ಸೋಲು ಸಹಜ : ಮಂಡ್ಯ ರಾಜಕೀಯಕ್ಕೆ ಮತ್ತೆ ನಿಖಿಲ್ ಎಂಟ್ರಿ
ಮಂಡ್ಯ : ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋಲುಂಡು ಮಂಡ್ಯದತ್ತ ಮುಖದೇ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದ ನಿಖಿಲ್ ಕುಮಾರಸ್ವಾಮಿ ಮತ್ತೆ ಮಂಡ್ಯ ರಾಜಕೀಯ ಅಖಾಡಕ್ಕೆ ಧುಮುಕುವ ಸುಳಿವು ನೀಡಿದ್ದಾರೆ.
ನನ್ನ ಕರ್ಮಭೂಮಿ ಮಂಡ್ಯ. ನನ್ನ ಆಯ್ಕೆ ಮಂಡ್ಯ. ಸೋಲು ಗೆಲುವು ರಾಜಕಾರಣದಲ್ಲಿ ಸಹಜ.
ಆದ್ರೆ ಯಾವ ರಾಜಕಾರಣಿಗಳೂ ಮನೆಯಲ್ಲಿ ಕೂರಲ್ಲ.
ಜನರೊಂದಿಗೆ ನಾವಿರುತ್ತೇವೆ, ಜನ ನನ್ನನ್ನು ಒಪ್ಪಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳುವ ಮೂಲಕ ಮತ್ತೆ ಮಂಡ್ಯ ರಾಜಕೀಯಕ್ಕೆ ಎಂಟ್ರಿ ಕೊಡುವುದಾಗಿ ಸೂಚ್ಯವಾಗಿ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಚೌಡೇನಹಳ್ಳಿ ಗ್ರಾಮದ ರೈತ ನಂಜೇಗೌಡ ಸಾಲಬಾಧೆ ತಾಳಲಾರದೆ ವಿಷಸೇವಿಸಿ ಶುಕ್ರವಾರ ಮೃತಪಟ್ಟಿದ್ದರು.
ಈ ಹಿನ್ನೆಲೆಯಲ್ಲಿ ಮೃತನ ಮನೆಗೆ ಭಾನುವಾರ ಭೇಟಿ ನೀಡಿದ ನಿಖಿಲ್, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಿಎಸ್ ವೈ ಕೋಟೆಯಲ್ಲಿ ಸಿದ್ದರಾಮಯ್ಯಗೆ ಭಾರಿ ಕ್ರೇಜ್
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ನಂಜೇಗೌಡರು ಸಾಲದ ಹೊರೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬಡ್ಡಿ ಕಟ್ಟಲಾಗದೆ, ಬೆಳೆಗೆ ಸರಿಯಾದ ಬೆಲೆ ಸಿಗದೆ ಕೆಲ ರೈತರು ಆತ್ಮಹತ್ಯೆ ದಾರಿ ಹಿಡಿದಿರುವುದು ವಿಪರ್ಯಾಸ.
ಮುಂದಿನ ದಿನಗಳಲ್ಲಿ ರೈತರು ಸಾಲ ಮಾಡದ ರೀತಿ ಕಾರ್ಯಕ್ರಮ ಮಾಡೋದು ಕುಮಾರಣ್ಣನ ಕನಸಾಗಿತ್ತು.
ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ನಾವು ಹೋಗಬಹುದು, ಆದರೆ ಸರ್ಕಾರ ರೈತರ ಆತ್ಮಹತ್ಯೆ ನಿಲ್ಲಿಸುವ ರೀತಿಯಲ್ಲಿ ಕೆಲಸ ಮಾಡ್ಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ಮುಂದಿನ ಎಂಪಿ ನಿಖಿಲ್ ಎಂಬ ಅಭಿಮಾನಿಗಳ ಘೋಷಣೆ ವಿಚಾರವಾಗಿ ಪ್ರತಿಕ್ರಿಯಿಸಿದ ನಿಖಿಲ್, ಅಭಿಮಾನಿಗಳು ಮತ್ತು ಕಾರ್ಯಕರ್ತರು ನನ್ನ ಮೇಲೆ ವಿಶೇಷ ಪ್ರೀತಿ- ಗೌರವ ಇಟ್ಟಿದ್ದಾರೆ.
ಅವರಿಗಾಗಿ ನಾನು ಹೋರಾಟ ಮಾಡ್ತೀನಿ. ನನ್ನ ಕರ್ಮಭೂಮಿ ಮಂಡ್ಯ. ನನ್ನ ಆಯ್ಕೆ ಮಂಡ್ಯ. ಸೋಲು ಗೆಲುವು ರಾಜಕಾರಣದಲ್ಲಿ ಸಹಜ.
ಬಾ ಲೇ ಮಗನೇ ಎಂದು ತೋಳು ತಟ್ಟಿದ ಭೀಮಾನಾಯ್ಕ್
ಆದ್ರೆ ಯಾವ ರಾಜಕಾರಣಿಗಳೂ ಮನೆಯಲ್ಲಿ ಕೂರಲ್ಲ. ಜನರೊಂದಿಗೆ ನಾವಿರುತ್ತೇವೆ, ಜನ ನನ್ನನ್ನು ಒಪ್ಪಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel