Narendra Modi : ಬೆಣ್ಣೆ ನಗರಿಯಲ್ಲಿ ಕಾಂಗ್ರೆಸ್ ವಿರುದ್ಧ ಘರ್ಜಿಸಿದ ಮೋದಿ…
ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಬೆಣ್ಣೆ ನಗರಿ ದಾವಣಗೆರೆಯಲ್ಲಿ ನಡೆದ ಸಮಾವೇಶದಲ್ಲಿ ಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡುತ್ತಾ ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರವನ್ನ ನಡೆಸಿದ್ದಾರೆ.
ಜಿಎಂಐಟಿ ಮೈದಾನದಲ್ಲಿ ನಡೆದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಮಹಾ ಸಂಗಮ ಸಮಾವೇಶದಲ್ಲಿ ಮಾತನಾಡಿದ ಅವರು, ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ನವರು ಹಲವು ಗ್ಯಾರಂಟಿಗಳನ್ನು ಘೋಷಿಸಿದ್ದು ಇವುಗಳೆಲ್ಲ ಪೊಳ್ಳು ಭರವಸೆಗಳು ಎಂದು ಟೀಕಿಸಿದರು. ಮತ್ತೊಂದೆಡೆ ಕಲಬುರ್ಗಿಯಲ್ಲಿ ಎಐಸಿಸಿ ಅಧ್ಯಕ್ಷರ ಕರ್ಮಭೂಮಿಯಲ್ಲಿ ಬಿಜೆಪಿಯ ಮೇಯರ್ ಹಾಗೂ ಉಪ ಮೇಯರ್ ಆಯ್ಕೆಯಾಗಿದ್ದಾರೆ. ಇದು ವಿಜಯ ಸಂಕಲ್ಪ ಯಾತ್ರೆಯ ಶುಭ ಸಂಕೇತ. ಕರ್ನಾಟಕದಲ್ಲಿ ಬಿಜೆಪಿ ವಿಜಯ ಯಾತ್ರೆ ಆರಂಭವಾಗಿದೆ ಎಂದರು. ಇದು ಹೀಗೆ ಮುಂದುವರೆಯಬೇಕು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ತಂದುಕೊಡುಲು ಶ್ರಮಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.
ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಗುರಿಯಾಗಿಸಿಕೊಂಡು ಹೆಸರೇಳದೇ ವಾಗ್ದಾಳಿ ನಡೆಸಿದ ಮೋದಿ ನಾನು ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಿಡಿಯೋ ನೋಡಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಪ್ರತಿಪಕ್ಷದ ಪ್ರಮುಖ ನಾಯಕರೊಬ್ಬರು ಕಾರ್ಯಕರ್ತನ ಕಪಾಳಕ್ಕೆ ಹೊಡೆಯುತ್ತಾರೆ. ತಮ್ಮದೇ ಪಕ್ಷದ ಕಾರ್ಯಕರ್ತರನ್ನು ಗೌರವಿಸದವರು ನಾಡಿನ ಜನರನ್ನು ಗೌರವಿಸುತ್ತಾರಾ ಎಂದು ಪ್ರಶ್ನಿಸಿದರು. ಇದಕ್ಕೆಲ್ಲಾ ನೀವು ಮತದಾನದ ಮೂಲಕ ಉತ್ತರ ನೀಡಬೇಕು ಎಂದರು.
Narendra Modi : Modi roared against Congress in Davanagere…