National Herald case: ಡಿಕೆಶಿ ಮನವಿ ತಿರಸ್ಕರಿಸಿದ E D – ವಿಚಾರಣೆಗೆ ಹಾಜರಾಗುವಂತೆ ಸೂಚನೆ..
ನ್ಯಾಷನಲ್ ಹೆರಾಲ್ಡ್ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಅಕ್ಟೋಬರ್ 7 ರಂದು ದೆಹಲಿಯಲ್ಲಿ ವಿಚಾರಣೆ ಹಾಜರಾಗುವುದರಿಂದ ವಿನಾಯಿತಿ ನೀಡಬೇಕೆಂಬ ತಮ್ಮ ಮನವಿಯನ್ನು ಜಾರಿ ನಿರ್ದೇಶನಾಲಯ ತಿರಸ್ಕರಿಸಿದೆ ಎಂದು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಗುರುವಾರ ಹೇಳಿದ್ದಾರೆ.
ತಮ್ಮ ಪಕ್ಷದ ನಾಯಕರ ಜೊತೆ ಮಾತನಾಡಿದ ನಂತರ ಏಜೆನ್ಸಿಯ ಮುಂದೆ ಹಾಜರಾಗಬೇಕೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸುವುದಾಗಿ ಡಿಕೆಶಿ ಹೇಳಿದ್ದಾರೆ. ಶುಕ್ರವಾರ ವಿಚಾರಣೆಗೆ ಲಭ್ಯವಾಗುವಂತೆ ಇ ಡಿ ಹೊಸ ಮೇಲ್ ಕಳಿಸಿದೆ.
“ಸೆಪ್ಟೆಂಬರ್ 23, 2022 ರ ಸಮನ್ಸ್ನ ಪ್ರಕಾರ ಅಕ್ಟೋಬರ್ 7, 2022 ರಂದು ನಿಮ್ಮ ಹೇಳಿಕೆಯ ರೆಕಾರ್ಡಿಂಗ್ಗಾಗಿ ನನ್ನ ಕಚೇರಿಯಲ್ಲಿ ನಿಮ್ಮನ್ನು ನನ್ನ ಮುಂದೆ ಹಾಜರುಪಡಿಸಲು ಮತ್ತೊಮ್ಮೆ ನಿಮಗೆ ನಿರ್ದೇಶಿಸಲಾಗಿದೆ” ಎಂದು ED ಸಹಾಯಕ ನಿರ್ದೇಶಕ ಕುಲದೀಪ್ ಸಿಂಗ್ ಕಳುಹಿಸಿರುವ ಇಮೇಲ್ ನಲ್ಲಿ ತಿಳಿಸಲಾಗಿದೆ.
ಡಿಕೆಶಿ ಪ್ರಸ್ತುತ ಕಾಂಗ್ರೆಸ್ನ ‘ಭಾರತ್ ಜೋಡೋ ಯಾತ್ರೆ’ಯಲ್ಲಿ ಭಾಗವಹಿಸುತ್ತಿರುವ ಕಾರಣದಿಂದ ಅಕ್ಟೋಬರ್ 21 ರವರೆಗೆ ವಿನಾಯಿತಿ ನೀಡುವಂತೆ ತನಿಖಾ ಸಂಸ್ಥೆಗೆ ಮನವಿ ಮಾಡಿದ್ದರು.
“ಇಡಿ ಮುಂದೆ ಹಾಜರಾಗಲು ನಾನು ಸಮಯ ಕೋರಿದ್ದೆ ಅದನ್ನು ನಿರಾಕರಿಸಲಾಗಿದೆ. ನನ್ನ ನಾಯಕರೊಂದಿಗೆ ಮಾತನಾಡಿದ ನಂತರ ಏಜೆನ್ಸಿಯ ಮುಂದೆ ಹಾಜರಾಗಬೇಕೇ ಎಂದು ನಾನು ತಿಳಿಸುತ್ತೇನೆ ಎಂದು ಶಿವಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಒಡೆತನದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಕಾರ್ಯಾಚರಣೆಗಳ ಬಗ್ಗೆ ನಡೆಯುತ್ತಿರುವ ಹಣ ವರ್ಗಾವಣೆಯ ತನಿಖೆಯಲ್ಲಿ ಸಹೋದರ ಡಿ ಕೆ ಸುರೇಶ್ ಅವರನ್ನೂ ಪ್ರಶ್ನಿಸಲು ಇ ಡಿ ಸಮನ್ಸ್ ಜಾರಿ ಮಾಡಿದೆ.
National Herald case: ED rejects Shivakumar’s plea for exemption from appearance on Oct 7