ನಾಳೆಯೇ ರಾಜ್ಯಕ್ಕೆ ಹೊಸ ಸಿಎಂ ಘೋಷಣೆ
ಬೆಂಗಳೂರು : ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಇಂದಿಗೆ ಎರಡು ವರ್ಷ ತುಂಬಿದೆ. ಈ ಹಿನ್ನಲೆಯಲ್ಲಿ ಅವರು ವಿಧಾನಸೌಧದಲ್ಲಿ ಭಾಷಣ ಮಾಡಿದ್ದು, ರಾಜೀನಾಮೆ ಘೋಷಣೆ ಮಾಡಿದ್ದಾರೆ.
ನಾನು ತೀರ್ಮಾನ ಮಾಡಿದ್ದೇನೆ. ಊಟ ಮಾಡಿದ ನಂತರ ರಾಜಭವನಕ್ಕೆ ಹೋಗಿ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನ ಮಾಡಿದ್ದೇನೆ. 2 ವರ್ಷ ಮುಖ್ಯಮಂತ್ರಿ ಆಗಲು ಅವಕಾಶ ಮಾಡಿಕೊಟ್ಟ ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಭಾವುಕರಾದರು.
ಮುಂದಿನ ಮುಖ್ಯಮಂತ್ರಿ ಯಾರು..?
ಹೌದು..! ಬಿಎಸ್ ವೈ ರಾಜೀನಾಮೆ ನೀಡ್ತಾರೆ ಅನ್ನೋದು ಸ್ಪಷ್ಟವಾಗುತ್ತಿದ್ದಂತೆ ಮುಂದಿನ ಸಿಎಂ ಯಾರು..? ಅನ್ನೋ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಸಿಎಂ ರೇಸ್ ನಲ್ಲಿ ಸಾಕಷ್ಟು ಮಂದಿಯ ಹೆಸರು ಕೇಳಿಬಂದಿದೆ. ಆದ್ರೆ ಮುಂದಿನ ಸಿಎಂ ಇವರೇ ಎಂಬ ಸ್ಪಷ್ಟತೆ ಇಲ್ಲ. ಈ ಮಧ್ಯೆ ನಾಳೆಯೇ ರಾಜ್ಯಕ್ಕೆ ನೂತನ ಮುಖ್ಯಮಂತ್ರಿಯ ಘೋಷಣೆ ಸಾಧ್ಯತೆ ಇದೆ. ನಾಳೆ ದೆಹಲಿಯಲ್ಲಿ ಸಂಸದೀಯ ಮಂಡಳಿ ಸಭೆ ನಡೆಯಲಿದೆ. ಈ ವೇಳೆ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಘೋಷಣೆ ಆಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.