ಬೆಂಗಳೂರು: ಸಂಕ್ರಾತಿಗೂ ಮುನ್ನಾ ದಿನವೇ ಸಚಿವ ಸಂಪುಟ ವಿಸ್ತರಣೆ ಮಾಡಿದ್ದರೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇನ್ನೂ ಖಾತೆಗಳ ಹಂಚಿಕೆ ಮಾಡಿಲ್ಲ.

ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ವಾರ ಕಳೆದರೂ ಖಾತೆಗಳ ಹಂಚಿಕೆಯಾಗದ ಹಿನ್ನೆಲೆಯಲ್ಲಿ ಸಚಿವರು ತಮ್ಮ ಕ್ಷೇತ್ರಗಳಲ್ಲಿ ಭರ್ಜರಿ ಸನ್ಮಾನ, ಹಾರ-ತುರಾಯಿ ಹಾಕಿಸಿಕೊಳ್ಳುವುದರಲ್ಲೇ ಬ್ಯುಸಿಯಾಗಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಗುರುವಾರ ಖಾತೆ ಹಂಚಿಕೆ ಪಟ್ಟಿ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಭಾವಿ ಖಾತೆಗಳಿಗಾಗಿ ನೂತನ ಸಚಿವರು ದುಂಬಾಲು ಬಿದ್ದಿದ್ದಾರೆ ಎನ್ನಲಾಗಿದೆ.
ನೂತನ ಸಚಿವರಿಗೆ ಖಾತೆಗಳ ಸಂಭಾವ್ಯ ಪಟ್ಟಿ ಕೆಳಗಿನಂತಿದೆ. ಇದು ಫೈನಲ್ ಪಟ್ಟಿ ಅಲ್ಲ. ಕೊನೆಗಳಿಗೆಯಲ್ಲಿ ಬದಲಾವಣೆ ಆದರೂ ಅಚ್ಚರಿಯಲ್ಲ. ಇದು ಸಂಭಾವ್ಯ ಪಟ್ಟಿಯೇ ಹೊರತು ಅಂತಿಮ ಅಲ್ಲ.
1. ಮರುಗೇಶ ನಿರಾಣಿ – ಸಣ್ಣ ಕೈಗಾರಿಕೆ ಇಲಾಖೆ/ ಐಟಿ, ಬಿಟಿ
2. ಆರ್. ಶಂಕರ್ – ಪ್ರವಾಸೋದ್ಯಮ ಇಲಾಖೆ/ ಅಬಕಾರಿ
3. ಎಸ್. ಅಂಗಾರ – ಬಂದರು ಮತ್ತು ಒಳನಾಡು
4. ಸಿ.ಪಿ.ಯೋಗೇಶ್ವರ್ -ಕನ್ನಡ ಮತ್ತು ಸಂಸ್ಕೃತಿ ಇಲಾಖೆ / ಯುವಜನಾ ಸೇವೆ ಮತ್ತು ಕ್ರೀಡೆ, ರೇಷ್ಮೆ ಇಲಾಖೆ
5. ಅರವಿಂದ ಲಿಂಬಾವಳಿ – ಉನ್ನತ ಶಿಕ್ಷಣ/ ಬೆಂಗಳೂರು ಅಭಿವೃದ್ಧಿ
6. ಉಮೇಶ್ ಕತ್ತಿ – ಅಬಕಾರಿ ಇಲಾಖೆ
7. ಎಂಟಿಬಿ ನಾಗರಾಜ್- ಇಂಧನ ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ಹಾಲಿ ಸಚಿವರ ಖಾತೆಗಳೂ ಬದಲಾಗುತ್ತಾ..!
ಕೆಲ ಹಾಲಿ ಸಚಿವರು ಪ್ರಭಾವಿ ಖಾತೆಗಳ ಮೇಲೆ ಮೇಲೆ ಕಣ್ಣಿರುವ ಹಿನ್ನೆಲೆಯಲ್ಲಿ ಖಾತೆಗಳು ಬದಲಾವಣೆಯಾಗುವ ಸಾಧ್ಯತೆ ಇದೆ. ತಮ್ಮ ಖಾತೆ ವಾಪಸ್ ಪಡೆದು ಬೇರೆಯವರಿಗೆ ಕೊಡಿ ಎಂದು ಹೈಕಮಾಂಡ್ ಮಟ್ಟದಲ್ಲಿ ಲಾಬಿ ಮಾಡುತ್ತಿದ್ದಾರೆ.
ಬೆಂಗಳೂರು ನಗರಾಭಿವೃದ್ಧಿ ಸಚಿವ ಸ್ಥಾನಕ್ಕೆ ಆರ್.ಅಶೋಕ್, ಡಿಸಿಎಂ ಅಶ್ವತ್ಥ ನಾರಾಯಣ್, ಅರವಿಂದ ಲಿಂಬಾವಳಿ ಕಣ್ಣಿಟ್ಟಿದ್ದಾರೆ. ಆದರೆ, ಈ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಳ್ಳಲು ಸಿಎಂ ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಬಸವರಾಜ ಬೊಮ್ಮಾಯಿ ತಮಗೆ ಗೃಹ ಖಾತೆ ಬೇಡ ಎಂದಿದ್ದಾರೆ ಎನ್ನಲಾಗಿದೆ. ಈ ಹೀಗಾಗಿ ಅವರನ್ನು ಅದೇ ಖಾತೆಯಲ್ಲಿ ಉಳಿಸಿಕೊಳ್ಳುತ್ತಾರಾ ಅಥವಾ ಬೇರೆ ಖಾತೆ ನೀಡುತ್ತಾರಾ ಎಂಬುದು ಸದ್ಯದಲ್ಲೇ ಗೊತ್ತಾಗಲಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








