ಚಿಕ್ಕಮಗಳೂರು: ಕಳೆದ ಎರಡು ದಶಕಗಳಿಂದ ಭೂಗತಳಾಗಿದ್ದ ನ ಶೃಂಗೇರಿ ತಾಲೂಕಿನ ನಕ್ಸಲ್ ಶ್ರೀಮತಿಗೆ ಎನ್.ಆರ್.ಪುರ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ನೀಡಿದೆ.
ಶ್ರೀಮತಿ ಮೇಲೆ ಚಿಕ್ಕಮಗಳೂರು ಜಿಲ್ಲೆಯಲ್ಲಿಯೇ 12ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿದ್ದವು. ಮಲೆನಾಡಲ್ಲಿ ಕರಪತ್ರ ಹಂಚಿಕೆ, ಬ್ಯಾನರ್ ಕಟ್ಟಿದ್ದು, ಸರ್ಕಾರಿ ಆಸ್ತಿ ನಷ್ಟ, ವಿದ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದು, ಆಯುಧಗಳನ್ನ ಶೇಖರಣೆ ಮಾಡಿದ್ದು, ಟೆಂಟ್ ಹಾಕಿದ್ದು, ಗನ್ ತೋರಿಸಿ ಹೆದರಿಸಿ ಹಣ, ಆಹಾರ ಸಾಮಗ್ರಿ ಪಡೆದಿದ್ದು, ಹಳ್ಳಿಗರನ್ನು ಹೆದರಿಸಿದ ಸುಮಾರು 12ಕ್ಕೂ ಅಧಿಕ ಪ್ರಕರಮಗಳು ದಾಖಲಾಗಿದ್ದವು.
ಕಳೆದ ತಿಂಗಳ ಹಿಂದೆ ಕೇರಳದಲ್ಲಿ ಕಾಡಿನಲ್ಲಿ ನಕ್ಸಲ್ ನಿಗ್ರಹ ದಳ ಹಾಗೂ ಪೊಲೀಸ ಕೂಂಬಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಶ್ರೀಮತಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಳು. ಆಗ ಕೇರಳ ಪೊಲೀಸರು ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸರಿಗೆ ನೀಡಿದ್ದರು. ಎನ್.ಆರ್.ಪುರ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಸದ್ಯ ಕೋರ್ಟ್ 14 ದಿನಗಳ ನ್ಯಯಾಂಗ ಬಂಧನ ವಿತರಿಸಿದೆ.