ADVERTISEMENT
Wednesday, March 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನ್ಯೂಸ್ ರೌಂಡ್ ಅಪ್ @ 4PM

admin by admin
September 13, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಅಮಿತ್ ಶಾ  ಮತ್ತೆ ಏಮ್ಸ್ ಗೆ ದಾಖಲು..!

ಪೋಸ್ಟ್ ಕೋವಿಡ್  ಚಿಕಿತ್ಸೆಯನ್ನು ಪಡೆದ ನಂತರ ಆಗಸ್ಟ್ 31 ರಂದು  ಆಸ್ಪತ್ರೆಯಿಂದ ಬಿಡುಗಡೆಯಾದ ಗೃಹ ಸಚಿವ ಅಮಿತ್ ಶಾ ಅವರನ್ನು ಮತ್ತೊಮ್ಮೆ ಏಮ್ಸ್ ಗೆ ದಾಖಲಿಸಲಾಗಿದೆ. ಉಸಿರಾಟದ ಸಮಸ್ಯೆಗಳನ್ನು ಎದುರಿಸುತ್ತಿರುವ ಪರಿಣಾಮ  ತಡರಾತ್ರಿ ಅಮಿತ್ ಷಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಏಮ್ಸ್ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ಅವರು ಶಾ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಅವರ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಹೇಳಲಾಗಿದೆ.

Related posts

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

March 25, 2026
ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

March 25, 2026

ಜಮೀರ್ ವಿರುದ್ಧ ಕುಮಾರಸ್ವಾಮಿ ಶಂಕೆ..!

ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲದ ತನಿಖೆ ನಡೆಯುತ್ತಿರುವಾಗಲೇ ಶಾಸಕ ಜಮೀರ್ ಅಹಮದ್ ನನ್ನ ಹೆಸರನ್ನು ಎಳೆದು ತಂದಿದ್ದು ಯಾಕೆ ಎಂದು ಪ್ರಶ್ನಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಡ್ರಗ್ಸ್ ಮಾಫಿಯಾ ಬಗ್ಗೆ ಸಮಗ್ರ ತನಿಖೆ ಆಗಲಿ. ಆದರೆ ತನಿಖೆಯ ದಾರಿ ತಪ್ಪಿಸಲು ಜಮೀರ್ ನನ್ನ ಹೆಸರು ಹೇಳಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ನೈಟ್  ಬಾರ್‍ ಗಳಲ್ಲಿ ಡ್ರಗ್ಸ್ ಬಳಕೆ ಇದೆ: ಹೆಚ್‍ ಡಿಕೆ

1982ರಲ್ಲೇ ನಾನು ಕ್ಯಾಸಿನೋ ಹೇಗಿರುತ್ತೆ ಎಂದು ನೋಡಿದ್ದೇನೆ. ಮಲೇಶಿಯಾಗೆ ಪತ್ನಿ ಜತೆ ಹೋಗಿದ್ದಾಗ ಕ್ಯಾಸಿನೋ ನೋಡಿದ್ದೇನೆ. ಬೆಂಗಳೂರಿನ ನೈಟ್ ಬಾರ್‍ಗಳಲ್ಲಿ ಈಗಲೂ ಡ್ರಗ್ಸ್ ದಂಧೆ ನಡೆಯುತ್ತಿದೆ. ಸಂಜೆಯಾಗುತ್ತಿದ್ದಂತೆ ನೈಟ್ ಬಾರ್‍ಗಳು ರಂಗಾಗುತ್ತವೆ. ಎಂ.ಜಿ ರಸ್ತೆ ಹಾಗೂ ಮಲ್ಯ ರಸ್ತೆಗಳಲ್ಲಿ ಬೆಳಗಿನ ಜಾವದವರೆಗೂ ನೈಟ್ ಪಾರ್ಟಿಗಳು ನಡೆಯುತ್ತಿವೆ. ನಾನು ಮುಖ್ಯಮಂತ್ರಿಯಾಗಿದ್ದಾಗ ನೈಟ್ ಬಾರ್‍ಗಳಲ್ಲಿ ಡ್ರಗ್ಸ್ ದಂಧೆಗೆ ಕಡಿವಾಣ ಹಾಕಲು ಪ್ರಯತ್ನ ಮಾಡಿದ್ದೆ ಆದರೆ, ಈಗ ಹೇಗಿದೆ ಎಂಬುದು ಗೊತ್ತಿಲ್ಲ ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಕಂಗನಾ ಕಾಲೆಳೆದ ಪ್ರಕಾಶ್​ ರಾಜ್..!

ಒಂದು  ಚಿತ್ರದಿಂದ ತಾನೋರ್ವ ಲಕ್ಷ್ಮೀಬಾಯಿ ಎಂದು ಕಂಗನಾ ಭಾವಿಸಿಕೊಂಡಿದ್ದರೆ, ದೀಪಿಕಾಳ ಪದ್ಮಾವತಿ, ಹೃತಿಕ್​ ಅವರ ಅಕ್ಬರ್​, ಶಾರೂಕ್​ ಅವರ ಅಶೋಕ, ಅಜಯ್​ ದೇವಗನ್​ ಅವರ ಭಗತ್​ ಸಿಂಗ್, ​ಆಮೀರ್​ ಖಾನ್​ ಅವರ ಮಂಗಲ ಪಾಂಡೆ ಮತ್ತು ವಿವೇಕ್​ ಅವರ ಮೋದಿ ಜಿ… ಏನು?  ಎಂದು ಪ್ರಕಾಶ್​ ರಾಜ್​ ಟ್ವೀಟ್ ಮಾಡಿ ಕಂಗನಾರ ಕಾಲೆಳೆದಿದ್ದಾರೆ.

ಜಮೀರ್ ಅಹಮದ್, ಸಂಬರಗಿಗೆ ಸಿಸಿಬಿ ನೊಟೀಸ್.?

ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು ಶಾಸಕ ಜಮೀರ್ ಅಹಮದ್ ಖಾನ್ ಹಾಗೂ ಪ್ರಶಾಂತ್ ಸಂಬರಗಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ. ಶ್ರೀಲಂಕಾದಲ್ಲಿ ಕ್ಯಾಸಿನೋ ನಡೆಸುತ್ತಿದ್ದ ಶೇಕ್ ಫಾಸಿಲ್ ಜತೆ ಸಂಪರ್ಕ ಹೊಂದಿದ್ದ ಫೋಟೋ ಹಾಘೂ ವಿಡಿಯೋ ವೈರಲ್ ಆಗುತ್ತಿರುವ ಹಿನ್ನೆಲೆಯಲ್ಲಿ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್‍ಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಗಿಣಿ-ಸಂಜನಾ ಜೈಲು ಹಕ್ಕಿ ಆಗೋದು ಪಕ್ಕಾನಾ..?

ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯಾ ಕೇಸಲ್ಲಿ ಬಂಧನಕ್ಕೊಳಗಾಗಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲಾನಿ ನಾಳೆ ಪರಪ್ಪನ ಅಗ್ರಹಾರ ಜೈಲು ಸೇರುವುದು ಪಕ್ಕಾನಾ ಎಂಬ ಮಾತುಗಳು ಕೇಳಿ ಬರುತ್ತಿವೆ. ನಾಳೆ ರಾಗಿಣಿ, ಸಂಜನಾರ ಸಿಸಿಬಿ ಪೊಲೀಸ್ ಕಸ್ಟಡಿ ಕೊನೆಗೊಳ್ಳಲಿದೆ. ರಾಗಿಣಿ ದ್ವಿವೇದಿಯನ್ನು ಸಿಸಿಬಿ ಪೊಲೀಸರು ಮೂರು ಬಾರಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದಾರೆ. ಒಟ್ಟು 11 ದಿನಗಳ ಕಾಲ ರಾಗಿಣಿಯನ್ನು ಸಿಸಿಬಿ ಪೊಲೀಸರು ಕಸ್ಟಡಿಗೆ ಪಡೆದು  ವಿಚಾರಣೆ ನಡೆಸಿದ್ದಾರೆ. ಆದರೆ, ಈಗಾಗಲೇ 10 ದಿನಗಳ ಕಸ್ಟಡಿ ಮುಗಿದು ಹೋಗಿದೆ. ನಾಳೆ ಕಸ್ಟಡಿ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ರಾಗಿಣಿಯನ್ನು ಮತ್ತೆ ಕೋರ್ಟ್ ಮುಂದೆ ಹಾಜರುಪಡಿಸಿ ಇನ್ನಷ್ಟು ದಿನ ವಿಚಾರಣೆಗೆ ನೀಡುವಂತೆ ಮನವಿ ಮಾಡುವ ಸಾಧ್ಯತೆ  ಇದೆ.

ಅಪಾರ್ಟ್‍ಮೆಂಟ್‍ಗಳೇ ಡ್ರಗ್ ಪಾರ್ಟಿ ಅಡ್ಡಾ..?

ಸ್ಯಾಂಡಲ್‍ವುಡ್ ಡ್ರಗ್ ಮಾಫಿಯಾ ನಂಟಿನ ಆರೋಪದ ಮೇಲೆ ಬಂಧಿತರಾಗಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾಗೆ ಹೈಲೆವೆಲ್ ಲಿಂಕ್ ಇರುವುದು ವಿಚಾರಣೆ ಬೆಳಕಿಗೆ ಬಂದಿದ್ದು, ಇಬ್ಬರನ್ನು ವಿಚಾರಣೆ ನಡೆಸದಂತೆ, ಬಂಧಿಸದಂತೆ ರಾಜಕಾರಣಿಗಳು, ಐಎಎಸ್ ಅಧಿಕಾರಿಗಳು ಒತ್ತಡ ಹಾಕಿರುವ ಸಂಗತಿ ಬೆಳಕಿಗೆ ಬಂದಿದೆ. ರಾಗಿಣಿ ಹಾಗೂ ಸಂಜನಾ ವಿಚಾರಣೆ ವೇಳೆ ತಾವು ಪ್ರತಿಷ್ಠಿತ ರಾಜಕಾರಣಿಗಳ ಜತೆ ಸಂಪರ್ಕ ಹೊಂದಿರುವುದು, ರಾಜಕಾರಣಿಗಳು ಹಾಗೂ ಅವರ ಮಕ್ಕಳು ಪಾಲ್ಗೊಳ್ಳುತ್ತಿದ್ದ ಪಾರ್ಟಿಗಳಲ್ಲಿ ತಾವು  ಭಾಗಿಯಾಗಿದ್ದಾಗಿ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಸಂಜನಾ ಪರ ಐಎಎಸ್ ಅಧಿಕಾರಿ ಒತ್ತಡ..!

ನಟಿ ಸಂಜನಾ ಗಲ್ರಾನಿಯನ್ನು ವಿಚಾರಣೆಗೆ ಕರೆಯದಂತೆ ಹಾಗೂ ಬಂಧಿಸದಂತೆ ರಾಜ್ಯದ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಸಿಸಿಬಿ ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದಾರೆ ಎನ್ನಲಾಗಿದೆ.

ವಿಧಾನಸೌಧದಲ್ಲಿ ಕೆಲಸ ಮಾಡಿದ್ದ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಸಂಜನಾಳನ್ನು ಬಂಧನ ಮಾಡಬಾರದು ಎಂದು ಸಿಸಿಬಿ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರಂತೆ. ಆದರೆ, ಪ್ರಬಲ ಸಾಕ್ಷಿ ಸಿಕ್ಕ ಹಿನ್ನೆಲೆಯಲ್ಲಿ ಸಂಜನಾಳನ್ನು ಬಂಧಿಸಲಾಯಿತು. ಸಂಜನಾ ಬಂಧನದ ನಂತರವೂ ವಿಚಾರಣೆ ನೆಪದಲ್ಲಿ ಕಿರುಕುಳ ಕೊಡದಂತೆ ಒತ್ತಡ ಹೇರಿದ್ದರು ಎನ್ನಲಾಗಿದೆ.

DMK ಸಂಸದ ಜಗದರಕ್ಷಕನ್ ಆಸ್ತಿ ಜಪ್ತಿ..!

ವಿದೇಶಿ ವಿನಿಮಯ ನಿರ್ವಹಣ ಕಾಯ್ದೆ ಉಲ್ಲಂಘನೆ ಆರೋಪದಡಿ ಡಿಎಂಕೆ ಪಕ್ಷದ ಸಂಸದ ಎಸ್ ಜಗದರಕ್ಷಕನ್ ಮನೆ ಮೇಲೆ ರೇಡ್ ನಡೆಸಿದ್ದ ಇಡಿ ಅಧಿಕಾರಿಗಳು, ಜಗದರಕ್ಷಕನ್ ಹಾಗೂ ಸಂಬಂಧಿಕರ ಸುಮಾರು 89.19 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ ಮಡಿದ್ದಾರೆ. ಶನಿವಾರ ಮುಂಜಾನೆ ಮನೆ , ಕಚೇರಿ ಹಾಗೂ ಸಂಬಂಧಿಕರ ಮನೆ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸೆ. 37ಎ ಅಡಿಯಲ್ಲಿ ಜಗದರಕ್ಷಕನ್ ವಿರುದ್ಧ ಕೇಸ್ ದಾಖಲು ಮಾಡಿಕೊಂಡಿದ್ದು, ಆಸ್ತಿ ವಶಪಡಿಸಿಕೊಂಡಿದ್ದಾರೆ.

ಕೇಂದ್ರದ ಮಾಜಿ ಸಚಿವ ರಘುವಂಶ ಪ್ರಸಾದ್ ಸಿಂಗ್ ನಿಧನ

ಆರ್ ಜೆಡಿ  ಮಾಜಿ ನಾಯಕ, ಕೇಂದ್ರದ ಮಾಜಿ ಸಚಿವ ರಘುವಂಶ ಪ್ರಸಾದ್ ಸಿಂಗ್ ಅವರು ಇಂದು ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ 75 ವರ್ಷ ವಯಸ್ಸಿನ ರಘುವಂಶ ಪ್ರಸಾದ್ ಸಿಂಗ್ ಅವರಿಗೆ ದೆಹಲಿಯ ಏಮ್ಸ್ ನಲ್ಲಿ ವೆಂಟಿಲೇಟರ್ ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ‌ ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.

ಗಣಿನಾಡಿನಲ್ಲಿ ವರುಣಾರ್ಭಟ, ಜನರ ಪರದಾಟ ..!

ಬಳ್ಳಾರಿ : ಗಣಿನಾಡು ಬಳ್ಳಾರಿಯಲ್ಲಿ ವರುಣ ಆರ್ಭಟ ಮುಂದುವರೆದಿದೆ. ಭಾರೀ ಮಳೆಯಿಂದಾಗಿ ಸಿರಗುಪ್ಪ ತಾಲೂಕಿನ  ಗ್ರಾಮಗಳನ್ನು ನಡುಗಡ್ಡೆಯಾಗಿ ಮಾರ್ಪಾಡಾಗಿವೆ. ಅದ್ರಲ್ಲೂ ಹೆಚ್. ಹೊಸಳ್ಳಿ ಮತ್ತು ಹಾಗಲೂರು ಗ್ರಾಮಗಳು ಸಂಪೂರ್ಣವಾಗಿ ಜಲಾವೃತಗೊಂಡು ದ್ವೀಪದಂತೆ ಕಾಣುತ್ತಿವೆ..

ಜಂಪಾ ಜಾದೂ ; ಆರ್ ಸಿ ಬಿ ಖುಷ್

ಯುಎಇನಲ್ಲಿ ಕಲರ್ ಫುಲ್ ಟೂರ್ನಿ ಐಪಿಎಲ್ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಆರ್ ಸಿಬಿ ಸೇರಿದಂತೆ ಎಲ್ಲ ತಂಡಗಳು ಮೈದಾನಕ್ಕಿಳಿದು ತಾಲೀಮು ಆರಂಭಿಸಿವೆ. ಸೆಪ್ಟೆಂಬರ್ 19 ರಿಂದ ಟೂರ್ನಿ ಆರಂಭವಾಗಲಿದ್ದು, ಈಗಾಗಲೇ ಎಲ್ಲಾ ರೀತಿಯ ತಯಾರಿಗಳನ್ನು ಮಾಡಿಕೊಳ್ಳಲಾಗುತ್ತಿವೆ. ಇದರ ಮಧ್ಯೆ ಆರ್ ಸಿಬಿ ತಂಡದ ಸ್ಪಿನ್ನರ್ ಆಡಂ ಜಂಪಾ, ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 4ವಿಕೆಟ್ ಪಡೆದು ಜಾದೂ ಮಾಡಿದ್ದಾರೆ. 10ಓವರ್ ಗಳಲ್ಲಿ 55ರನ್ ನೀಡಿದ ಜಂಪಾ 4ವಿಕೆಟ್ ಪಡೆದ್ರು. ಜಂಪಾ ಸ್ಪಿನ್ ಜಾದೂಗೆ ಆರ್ ಸಿಬಿ ಫ್ರಾಂಚೈಸಿ ಫುಲ್ ಖುಷ್ ಆಗಿದೆ.

ಡೆಲ್ಲಿ ಕ್ಯಾಪಿಟಲ್ ತಂಡ ಗೆಲ್ಲಲಿದೆ

13ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿ ಐಪಿಎಲ್ ಟ್ರೋಫಿಯನ್ನು ಡೆಲ್ಲಿ ಕ್ಯಾಪಿಟಲ್ ತಂಡ ಗೆಲ್ಲಲಿದೆ ಎಂದು ಇಂಗ್ಲೆಂಡ್ ತಂಡದ ಮಾಜಿ ನಾಯಕ ಕೆವಿನ್ ಪೀಟರ್ಸನ್ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿರುವ ಕೆವಿನ್ ಪೀಟರ್ಸನ್, ಇಂಗ್ಲೆಂಡ್ ಬಬಲ್ ನಿಂದ ದುಬೈಗೆ … ನಾವು ಮತ್ತೆ ಕ್ರಿಕೆಟ್ ಗೆ ಮರಳಿರುವುದಕ್ಕೆ ಸಂತೋಷವಾಗುತ್ತಿದೆ. ಐಪಿಎಲ್ 2020ಯಲ್ಲಿ ಕೆಲಸ ಮಾಡುವುದಕ್ಕೆ ಅತ್ಯಂತ ಖುಷಿಪಡುತ್ತೇನೆ ಎಂದಿರುವ ಅವರು ಈ ಬಾರಿ ಯಾರು ಗೆಲ್ಲುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಹಾಗೆ ನನಗೆ ಡೆಲ್ಲಿ ಕ್ಯಾಪಿಟಲ್ ಗೆಲ್ಲುವ ವಿಶ್ವಾಸವಿದೆ ಎಂದು ಬರೆದುಕೊಂಡಿದ್ದಾರೆ.

 

 

Tags: BellaryCinemacover storiesCrimeentertainmentInternationalNationalnewspoliticsroundupSports
ShareTweetSendShare
Join us on:

Related Posts

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

by Shwetha
March 25, 2026
0

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಪ್ರತೀಕವಾಗಿರುವ ಕೆಎಂಎಫ್ ನ ನಂದಿನಿ ಬ್ರ್ಯಾಂಡ್ ಇದೀಗ ಕ್ರಿಕೆಟ್ ಜಗತ್ತಿನ ರಣಕಣಕ್ಕೆ ಇಳಿದಿದೆ. ಜಗತ್ತಿನಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು...

ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

by Shwetha
March 25, 2026
0

ರಾಜ್ಯದಲ್ಲಿ ಬಹುಕಾಲದಿಂದ ಮುಂದೂಡಲಾಗುತ್ತಿರುವ ಗ್ರಾಮ ಪಂಚಾಯ್ತಿ ಚುನಾವಣೆಗಳು ಮತ್ತೆ ಮುಂದಕ್ಕೆ ಹೋಗುವ ಸಾಧ್ಯತೆ ಕಾಣುತ್ತಿದೆ. ಸುಮಾರು 5,950 ಗ್ರಾಮ ಪಂಚಾಯತ್‌ಗಳ ಚುನಾವಣೆಗೆ ಸಂಬಂಧಿಸಿದಂತೆ ಮೀಸಲು ಪಟ್ಟಿಯನ್ನು ಅಂತಿಮಗೊಳಿಸಲು...

ಬೆಂಗಳೂರಿನ ವಾಹನ ಸವಾರರೇ ಎಚ್ಚರ  ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ  ದಂಡ ಗ್ಯಾರಂಟಿ!

ಬೆಂಗಳೂರಿನ ವಾಹನ ಸವಾರರೇ ಎಚ್ಚರ ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ ದಂಡ ಗ್ಯಾರಂಟಿ!

by Shwetha
March 25, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವ ಮುನ್ನ ನೂರು ಬಾರಿ ಯೋಚಿಸಿ. ಏಕೆಂದರೆ ನಗರದಲ್ಲಿ ಸಂಚಾರಿ ಪೊಲೀಸರು ಮತ್ತೆ ಟೋಯಿಂಗ್ ಅಸ್ತ್ರವನ್ನು ಕೈಗೆತ್ತಿಕೊಂಡಿದ್ದಾರೆ....

ತೈಲ ಕೊರತೆ ನೀಗಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ: ಮೋದಿ

ತೈಲ ಕೊರತೆ ನೀಗಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ: ಮೋದಿ

by Shwetha
March 25, 2026
0

ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಗಳ ನಡುವೆಯೂ ತೈಲ ಕೊರತೆಯನ್ನು ಎದುರಿಸಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜ್ಯಸಭೆಯಲ್ಲಿ...

ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಭಿನಂದನೆಗಳು -ಹೈಕಮಾಂಡ್ ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ಕೇರಳಕ್ಕೆ ಹತ್ತು ಕೋಟಿ ನೆರವು : ಆರ್ ಅಶೋಕ್ ಆಕ್ರೋಶ

ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಭಿನಂದನೆಗಳು -ಹೈಕಮಾಂಡ್ ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ಕೇರಳಕ್ಕೆ ಹತ್ತು ಕೋಟಿ ನೆರವು : ಆರ್ ಅಶೋಕ್ ಆಕ್ರೋಶ

by Shwetha
March 25, 2026
0

ಬೆಂಗಳೂರು: ರಾಜ್ಯದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿರುವಾಗ, ದೆಹಲಿ ನಾಯಕರನ್ನು ಮೆಚ್ಚಿಸಿ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಏಕೈಕ ಉದ್ದೇಶದಿಂದ ನೆರೆ ರಾಜ್ಯ ಕೇರಳಕ್ಕೆ 10 ಕೋಟಿ ರೂಪಾಯಿಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram