಗ ಅದರಂತೆ ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತೃತೀಯ ರಂಗಕ್ಕೆ ವೇದಿಕೆ ಸಿದ್ಧಪಡಿಸುವ ಕಾರ್ಯ ಶುರುವಾಗಿದೆ ಎಂದು ಹೇಳಲಾಗುತ್ತಿದೆ.

ತೃತೀಯ ರಂಗದಲ್ಲಿದ್ದಾರೆ ಪ್ರಬಲ ನಾಯಕರು

ಹೌದು..! ತೃತೀಯ ರಂಗ ವಿಚಾರವಾಗಿ ಇಷ್ಟು ಗಟ್ಟಿಯಾಗಿ ಸುದ್ದಿ ಕೇಳಿಬರಲು ಪ್ರಮುಖ ಕಾರಣವೆಂದೆರೆ ಅದು ವರ್ಚಸ್ವಿ ನಾಯಕರು. ಪಶ್ಚಿಮ ಬಂಗಾಳದ ಮಟ್ಟಿಗೆ ಮಮತಾ ಬ್ಯಾನರ್ಜಿ ಸುಪ್ರೀಂ. ಅಲ್ಲಿ ಅವರನ್ನ ಅಲುಗಾಡಿಸೋದು ಅಷ್ಟು ಸುಲಭವಲ್ಲ ಅಂತಾ ಈಗಾಗಲೇ ಗೊತ್ತಾಗಿದೆ. ತಮಿಳುನಾಡಿನಲ್ಲಿ ಸ್ಟಾಲಿನ್ ಅವರಲ್ಲಿ ಡಿಎಂಕೆ ಬಲಿಷ್ಠ ನಾಯಕರನ್ನು ಕಂಡುಕೊಂಡಿದೆ. ಜೊತೆಗೆ ಜನರ ವಿಶ್ವಾಸವೂ ಅವರ ಮೇಲಿದೆ. ಸದ್ಯಕ್ಕೆ ಸ್ಟಾಲಿನ್ ತಮಿಳುನಾಡಿನ ನಯಾ ತಲೈವಾ ಅಂತಾನೇ ಹೇಳಬಹುದು. ಇನ್ನು ಕೇರಳದಲ್ಲಿ ಪಿಣರಾಯಿ ವಿಜಯನ್ ಈಗ ತುಂಬಾ ಜನಪ್ರಿಯ. ಅಲ್ಲಿ ಅವರ ನಾಯಕತ್ವವನ್ನು ಪ್ರಶ್ನೆ ಮಾಡಬಲ್ಲ ನಾಯಕರು ಮತ್ತೊಬ್ಬರಿಲ್ಲ. ಇತ್ತ ಮಹಾರಾಷ್ಟ್ರದಲ್ಲಿ ಎನ್ ಸಿಪಿ, ಶಿವಸೇನಾ ತಮ್ಮದೇ ಯಾದ ಪ್ರಬಲ್ಯ ಸಾಧಿಸಿದ್ದು, ಉದ್ಧವ್ ಠಾಕ್ರೆ ನಾಯಕತ್ವದಲ್ಲಿ ಇನ್ನಷ್ಟು ಬಲಿಷ್ಠಗೊಂಡಿವೆ. ಇದಿಷ್ಟೆ ಅಲ್ಲದೇ ಬಿಹಾರದ ಆರ್ ಜೆಡಿ, ಉತ್ತರ ಪ್ರದೇಶದ ಬಿಎಸ್ ಪಿ ಕೂಡ ಪ್ರಬಲ ನಾಯಕರನ್ನು ಹೊಂದಿವೆ.

mamatha banarjree

ಮುಂದಿನ ಚುನಾವಣೆ ಮೋದಿ ವರ್ಸಸ್ ದೀದಿ

ಸದ್ಯದ ಟ್ರೆಂಡ್ ನೋಡಿದ್ರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ದೀದಿ ಕೇಸರಿ ಪಡೆಗೆ ಸವಾಲ್ ಹಾಕುವುದರಲ್ಲಿ ಅನುಮಾನವೇ ಇಲ್ಲ. ಬಿಜೆಪಿಗೆ ಬುದ್ಧಿ ಕಲಿಸುವ ನಿಟ್ಟಿನಲ್ಲಿ ಪ್ರಾದೇಶಿಕ ಪಕ್ಷಗಳು ತಮ್ಮ ಪ್ರಾಂತೀಯ ಮಿತಿಗಳನ್ನು ಹಾಗೂ ತಾತ್ವಿಕ ಭಿನ್ನತೆಗಳನ್ನು ಮೀರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಒಂದಾಗಿದ್ದೇ ಆದಲ್ಲಿ ಬಿಜೆಪಿಗೆ ಪ್ರಬಲ ಪೈಪೋಟಿ ನೀಡುವುದರಲ್ಲಿ ಸಂಶಯವೇ ಇಲ್ಲ ಅನ್ನೋದು ರಾಜಕೀಯ ಪಂಡಿತರ ಮಾತು.

Tags: BJPmamatha banajereeNarendra modi
ShareTweetSendShare
Join us on:

Related Posts

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

by Shwetha
August 2, 2026
0

ನಟ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಆಗಸ್ಟ್ 8ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ 'ಟಾಕ್ಸಿಕ್' ಟ್ರೇಲರ್ ಲಾಂಚ್ ಕಾರ್ಯಕ್ರಮ...

ಸ್ವಾತಂತ್ರ್ಯ ಎಂದರೆ ಇಷ್ಟಬಂದಿದ್ದನ್ನು ಮಾಡುವುದಲ್ಲ, ಯುವ ಭಾರತಕ್ಕೆ ರಾಷ್ಟ್ರ ನಿರ್ಮಾಣದ ಪಾಠ ಮಾಡಿದ ಅಜಿತ್ ದೋವಲ್: ಸ್ವಾತಂತ್ರ್ಯದ ನಿಜವಾದ ಅರ್ಥ ವಿವರಿಸಿದ ಭದ್ರತಾ ಸಲಹೆಗಾರ.

ಸ್ವಾತಂತ್ರ್ಯ ಎಂದರೆ ಇಷ್ಟಬಂದಿದ್ದನ್ನು ಮಾಡುವುದಲ್ಲ, ಯುವ ಭಾರತಕ್ಕೆ ರಾಷ್ಟ್ರ ನಿರ್ಮಾಣದ ಪಾಠ ಮಾಡಿದ ಅಜಿತ್ ದೋವಲ್: ಸ್ವಾತಂತ್ರ್ಯದ ನಿಜವಾದ ಅರ್ಥ ವಿವರಿಸಿದ ಭದ್ರತಾ ಸಲಹೆಗಾರ.

by Shwetha
August 2, 2026
0

ಪುಣೆ: ದೇಶದ ಯುವಜನತೆಗೆ ಸ್ವಾತಂತ್ರ್ಯದ ನಿಜವಾದ ಅರ್ಥ ಮತ್ತು ಅದರೊಂದಿಗೆ ಬರುವ ಜವಾಬ್ದಾರಿಯ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಗಂಭೀರ ಎಚ್ಚರಿಕೆ ನೀಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram