ಸುದ್ದಿ ನಿರೂಪಕ ಅರುಣ್ ಬಡಿಗೇರ ಅವರ ತಂದೆ ತಾಯಿ ಕೊರೋನಾ ಸೋಂಕಿಗೆ ಬಲಿ
ಪಬ್ಲಿಕ್ ಟಿವಿಯ ಸುದ್ದಿ ನಿರೂಪಕ ಅರುಣ್ ಬಡಿಗೇರ ಅವರ ತಂದೆ ತಾಯಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಮೂರು ದಿನಗಳ ಹಿಂದೆ ಅರುಣ್ ಅವರ ತಾಯಿ ಕಸ್ತೂರಮ್ಮ ಬಡಿಗೇರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಇದೀಗ ಅವರ ತಂದೆ ಚಂದ್ರಶೇಖರ ಬಡಿಗೇರ (68) ಕೂಡ ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಚಂದ್ರಶೇಖರ ಬಡಿಗೇರ ಅವರು ನಿವೃತ್ತ ಶಿಕ್ಷಕರಾಗಿದ್ದು, ಧಾರವಾಡದ ರೈಟರ್ ಗಲ್ಲಿಯ ನಿವಾಸಿಯಾಗಿದ್ದರು. ಕೆಲವು ದಿನಗಳ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಸೋಂಕಿನಿಂದ ಅವರ ಆರೋಗ್ಯ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ ಆರೋಗ್ಯದಲ್ಲಿ ಚೇತರಿಕೆ ಕಾಣದೆ ಅವರು ಮೃತಪಟ್ಟಿದ್ದಾರೆ.
ಎಚ್ಚರಿಕೆ – ದೇಶಾದ್ಯಂತ ಕೊರೋನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ… ನಮ್ಮ ಮತ್ತು ನಮ್ಮ ಕುಟುಂಬದ ಆರೋಗ್ಯ ನಮ್ಮ ಕೈಯಲ್ಲಿದೆ. ಇದು ಸಾಕ್ಷಾಟಿವಿ ಕಳಕಳಿ
ದೇಹವು ಬಲವಾದ ರೋಗನಿರೋಧಕ ಶಕ್ತಿಯನ್ನು ಹೊಂದಲು ಈ ರೀತಿ ಮಾಡಿ#Saakshatv #healthtips #immunity https://t.co/5t5Bbj6Bod
— Saaksha TV (@SaakshaTv) April 26, 2021
ಸುಲಭವಾಗಿ ತಯಾರಿಸಿ ವೆಜಿಟೇಬಲ್ ಫ್ರೈಡ್ ರೈಸ್#Saakshatv #cookingrecipe #vegetable #friedrice https://t.co/ov1kK94lbw
— Saaksha TV (@SaakshaTv) April 25, 2021
ತೆರೆದು ಓದದ ಆ ಪತ್ರದಲ್ಲಿ ಅಮ್ಮನ ಉಸಿರಿತ್ತು!#ಚೈತ್ರ_ಕಬ್ಬಿನಾಲೆ https://t.co/0WRYp2RVbh
— Saaksha TV (@SaakshaTv) April 28, 2021
ಈ ಪಾಲಿಸಿಯಲ್ಲಿ ಹೂಡಿಕೆ ಮಾಡಿದರೆ ನಿಮ್ಮ ಮಗು ಮಿಲಿಯನೇರ್ ಆಗಬಹುದು !#LICPolicy #Moneybackplan https://t.co/RHCYNqFfPr
— Saaksha TV (@SaakshaTv) April 21, 2021
#Newsanchor #ArunBadigera #coronavirus