Navyashree – ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ವಿರುದ್ಧ ದೂರು ದಾಖಲು…
ಸುಲಿಗೆ, ಜೀವ ಬೆದರಿಕೆ, ಸುಳ್ಳು ಅತ್ಯಾಚಾರ ಕೇಸ್ ದಾಖಲಿಸುವ ಬೆದರಿಕೆ ಆರೋಪದ ಮೇಲೆ ಕಾಂಗ್ರೆಸ್ ಕಾರ್ಯರ್ಕತೆ ನವ್ಯಶ್ರೀ ಆರ್. ರಾವ್ ಎಂಬುವವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚನ್ನಪಟ್ಟಣ ಮೂಲದ ನವ್ಯಶ್ರೀ ಆರ್.ರಾವ್, ಆಕೆಯ ಸ್ನೇಹಿತ ತಿಲಕರಾಜ್ ಡಿ.ಟಿ. ವಿರುದ್ಧ ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವ್ಯಶ್ರೀ ಅವರದ್ದು ಎನ್ನಲಾದ ಖಾಸಗಿ ವಿಡಿಯೋ ವೈರಲ್ ಆದ ಬೆನ್ನಲ್ಲೇ ನವ್ಯಶ್ರೀ ರಾವ್ ವಿರುದ್ಧ ಬೆಳಗಾವಿ ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ್ ಟಾಕಳೆ ಎಂಬುವವರು ದೂರು ನೀಡಿದ್ದಾರೆ. ರಾಜಕುಮಾರ ಟಾಕಳೆ ಈ ಹಿಂದೆ ಮಾಜಿ ಸಚಿವ ಶ್ರೀಮಂತ ಪಾಟೀಲ್ ಪಿಎ ಆಗಿ ಕೆಲಸ ನಿರ್ವಹಿಸಿದ್ದರು.
‘ಡಿಸೆಂಬರ್ 2020ರಲ್ಲಿ ತಾವು ಬೆಂಗಳೂರಲ್ಲಿ ಕೆಲಸ ಮಾಡುವಾಗ ‘ಸಾಫ್ಟ್ವೇರ್ ಇಂಜಿನಿಯರ್ ಹಾಗೂ ಕಾಂಗ್ರೆಸ್ ಕಾರ್ಯಕರ್ತೆ, ‘ಚನ್ನಪಟ್ಟಣದಲ್ಲಿ ನವ್ಯ ಫೌಂಡೇಶನ್ ಹೆಸರಿನ ಎನ್ಜಿಒ ನಡೆಸುವುದಾಗಿ ಪರಿಚಯ ಮಾಡಿಕೊಂಡಿದ್ದರು. ನನಗೆ ಮದುವೆಯಾಗಿ ಮೂರು ಮಕ್ಕಳಿವೆ ಎಂದು ಗೊತ್ತಿದ್ದರೂ ಪರಿಚಯ ಬೆಳೆಸಿಕೊಂಡಿದ್ದರು. ‘ಒಂದೂವರೆ ವರ್ಷ ಪರಿಚಯದಲ್ಲಿ ಬೇರೆ ಬೇರೆ ಸ್ಥಳ ಸೇರಿ ಬೆಳಗಾವಿಯಲ್ಲಿ ಭೇಟಿಯಾಗಿದ್ವಿ’
‘2021ರ ಡಿಸಂಬರ್ 24 ರಂದು ನನಗೆ ಕರೆ ಮಾಡಿ ‘ನವ್ಯಶ್ರೀ ಹಾಗೂ ನಾನು ಆತ್ಮೀಯವಾಗಿ ಇರುವ ವಿಡಿಯೋ ಇದೆ ಎಂದು ‘ನವ್ಯಶ್ರೀ ಹಾಗೂ ತಿಲಕರಾಜ್ ಬೆದರಿಕೆ ಹಾಕಿದ್ದಾರೆ. 50 ಲಕ್ಷ ಹಣ ನೀಡದಿದ್ರೆ ನನ್ನ ಪತ್ನಿ, ಸಂಬಂಧಿಕರು ಹಾಗೂ ಸೋಷಿಯಲ್ ಮಿಡಿಯಾ ದಲ್ಲಿ ವಿಡಿಯೋ ವೈರಲ್ ಮಾಡುವುದಾಗಿ ಹೇಳಿದ್ದಾರೆ. ಬಳಿಕ ತನ್ನ ಮನೆಗೆ ಬಂದು ತನ್ನ ಬೇಡಿಕೆ ಈಡೇರುವವರೆಗೂ ಮನೆ ಬಿಟ್ಟು ಹೋಗಲ್ಲ ಅಂತಾ ಬೆದರಿಕೆ ಹಾಕಿದ್ದಾರೆ ಎಂದು ರಾಜಕುಮಾರ ಟಾಕಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ರಾಜಕುಮಾರ ಟಾಕಳೆ ನೀಡಿದ ದೂರಿನ ಅನ್ವಯ ನವ್ಯಶ್ರೀ ವಿರುದ್ಧ ಐಪಿಸಿ 1860(u/s.384, 448, 504, 506, 34) ರಡಿ ಕೇಸ್ ದಾಖಲು ಮಾಡಲಾಗಿದೆ.