ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಅಪರಾಧಿಗಳಿಗೆ ಕೊನೆಗೂ ಗಲ್ಲಿಗೇರಲು ಸಮಯ ಬಂದಂತೆ ತೋರುತ್ತಿದೆ.ದೆಹಲಿಯ ಪಟಿಯಾಲ ಕೋರ್ಟ್ ನಿರ್ಭಯಾ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಇಂದು ಹೊಸ ಡೆತ್ ವಾರಂಟ್ ಜಾರಿಗೊಳಿಸಿದೆ. ಇದೇ ಮಾರ್ಚ್ 20ರಂದು ಬೆಳಗ್ಗೆ 6 ಗಂಟೆಗೆ ನಾಲ್ವರು ಆರೋಪಿಗಳನ್ನು ನೇಣಿಗೇರಿಸಲು ಕೋರ್ಟ್, ಹೊಸ ಡೆತ್ ವಾರೆಂಟ್ ಗೆ ಆದೇಶ ನೀಡಿದೆ.
ದಿನಕ್ಕೊಂದು ಕಾರಣ ನೀಡುತ್ತಾ ಕಾನೂನಿನ ಮಾರ್ಗಗಳಿಂದ ತಪ್ಪಿಸಿಕೊಳ್ಳಲು ನೋಡಿದ ನಿರ್ಭಯಾ ಅತ್ಯಾಚಾರಿಗಳಿಗೆ ಈಗಾಗಲೇ ಮೂರು ಬಾರಿ ಡೆತ್ ವಾರೆಂಟ್ ನೀಡಲಾಗಿದೆ. ಅಪರಾಧಿಗಳಿಗೆ ಇರುವ ಎಲ್ಲಾ ಕಾನೂನು ಮಾರ್ಗಗಳನ್ನು ಅವರು ಬಳಸಿಕೊಂಡಿದ್ದು, ಇನ್ನು ಅವರಿಗೆ ಯಾವುದೇ ಅವಕಾಶವಿಲ್ಲದಂತಾಗಿದ್ದು, ಇದೀಗ ನಾಲ್ಕನೇ ಡೆತ್ ವಾರೆಂಟ್ ಜಾರಿಯಾಗಿದೆ.
ಆದರೂ ಕಾನೂನಿನ ಅಡಿಯಲ್ಲಿ ಯಾವ ಹೊಸ ನಾಟಕ ನಿರ್ಭಯಾ ರೇಪಿಸ್ಟ್ ಗಳ ಬತ್ತಳಿಕೆಯಲ್ಲಿದೆ ಎಂಬ ಕುತೂಹಲ ಜನರಲ್ಲಿದೆ.ಪಟಿಯಾಲ ಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡಬಹುದಾಗಿದ್ದು, ಕೋರ್ಟ್ ಇವರ ನಾಟಕಕ್ಕೆ ಇತಿಶ್ರೀ ಹಾಡುತ್ತದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ
ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ
ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆಯನ್ನು ಅಮೆರಿಕ ಮುಳುಗಿಸಿರುವ ಘಟನೆ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ಘಟನೆಯ ಬಗ್ಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,...








