ಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೆಪಿಸಿಸಿಗೆ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿತ್ತು. ಇದಕ್ಕೆ ಡಿಸಿಎಂ ಡಿಕೆ. ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.
ಪಟ್ಟಿಯಲ್ಲಿ ಹೊಸದಾಗಿ ಕೆಲವು ನಾಯಕರ ಹೆಸರನ್ನು ಸೇರಿಸಲಾಗಿದೆ. ಪ್ರಧಾನ ಕಾರ್ಯದರ್ಶಿ 138 ಇದ್ದಿದ್ದನ್ನು 140ಕ್ಕೆ ಹೆಚ್ಚಿಸಿ ಎಐಸಿಸಿ ಆದೇಶ ಹೊರಡಿಸಿದೆ. ರಾಜಾಜಿನಗರದ ರಘುವೀರ್ ಗೌಡ ಬಿಟ್ಟು ಭವ್ಯಾ ನರಸಿಂಹಮೂರ್ತಿ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡಲಾಗಿದೆ. B.R.ನಾಯ್ಡು, ಶಿವಕುಮಾರ್, ಸಂಜಯ್ ಜಾಗಿದಾರ್, ಸುಶುತ್ ಗೌಡ, ರಾಬರ್ಟ್ ದೊಡ್ಡಪುರ, ಅನಿಲ್ ಕುಮಾರ್ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.
ಹಳಬರನ್ನು ಕೈಬಿಟ್ಟು ಹೊಸ-ಹೊಸ ಮುಖಗಳಿಗೆ ಕೆಪಿಸಿಸಿ ನೂತನ ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು. 43 ರಾಜ್ಯ ಉಪಾಧ್ಯಕ್ಷರು, 138 ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿತ್ತು. ಮಾಧ್ಯಮ ಮತ್ತು ಸಂವಹನ ಮುಖ್ಯಸ್ಥರಾಗಿ ರಮೇಶ್ ಬಾಬು ನೇಮಕವಾಗಿದ್ದರೆ, ಸಾಮಾಜಿಕ ಜಾಲತಾಣ ಸಹ – ಮುಖ್ಯಸ್ಥರಾಗಿ ವಿನಯ್ ಮತ್ತಿಕಟ್ಟಿ, ನಿಕೇತ್ ರಾಜ್ ಮೌರ್ಯ ಆಯ್ಕೆಯಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಸಹ- ಮುಖ್ಯಸ್ಥರಾಗಿ ಪಿ.ಟಿ ಪರಮೇಶ್ವರ್ ನಾಯಕ್ ನೇಮಕವಾಗಿದ್ದಾರೆ. ಈ ಪಟ್ಟಿ ಕಂಡು ಡಿಕೆಶಿ ಬೇಸರ ವ್ಯಕ್ತಪಡಿಸಿದ್ದಾರೆ.