ಪ್ರೇಯಸಿಯ ಮದುವೆ ತಡೆಯಲು ನೇರವಾಗಿ ಸಿಎಂ ಗೆ ಪತ್ರ ಬರೆದ ಯುವಕ..! – ಪತ್ರದಲ್ಲಿ ಏನಿದೆ..?
ಬಿಹಾರ : ಒಂದೆಡೆ ದೇಶದಲ್ಲಿ ಕೊರೊನಾ ಹಾವಳಿಯಿಂದ ಜನ ಪರದಾಡುತ್ತಿದ್ದಾರೆ. ಅನೇಕ ರಾಜ್ಯಗಳಲ್ಲಿ ಕೊರೊನಾ ಹಾವಳಿ ಮಿತಿಮೀರಿದೆ.. ಅದ್ರಲ್ಲಿ ಬಿಹಾರವೂ ಒಂದು.. ಹಲವು ರಾಜ್ಯಗಳಲ್ಲಿ ಟಫ್ ರೂಲ್ಸ್ ತಂದಿದ್ದು, ಲಾಕ್ ಡೌನ್ ಜಾರಿ ಮಾಡಲಾಗಿದೆ.. ಈ ನಡುವೆ ಯುವಕನೋರ್ವ ತನ್ನ ಪ್ರೇಯಸಿಗೆ ಮದುವೆ ನಿಗದಿಯಾಗಿರುವುದನ್ನು ತಡೆಯಲು ಬಿಹಾರ ಮುಖ್ಯಮಂತ್ರಿಗಳಿಗೆ ನೇರವಾಗಿ ಪತ್ರ ಬರೆಯುವ ಧೈರ್ಯ ಮಾಡಿದ್ದಾನೆ.
ಹೌದು ಕೊರೊನಾ ಮುನ್ನೆಚ್ಚರಿಕೆಯಾಗಿ ಮದುವೆ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸುವಂತೆ ಯುವಕನೋರ್ವ ಸಾಮಾಜಿಕ ಜಾಲತಾಣದ ಮೂಲಕ ಬಿಹಾರ ಸಿಎಂ ನಿತೀಶ್ ಕುಮಾರ್ ಅವರಿಗೆ ಮನವಿ ಮಾಡಿಕೊಂಡಿದ್ದಾನೆ.. ಆತನ ಪೋಸ್ಟ್ ಎಲ್ಲೆಡೆ ಸಿಕ್ಕಾಪಟ್ಟೆ ವೈರಲ್ ಆಗ್ತಿದ್ದು, ಎಲ್ಲರೂ ವಿಭಿನ್ನ ಪ್ರತಿಕ್ರಿಯೆಗಳನ್ನ ನೀಡ್ತಿದ್ಧಾರೆ.
ಬಿಹಾರದಲ್ಲಿ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ. ಮೇ 25ರ ವರೆಗೆ ರಾಜ್ಯದಲ್ಲಿ ಲಾಕ್ಡೌನ್ ಇರಲಿದೆ. ಈ ಬಗ್ಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದರು. ಇದೇ ಟ್ವೀಟ್ ಅನ್ನೇ ಮರು ಟ್ವೀಟ್ ಮಾಡಿರುವ ಪಂಕಜ್ ಕುಮಾರ್ ಗುಪ್ತ ಎಂಬಾತ, ಸರ್ ರಾಜ್ಯದಲ್ಲಿ ಮದುವೆ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸಿ. ಆಗ ನನ್ನ ಪ್ರೇಯಸಿಯ ಮದುವೆ ಕೂಡ ರದ್ದಾಗುತ್ತದೆ. ಹೀಗೆನಾದರು ಮಾಡಿದರೆ ನಾನು ಯಾವತ್ತು ನಿಮಗೆ ಆಭಾರಿಯಾಗಿರುತ್ತೇನೆ ಎಂದು ಮನವಿ ಮಾಡಿಕೊಂಡಿದ್ದಾನೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ