ಕೊರೊನಾ ರೂಲ್ಸ್ ಸಡಿಲಿಕೆ.. ಮದ್ವೆಗೆ ಎಷ್ಟು ಜನ ಸೇರ್ಬೋದು ಗೊತ್ತಾ..? New covid-19-rules-in karnataka R ashok
ಬೆಂಗಳೂರು : ರಾಜ್ಯ ಸರ್ಕಾರ ಇಂದು 50 : 50 ರೂಲ್ಸ್ ನಲ್ಲಿ ಕೊಂಚ ಸಡಿಲಿಕೆ ಮಾಡಿದೆ. ಕೊರೊನಾ ನಿಯಂತ್ರಣಕ್ಕೆ ಜಾರಿಯಲ್ಲಿದ್ದ ಶೇ 50ರಷ್ಟು ರೂಲ್ಸ್ಗೆ ಎಲ್ಲೆಡೆಯಿಂದ ವಿರೋಧ ವ್ಯಕ್ತವಾಗಿತ್ತು. ಮುಖ್ಯವಾಗಿ 50 : 50 ರೂಲ್ಸ್ ಸಡಿಲಿಕೆ ಮಾಡುವಂತೆ ಹೋಟೆಲ್ ಉದ್ಯಮ, ಮದ್ಯ ಮಾರಾಟ ಉದ್ಯಮ, ಸಿನಿಮಾ, ನಾಟಕ ರಂಗಗಳಿಂದ ಬೇಡಿಕೆಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ ಸಡಿಲಿಕೆ, ಬೆಂಗಳೂರಲ್ಲಿ ಶಾಲಾರಂಭ ಸೇರಿದಂತೆ ವಿವಿಧ ವಿಷಯಗಳ ಕುರಿತಾಗಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಸಭೆ ನಡೆಯಿತು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆ ಸಚಿವರು, ಹಿರಿಯ ಅಧಿಕಾರಿಗಳು, ಕೋವಿಡ್ ತಜ್ಞರು ಭಾಗವಹಿಸಿದ್ದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಜನವರಿ 31 ರಿಂದ ನೈಟ್ ಕರ್ಫ್ಯೂ ಇರುವುದಿಲ್ಲ ಎಂದರು. ಹೋಟೆಲ್ ರೆಸ್ಟೋರೆಂಟ್ ಗಳಿಗೆ 50% ರೂಲ್ಸ್ ರದ್ದು ಮಾಡಿರುವುದಾಗಿ ತಿಳಿಸಿದರು.
ಉಳಿದಂತೆ ಮದುವೆ ಹೊರಾಂಗಣದಲ್ಲಿ 300 ಮತ್ತು ಒಳಾಂಗಣದಲ್ಲಿ 200 ಜನರಿಗೆ ಅವಕಾಶ ಕಲ್ಪಿಸಿಕೊಡುತ್ತಿದ್ದೇವೆ. ಕಚೇರಿಗಳಲ್ಲಿ ಶೇ.100 ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ಕೋಡುತ್ತಿದ್ದೇವೆ. ಧಾರ್ಮಿಕ ಕ್ಷೇತ್ರಗಳಲ್ಲಿ ಸೇವೆಗಳು ಮತ್ತೆ ಆರಂಭವಾಗುತ್ತಿದ್ದು, ಎಲ್ಲಾ ರೀತಿ ಸೇವೆಗಳಿಗೆ ಅವಕಾಶ ಕೊಡಲಾಗಿದೆ. ಆದರೆ ದೇವಾಲಯಗಳಲ್ಲಿ ಒಮ್ಮೆಲೆ 50 ಜನ ಮಾತ್ರ ಪ್ರವೇಶ ನಿಯಮ ಮುಂದುವರಿಸುತ್ತಿದ್ದೇವೆ ಎಂದು ಮಾಹಿತಿ ಹಂಚಿಕೊಂಡರು.