ದೆಹಲಿಯಲ್ಲಿ ಮತ್ತಷ್ಟು ಬಿಗಡಾಯಿಸಿದ ವಾಯುಮಾಲಿನ್ಯ ಸ್ಥಿತಿ : ಮುಂದಿನ ಆದೇಶದವರೆಗೂ ಶಾಲಾ ಕಾಲೇಜುಗಳಿಗೆ ರಜೆ
ದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೇಪಾವಳಿಯ ನಂತರದಲ್ಲಿ ವಾಯುಮಾಲಿನ್ಯ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ..
ಈ ಹಿನ್ನೆಲೆ ಮುಂದಿನ ಆದೇಶದವರೆಗೂ ದೆಹಲಿ–ಎನ್ಸಿಆರ್ನಲ್ಲಿ ಶಾಲಾ ಕಾಲೇಜುಗಳನ್ನ ಮುಂದಿನ ಆದೇಶದ ವರೆಗೂ ಬಂದ್ ಮಾಡಲಾಗಿದೆ..
ಜೊತೆಗೆ ಇತರ ಶೈಕ್ಷಣಿಕ ಸಂಸ್ಥೆಗಳನ್ನು ಕೂಡ ಬಂದ್ ಮಾಡುವಂತೆ ವಾಯು ಗುಣಮಟ್ಟ ನಿರ್ವಹಣಾ ಸಮಿತಿ(ಸಿಎಕ್ಯುಎಂ) ನಿರ್ದೇಶನ ನೀಡಿದ್ದು ಆನ್ಲೈನ್ ತರಗತಿಗಳಿಗೆ ಒತ್ತು ನೀಡುವಂತೆ ಸೂಚಿಸಿದ ಬೆನ್ನಲ್ಲೇ ದೆಹಲಿ ಸರ್ಕಾರ ನಿರ್ಧಾರ ಕೈಗೊಂಡಿದೆ.ದೆಹಲಿಯ 300 ಕಿ.ಮೀ ವ್ಯಾಪ್ತಿಯಲ್ಲಿರುವ 11 ಥರ್ಮಲ್ ವಿದ್ಯುತ್ ಸ್ಥಾವರಗಳ ಪೈಕಿ ಕೇವಲ 5 ಮಾತ್ರ ನವೆಂಬರ್ 30ರವರೆಗೆ ಕಾರ್ಯನಿರ್ವಹಿಸಲಿವ ಎಂದು ತಿಳಿಸಲಾಗಿದೆ..
ವಾಯುಮಾಲಿನ್ಯ ತಡೆಯುವ ನಿಟ್ಟಿನಲ್ಲಿ ದೆಹಲಿ ಮತ್ತು ಎನ್ಸಿಆರ್ ವ್ಯಾಪ್ತಿಯ ರಾಜ್ಯಗಳಿಗೆ ನವೆಂಬರ್ 21ರವರೆಗೆ ಕಟ್ಟಡ ಕಾಮಗಾರಿ ಕಟ್ಟಡ ತೆರವು ಕಾರ್ಯಾಚರಣೆಗಳನ್ನು ನಡೆಸದಂತೆ ಸಮಿತಿ ಸೂಚಿಸಿದೆ.ಬಸ್, ರೈಲು, ಮೆಟ್ರೋ ಮತ್ತು ಮಿಲಿಟರಿಗೆ ಸಂಬಂಧಿತ ಸಂಚಾರಗಳನ್ನು ಕಠಿಣ ನಿಯಮಾವಳಿ ಅನ್ವಯ ನಡೆಸುವಂತೆ ತಿಳಿಸಿದೆ.
ಇನ್ನೂ ಅಗತ್ಯ ವಸ್ತುಗಳಲ್ಲದ ಸರಕು ಸಾಗಣೆ ಟ್ರಕ್ ಗಳಿಗೆ ಭಾನುವಾರದವರೆಗೆ ದೆಹಲಿ ಪ್ರವೇಶವನ್ನು ನಿರ್ಬಂಧಿಸಲಾಗಿದೆ.ವಾಯು ಮಾಲಿನ್ಯ ಹೆಚ್ಚಾಗಿರುವ ದೆಹಲಿ–ಎನ್ಸಿಆರ್ ವ್ಯಾಪ್ತಿಯ ರಾಜ್ಯಗಳಾದ ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳ ಉನ್ನತ ಅಧಿಕಾರಿಗಳ ಜೊತೆ ವಾಯು ಗುಣಮಟ್ಟ ನಿರ್ವಹಣಾ ಸಮಿತಿ ಸಭೆ ನಡೆಸಿದೆ.
ಯುವತಿಯ ನಗ್ನ ಫೋಟೊ ವಾಟ್ಸಾಪ್ ಸ್ಟೇಟಸ್ ಗೆ ಹಾಕಿದ್ದ ಪ್ರೇಮಿ
ಈ ಮಧ್ಯೆ ಇಂದು ಸುಪ್ರೀಂ ಕೋರ್ಟ್ನಲ್ಲಿ ದೆಹಲಿ–ಎನ್ಸಿಆರ್ನ ವಾಯುಮಾಲಿನ್ಯ ಕುರಿತಾದ ವಿಚಾರಣೆ ನಡೆಯಲಿದೆ.ಎನ್ಸಿಆರ್ ವಲಯದ ರಾಜ್ಯ ಸರ್ಕಾರಗಳ ಶೇ.50ರಷ್ಟು ನೌಕರರಿಗೆ ವರ್ಕ್ ಫ್ರಂ ಹೋಮ್ಗೆ ಸೂಚಿಸಲು ತಿಳಿಸಲಾಗಿದೆ. ಖಾಸಗಿ ಸಂಸ್ಥೆಗಳೂ ಇದೇ ನಿಯಮ ಪಾಲಿಸುವಂತೆ ಸೂಚಿಸಲಾಗಿದೆ.
ಅನುಮತಿ ಇಲ್ಲದ ತೈಲ ಬಳಕೆ ಮಾಡುತ್ತಿರುವ ಎನ್ಸಿಆರ್ ವಲಯದ ಕೈಗಾರಿಕೆಗಳನ್ನು ಕೂಡಲೇ ಬಂದ್ ಮಾಡಬೇಕು ಮತ್ತು 10–15 ವರ್ಷ ಹಳೆಯ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳು ರಸ್ತೆಗಿಳಿಯದಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶಿಸಲಾಗಿದೆ.ಅಗತ್ಯ ಸೇವೆಗಳನ್ನು ಹೊರತುಪಡಿಸಿ ದೆಹಲಿಯ ಎಲ್ಲ ಸರ್ಕಾರಿ ಕಚೇರಿಗಳು ಸ್ವಾಯತ್ತ ಸಂಸ್ಥೆಗಳ ನೌಕರರಿಗೆ ವರ್ಕ್ ಫ್ರಂ ಹೋಮ್ ನೀಡಲಾಗಿದೆ.