ಮಂಗಳೂರು: ಚಾಲಕನೊಬ್ಬನ ನಿರ್ಲಕ್ಷ್ಯದಿಂದಾಗಿ ಲಾರಿಯು ರಸ್ತೆ ಬದಿಯಲ್ಲಿದ್ದ ವಾಹನ, ಜನರು ಹಾಗೂ ಪೊಲೀಸ್ ಸಿಬ್ಬಂದಿಗೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ.
ಈ ಘಟನೆ ಮಂಗಳೂರಿನ ಮುಲ್ಕಿಯಲ್ಲಿ ನಡೆದಿದೆ. ಉಡುಪಿ ಕಡೆಯಿಂದ ಬಂದ ಮೈನ್ಸ್ ಸಾಗಾಟದ ಖಾಲಿ ಲಾರಿ ವೇಗದಿಂದ ಬಂದಿದ್ದು, ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದ ಒಂದು ಸ್ಕೂಟರ್, ಒಂದು ಆಟೋಗೆ ಡಿಕ್ಕಿ ಹೊಡೆದಿದೆ. ಹೀಗಾಗಿ ಎರಡೂ ವಾಹನಗಳು ಪಲ್ಟಿಯಾಗಿವೆ. ಅಲ್ಲದೇ, ಸ್ಥಳದಲ್ಲಿದ್ದ ಟ್ರಾಫಿಕ್ ಹೆಡ್ ಕಾಸ್ಟೇಬಲ್ ಗೀತಾ ಎಂಬವರಿಗೂ ಗಾಯವಾಗಿದೆ.
ಸ್ಕೂಟರ್ ನಲ್ಲಿ ವಾಚ್ ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸಂಗಪ್ಪ ಹಾಗೂ ಮಗಳು ತೆರಳುತ್ತಿದ್ದರು. ಸದ್ಯ ಅವರಿಬ್ಬರೂ ಗಾಯಗೊಂಡಿದ್ದಾರೆ. ಆಟೋದಲ್ಲಿದ್ದ ಚಾಲಕ ಧರ್ಮೇಂದ್ರ ಎಂಬುವವರು ಕೂಡ ಗಾಯಗೊಂಡಿದ್ದಾರೆ. ಚಾಲಕನ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತವಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಧಾರವಾಡ ಮೂಲದ ಮಂಜುನಾಥ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ.