ADVERTISEMENT
Friday, July 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Top news – ಜೇಮ್ಸ್ ಟೀಸರ್ ರಿಲೀಸ್, ಹಿಜಬ್ ವಿವಾದ , NEET ಪರೀಕ್ಷೆ ವಿಳಂಬ ಸೇರಿದಂತೆ ದಿನದ ಪ್ರಮುಖ ಸುದ್ದಿಗಳು….

Namratha Rao by Namratha Rao
February 11, 2022
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ತರಗತಿಗಳನ್ನ ಮತ್ತೆ ತೆರೆಯಲು ರಾಜ್ಯ ಸರ್ಕಾರ ನಿರ್ಧಾರ..???

ಹಿಜಾಬ್ ಮತ್ತು ಕೆಸರಿ ಶಾಲು ವಿವಾದಿಂದ ಸ್ಥಗಿತಗೊಂಡಿದ್ದ ತರಗತಿಗಳನ್ನ ಮತ್ತೆ ತೆರೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಪೊಲಿಸ್ ಭದ್ರತೆಯಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

Related posts

ಸ್ವಚ್ಛ ಬೆಂಗಳೂರು ಎಂಬುದು ಕೇವಲ ಘೋಷಣೆಯೇ?ಅಭಿವೃದ್ಧಿಯ ಮಂತ್ರ ಜಪಿಸುವ ಅಧಿಕಾರಿಗಳೇ, ಈ ಕಸದ ರಾಶಿಯೇ ನಿಮ್ಮ ಸಾಧನೆಯೇ? 500 ಕುಟುಂಬಗಳ ಉಸಿರು ಕಟ್ಟುತ್ತಿದೆ ಈ ಡಂಪಿಂಗ್ ಯಾರ್ಡ್!ಹೆಮ್ಮಿಗೆಪುರ ನಿವಾಸಿಗಳ ಕಣ್ಣೀರಿನ ಕಥೆ

ಸ್ವಚ್ಛ ಬೆಂಗಳೂರು ಎಂಬುದು ಕೇವಲ ಘೋಷಣೆಯೇ?ಅಭಿವೃದ್ಧಿಯ ಮಂತ್ರ ಜಪಿಸುವ ಅಧಿಕಾರಿಗಳೇ, ಈ ಕಸದ ರಾಶಿಯೇ ನಿಮ್ಮ ಸಾಧನೆಯೇ? 500 ಕುಟುಂಬಗಳ ಉಸಿರು ಕಟ್ಟುತ್ತಿದೆ ಈ ಡಂಪಿಂಗ್ ಯಾರ್ಡ್!ಹೆಮ್ಮಿಗೆಪುರ ನಿವಾಸಿಗಳ ಕಣ್ಣೀರಿನ ಕಥೆ

July 17, 2026
ನಿಮ್ಮ ಪಿಎಫ್ ಖಾತೆಗೆ ಬಡ್ಡಿ ಹಣ ಬಂದಿದೆಯೇ ಮನೆಯಲ್ಲೇ ಕುಳಿತು ಚೆಕ್ ಮಾಡಲು ಹೀಗೆ ಮಾಡಿ ಸಾಕು

ನಿಮ್ಮ ಪಿಎಫ್ ಖಾತೆಗೆ ಬಡ್ಡಿ ಹಣ ಬಂದಿದೆಯೇ ಮನೆಯಲ್ಲೇ ಕುಳಿತು ಚೆಕ್ ಮಾಡಲು ಹೀಗೆ ಮಾಡಿ ಸಾಕು

July 17, 2026

ರಾಜ್ಯದಲ್ಲಿ ಹಿಜಬ್ – ಕೇಸರಿ ಶಾಲು ವಿವಾದ – ವಿಚಾರಣೆ ನಿರಾಕರಿಸಿದ ‘ಸುಪ್ರೀಂ’

ರಾಜ್ಯದಲ್ಲಿ ಹಿಜಬ್ – ಕೇಸರಿ ಶಾಲು ವಿವಾದದ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನ ಸುಪ್ರೀಂ ಕೋರ್ಟ್ ನಿರಾಕರಿಸಿದೆ… ಈ ಪ್ರಕರಣ ಹೈಕೋರ್ಟ್ ನಲ್ಲಿಯೇ ಮುಂದುವರೆಯಲಿ ಎಂದು ತಿಳಿಸಿದೆ.. ಸುಪ್ರೀಂ ಕೋರ್ಟ್ ಪ್ರತಿಯೊಬ್ಬ ನಾಗರಿಕನ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸುವುದಾಗಿ ಹೇಳಿದೆ. ಹೈಕೋರ್ಟ್ ನ ಮೌಖಿಕ ತೀರ್ಪನ್ನು ಪ್ರಶ್ನಿಸಿ ವಿದ್ಯಾರ್ಥನಿ ಇಂದು ಮನವಿ ಸಲ್ಲಿದ್ದರು.

supreme - saakshatv

ಜೇಮ್ಸ್ ಚಿತ್ರದ ಟೀಸರ್ ರಿಲೀಸ್ 

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್ ಚಿತ್ರದ ಟೀಸರ್  ರಿಲೀಸ್ ಆಗಿದೆ.  ಪುನೀತ್ ರಾಜ್ ಕುಮಾರ್ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ.. 1 ನಿಮಿಷ 27 ಸೆಕೆಂಡ್ ಗಳ ಟೀಸರ್ ನಲ್ಲಿ  ಜೆಮ್ಸ್  ಸಣ್ಣ ಪರಿಚಯವಿದೆ. ಪಕ್ಕಾ ಆಕ್ಷನ್  ಸ್ವೀಕ್ವೆನ್ಸ್ ಗಳಲ್ಲಿ ಪುನೀತ್ ಸ್ಟೈಲಿಸ್ ಆಗಿ ಕಾಣಿಸಿಕೊಂಡಿದ್ದಾರೆ. ಪಿ ಆರ್ ಕೆ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ  ಅಶ್ವಿನಿ ಪುನೀತ್ ರಾಜ್ ಕುಮಾರ್  ಟೀಸರ್ ರಿಲೀಸ್ ಮಾಡಿದ್ದಾರೆ.

NEET  ಪರೀಕ್ಷೆ ವಿಳಂಬ

ನೀಟ್ ಪರೀಕ್ಷೆಗೆ ವಿಳಂಬವಾದ ಕಾರಣ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ್ದ ದಂಡ ಶುಲ್ಕವನ್ನ  ಹಿಂದಿರುಗಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಉನ್ನತ ಶಿಕ್ಷಣ ಸಚಿವ  ಅಶ್ವತ್ ನಾರಾಯಣ್ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿ ಮಾಹಿತಿ ಕೊಟ್ಟಿದ್ದಾರೆ. ಈ ಬಾರಿಯ NEET ಪರೀಕ್ಷೆ ವಿಳಂಬವಾದ ಕಾರಣ ಈಗಾಗಲೇ ಎಂಜಿನಿಯರಿಂಗ್ ಸೀಟು ಪಡೆದು ಈಗ ವೈದ್ಯಕೀಯ ಕೋರ್ಸ್‌ಗೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿಧಿಸುತ್ತಿದ್ದ ದಂಡ ಶುಲ್ಕ ರದ್ದುಪಡಿಸಲಾಗಿದೆ. ವಿದ್ಯಾರ್ಥಿಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನೂ ಹಿಂದಿರುಗಿಸಲು ಸೂಚಿಸಲಾಗಿದ್ದು ಈ ವಿನಾಯಿತಿ ಈ ವರ್ಷಕ್ಕೆ ಮಾತ್ರ‌ ಅನ್ವಯವಾಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

ಮಹಾರಾಷ್ಟ್ರದಲ್ಲಿ ಹಿಜಬ್ ಹೋರಾಟ….

ರಾಜ್ಯದಲ್ಲಿ ಹಿಜಬ್ ನಿಷೇಧಕ್ಕೆ ವಿರೋಧಿಸಿ ಮಹಾರಾಷ್ಟ್ರದ ಮಾಲೆಗಾಂವ್‌ನಲ್ಲಿ ಗುರುವಾರ ಸಾವಿರಾರು ಮುಸ್ಲೀಂ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. ‘ಜಾಮಿಯೆತ್ ಉಲೇಮಾ ಇ ಹಿಂದ್’ ಎಂಬ ಸಂಘಟನೆ ಈ ಪ್ರತಿಭಟನೆಯನ್ನು ನೇತೃತ್ವ ವಹಿಸಿದ್ದು, ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.. ಅಲ್ಲದೇ   ‘ಹಿಜಾಬ್ ನಮ್ಮ ಹಕ್ಕು, ಹಿಜಾಬ್ ಮೇಲಿನ ನಿಷೇಧವನ್ನು ಹಿಂಪಡೆಯಿರಿ’ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಮಾಲೆಗಾಂವ್‌ ನಲ್ಲಿ ಫೆಬ್ರವರಿ 11 ರ ಶುಕ್ರವಾರವನ್ನು ‘ಹಿಜಾಬ್ ದಿನ’ ಎಂದು ಆಚರಿಸುವುದಾಗಿ ಘೋಷಿಸಿದ್ದಾರೆ.

hijab - saakshatv

ಕೋವಿಡ್ ಅಪ್ ಡೇಟ್ಸ್…

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 58,077 ಹೊಸ ಪ್ರಕರಣಗಳು ಪತ್ತೆಯಾಗಿದೆ. ಸಕ್ರಿಯ ಪ್ರಕರಣಗಳು 6,97,802 ಇದ್ದು , 1,50,407 ಲಕ್ಷ ಜನರು ಚೇತರಿಸಿಕೊಂಡಿದ್ದಾರೆ.. ನಿನ್ನೆ ಒಂದೇ ದಿನ 657 ಜನರು ಸಾವನ್ನಪ್ಪಿದ್ದಾರೆ..

ಕೇಂದ್ರ ಬಜೆಟ್ 2022 ರ ಬಗ್ಗೆ ಇರ್ಮಲಾ ಸೀತಾರಾಮನ್  ಮಾತು

ನವದೆಹಲಿ: 2022 ಬಜೆಟ್ ಮಂಡನೆ ಮೇಲಿನ ಚರ್ಚೆ ನಡೆಯುತ್ತಿದ್ದು, ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ನ ಅವರು ಈ ಬಜೆಟ್ ದೇಶದ ಆರ್ಥುಕತೆಗೆ ಸ್ಥಿರತೆ ಮತ್ತು ತೆರಿಗೆ ವಿಚಾರದಲ್ಲಿ ದೇಶಕ್ಕೆ ಸಹಾಯಕಾರಿಯಾಗಲಿದೆ ಎಂದು ವಿತ್ತ ಸಚಿವೆ ತಮ್ಮ ಬಜೆಟ್ ನ್ನು ಸಮರ್ಥಿಸಿಕೊಂಡರು. ಇಂದು ರಾಜ್ಯಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ವಿರೋಧ ಪಕ್ಷಗಳು ಆರೋಪಕ್ಕೆ ಉತ್ತರಿಸಿದ ಅವರು ನಾವು ನಿರಂತರತೆ ಬೆಳವಣಿಗೆಗೆ ಸಹಕಾರಿಯಾಗುವಂಥ ಬಜೆಟ್ ಮಂಡಿಸಿದ್ದೇವೆ.ಆರ್ಥಿಕತೆಯು ಸಾಂಕ್ರಾಮಿಕ ರೋಗದಿಂದ ಹೊರಬರುವ ಹಂತದಲ್ಲಿ ನಿರಂತರತೆಯ ಹಂತವು ನಿರ್ಣಾಯಕವಾಗಿದೆ” ಎಂದು ಅವರು ಹೇಳಿದರು.

ಟಾಟಾ ಸನ್ಸ್ ಮಂಡಳಿಯ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್

ಟಾಟಾ ಸನ್ಸ್ ಮಂಡಳಿಯ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಅವರನ್ನ ಮುಂದಿನ ಐದು ವರ್ಷಗಳ ಅವಧಿಗೆ ಮರುನೇಮಕ ಮಾಡಲಾಗಿದೆ.

ಟಾಲಿವುಡ್ ಡ್ರಗ್ಸ್ ಕೇಸ್ ಮತ್ತೆ ಮುನ್ನಲೆಗೆ

ಟಾಲಿವುಡ್ ಡ್ರಗ್ಸ್ ಕೇಸ್ ಮತ್ತೆ ಮುನ್ನಲೆಗೆ ಬಂದಿದೆ. ಡ್ರಗ್ಸ್ ಕೇಸ್ ವಿವರಗಳನ್ನು ನೀಡುವಂತೆ ಇಡಿ, ಎಕ್ಸೈಸ್ ಇಲಾಖೆಗೆ ಪತ್ರ ಬರೆದಿದೆ ಎಂದು ವರದಿಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಸಿನಿತಾರೆಯೆರನ್ನ ವಿಚಾರಣೆ ನಡೆಸಿರುವ ಇಡಿ, ಬ್ಯಾಂಕ್ ಲೇವಾದೇವಿಗಳನ್ನು ಪರಿಶೀಲನೆ ನಡೆದಿದೆ.

ಪ್ರಿನ್ಸ್ – ದಳಪತಿ ಫ್ಯಾನ್ ವಾರ್

ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು, ಕಾಲಿವುಡ್ ಸ್ಟಾರ್ ಹೀರೋ ದಳಪತಿ ವಿಜಯ್ ಅಭಿಮಾನಿಗಳ ನಡುವೆ ಟ್ವಿಟರ್ ವಾರ್ ಶುರುವಾಗಿದೆ. ಈ ಸ್ಟಾರ್ ಹೀರೋಗಳಿಗೆ ದಕ್ಷಿಣದಲ್ಲಿ ಒಳ್ಳೆಯ ಕ್ರೇಜ್ ಇದೆ. ಆದರೆ ಈ ಇಬ್ಬರ ಅಭಿಮಾನಿಗಳ ಮಧ್ಯೆ ಇದೀಗ ಟ್ವಿಟ್ಟರ್ ವಾರ್ ಶುರುವಾಗಿದೆ.

ಕೊಹ್ಲಿ ಡಕ್ ಔಟ್

ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಸಂಪೂರ್ಣವಾಗಿ ಎಡವಿದ್ದಾರೆ. ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ವಿರಾಟ್ ಶೂನ್ಯ ಸುತ್ತಿದ್ದಾರೆ. ಇದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ 15 ಬಾರಿ ಶೂನ್ಯಕ್ಕೆ ಔಟ್ ಆದಂತೆ ಆಗಿದೆ.

 

Tags: bengaluruCinemahijab controvercykarnatakanational newssaakshatSports
ShareTweetSendShare
Join us on:

Related Posts

ಸ್ವಚ್ಛ ಬೆಂಗಳೂರು ಎಂಬುದು ಕೇವಲ ಘೋಷಣೆಯೇ?ಅಭಿವೃದ್ಧಿಯ ಮಂತ್ರ ಜಪಿಸುವ ಅಧಿಕಾರಿಗಳೇ, ಈ ಕಸದ ರಾಶಿಯೇ ನಿಮ್ಮ ಸಾಧನೆಯೇ? 500 ಕುಟುಂಬಗಳ ಉಸಿರು ಕಟ್ಟುತ್ತಿದೆ ಈ ಡಂಪಿಂಗ್ ಯಾರ್ಡ್!ಹೆಮ್ಮಿಗೆಪುರ ನಿವಾಸಿಗಳ ಕಣ್ಣೀರಿನ ಕಥೆ

ಸ್ವಚ್ಛ ಬೆಂಗಳೂರು ಎಂಬುದು ಕೇವಲ ಘೋಷಣೆಯೇ?ಅಭಿವೃದ್ಧಿಯ ಮಂತ್ರ ಜಪಿಸುವ ಅಧಿಕಾರಿಗಳೇ, ಈ ಕಸದ ರಾಶಿಯೇ ನಿಮ್ಮ ಸಾಧನೆಯೇ? 500 ಕುಟುಂಬಗಳ ಉಸಿರು ಕಟ್ಟುತ್ತಿದೆ ಈ ಡಂಪಿಂಗ್ ಯಾರ್ಡ್!ಹೆಮ್ಮಿಗೆಪುರ ನಿವಾಸಿಗಳ ಕಣ್ಣೀರಿನ ಕಥೆ

by Shwetha
July 17, 2026
0

ಬೆಂಗಳೂರು ದಕ್ಷಿಣದ ಹೆಮ್ಮಿಗೆಪುರ ವಾರ್ಡ್ ವ್ಯಾಪ್ತಿಯಲ್ಲಿರುವ ಕಾವೇರಿ ಪೈಪ್ ಲೈನ್ ರಸ್ತೆ ಇಂದು ಅಭಿವೃದ್ಧಿಯ ಸಂಕೇತವಾಗುವ ಬದಲು, ಅನಾರೋಗ್ಯದ ಅಗರವಾಗಿ ಮಾರ್ಪಟ್ಟಿದೆ. ನಗರಕ್ಕೆ ಕುಡಿಯುವ ನೀರು ಪೂರೈಸುವ...

ನಿಮ್ಮ ಪಿಎಫ್ ಖಾತೆಗೆ ಬಡ್ಡಿ ಹಣ ಬಂದಿದೆಯೇ ಮನೆಯಲ್ಲೇ ಕುಳಿತು ಚೆಕ್ ಮಾಡಲು ಹೀಗೆ ಮಾಡಿ ಸಾಕು

ನಿಮ್ಮ ಪಿಎಫ್ ಖಾತೆಗೆ ಬಡ್ಡಿ ಹಣ ಬಂದಿದೆಯೇ ಮನೆಯಲ್ಲೇ ಕುಳಿತು ಚೆಕ್ ಮಾಡಲು ಹೀಗೆ ಮಾಡಿ ಸಾಕು

by Shwetha
July 17, 2026
0

ಕೋಟ್ಯಂತರ ಖಾಸಗಿ ವಲಯದ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (ಇಪಿಎಫ್‌ಒ) 2025-26ನೇ ಹಣಕಾಸು ವರ್ಷದ ವಾರ್ಷಿಕ ಬಡ್ಡಿ ಹಣವನ್ನು...

ಸಚಿವ ಸ್ಥಾನಕ್ಕೆ ಅವಕಾಶ ನೀಡಿ; ವರಿಷ್ಠರಿಗೆ ಶಾಸಕ ಅಶೋಕ್ ಪಟ್ಟಣ್ ಮನವಿ

ಸಚಿವ ಸ್ಥಾನಕ್ಕೆ ಅವಕಾಶ ನೀಡಿ; ವರಿಷ್ಠರಿಗೆ ಶಾಸಕ ಅಶೋಕ್ ಪಟ್ಟಣ್ ಮನವಿ

by Shwetha
July 17, 2026
0

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯ ಚರ್ಚೆ ಮತ್ತೆ ತೀವ್ರಗೊಂಡಿರುವ ನಡುವೆ, ಕಾಂಗ್ರೆಸ್ ಶಾಸಕ ಅಶೋಕ್ ಪಟ್ಟಣ್ ಅವರು ಸಚಿವ ಸ್ಥಾನಕ್ಕಾಗಿ ತಮ್ಮ ಆಕಾಂಕ್ಷೆಯನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ...

ಸಾರ್ವಜನಿಕರೇ ಗಮನಿಸಿ ಬಿಎಲ್‌ಒ ಸೋಗಿನಲ್ಲಿ ಬರುವ ಕರೆಗಳಿಗೆ ಒಟಿಪಿ ನೀಡಿದರೆ ಖಾಲಿಯಾಗಲಿದೆ ನಿಮ್ಮ ಹಣ

ಸಾರ್ವಜನಿಕರೇ ಗಮನಿಸಿ ಬಿಎಲ್‌ಒ ಸೋಗಿನಲ್ಲಿ ಬರುವ ಕರೆಗಳಿಗೆ ಒಟಿಪಿ ನೀಡಿದರೆ ಖಾಲಿಯಾಗಲಿದೆ ನಿಮ್ಮ ಹಣ

by Shwetha
July 17, 2026
0

ಸದ್ಯ ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಅಂದರೆ ಎಸ್‌ಐಆರ್ ಪ್ರಕ್ರಿಯೆಯು ಅತ್ಯಂತ ವೇಗವಾಗಿ ನಡೆಯುತ್ತಿದೆ. ಮತದಾನದ ಹಕ್ಕನ್ನು ಪಡೆಯಲು ಅಥವಾ ತಿದ್ದುಪಡಿ ಮಾಡಲು ಲಕ್ಷಾಂತರ...

9ನೇ ತರಗತಿಯಲ್ಲಿ ಮೂರನೇ ಭಾಷೆ ಸೂಕ್ತವಲ್ಲ: ನ್ಯಾ. ಬಿ.ವಿ. ನಾಗರತ್ನ

9ನೇ ತರಗತಿಯಲ್ಲಿ ಮೂರನೇ ಭಾಷೆ ಸೂಕ್ತವಲ್ಲ: ನ್ಯಾ. ಬಿ.ವಿ. ನಾಗರತ್ನ

by Shwetha
July 17, 2026
0

ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರು, CBSE 9ನೇ ತರಗತಿ ಪಠ್ಯಕ್ರಮದಲ್ಲಿ ಹೊಸ ಮೂರನೇ ಭಾಷೆಯನ್ನು ಪರಿಚಯಿಸುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ತಮಿಳುನಾಡು ಸರ್ಕಾರವು ಹೈಕೋರ್ಟ್ ತೀರ್ಪನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram