ರಾಷ್ಟ್ರೀಯ ಯುವದಿನಾಚರಣೆ Saaksha Tv
ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ರಾಷ್ಟ್ರೀಯ ಯುವದಿನಾಚರಣೆ ಎಂದು ಆಚರಿಸಲಾಗುತ್ತದೆ. ಇಂದು ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನ. 25ನೇ ರಾಷ್ಟ್ರೀಯ ಯುವದಿನಾಚರಣೆ ಅಂಗವಾಗಿ ಯುವಜನೋತ್ಸವ ನಡೆಯಲಿದ್ದು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.
ರಾಷ್ಟ್ರೀಯ ಯುವದಿನಾಚರಣೆಯನ್ನು 1984ರಲ್ಲಿ ಭಾರತ ಸರಕಾರವು ಸ್ವಾಮಿ ವಿವೇಕಾನಂದರ ತತ್ವಗಳು, ಆದರ್ಶಗಳು ಮತ್ತು ಕಾರ್ಯ ವಿಧಾನಗಳು ಭಾರತೀಯ ಯುವಕರಿಗೆ ಪ್ರೇರಣೆಯಾಗಿದೆ ಎಂದು ಹೇಳಿತ್ತು. ಹಾಗಾಗಿ ಅಂದಿನಿಂದ ಸ್ವಾಮಿವೇಕಾನಂದರ ಜನ್ಮದಿವನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲು ಘೋಷಿಸಿತು.
ಹಾಗೇ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ನಡೆಯಲಿರುವ ಐದು ದಿನಗಳ ಯುಜನೋತ್ಸವವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ದೇಶದ ಪ್ರತಿಯೊಂದು ಜಿಲ್ಲೆಯ ಯುವಕರು ಪ್ರಧಾನಿಗಳಿಗೆ ಪ್ರಶ್ನೆಗಳನ್ನು ಕೇಳಬಹುದು, ವಿಚಾರಗಳನ್ನು ಹಂಚಿಕೊಳ್ಳಬಹುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ ಠಾಕೂರ್ ಟ್ವೀಟ್ ಮಾಡಿದ್ದಾರೆ.