ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಬೆಳಗ್ಗೆ ಇಡ್ಲಿ ಮಧ್ಯಾಹ್ನ ನಾಟಿ ಕೋಳಿ ರಾತ್ರಿ ಬೆಳ್ಳುಳ್ಳಿ ಕಬಾಬ್: ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕೆಂಡಾಮಂಡಲ

Nikhil Kumaraswamy Kendamandala against the state government

Shwetha by Shwetha
December 4, 2025
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದ್ದು, ಕೇವಲ ಉಪಹಾರ ಇಲಾಖೆ ಮಾತ್ರ ಸಕ್ರಿಯವಾಗಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಬ್ರೇಕ್‌ಫಾಸ್ಟ್ ಮತ್ತು ಡಿನ್ನರ್ ಮೀಟಿಂಗ್‌ಗಳನ್ನು ವ್ಯಂಗ್ಯಭರಿತವಾಗಿ ಟೀಕಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿ ಶೂನ್ಯವಾಗಿದ್ದು, ಆಂತರಿಕ ರಾಜಕೀಯ ಮತ್ತು ಅಧಿಕಾರ ಉಳಿಸಿಕೊಳ್ಳುವ ಕಸರತ್ತುಗಳೇ ಹೆಚ್ಚಾಗಿವೆ. ಬ್ರೇಕ್‌ಫಾಸ್ಟ್ ಮೀಟಿಂಗ್, ಡಿನ್ನರ್ ಮೀಟಿಂಗ್ ಎಂದು ಕಾಲಹರಣ ಮಾಡಿದರೆ ಜನರಿಗೆ ನೀವು ನೀಡುವ ಸಂದೇಶವಾದರೂ ಏನು? ಬೆಳಗ್ಗೆ ಇಡ್ಲಿ, ಮಧ್ಯಾಹ್ನ ನಾಟಿ ಕೋಳಿ ಊಟ, ರಾತ್ರಿ ಡಿನ್ನರ್ ಮೀಟಿಂಗ್ ನಲ್ಲಿ ಬೆಳ್ಳುಳ್ಳಿ ಕಬಾಬ್ ಬರುತ್ತದೆ ಎಂದೇನಾದರೂ ಈ ಸಭೆಗಳನ್ನು ಮಾಡುತ್ತಿದ್ದೀರಾ ಎಂದು ನಿಖಿಲ್ ಕುಮಾರಸ್ವಾಮಿ ಪ್ರಶ್ನಿಸಿದರು. ಪಕ್ಷದಲ್ಲಿ ಎಲ್ಲವೂ ಸರಿಯಿದೆ ಎನ್ನುವುದಾದರೆ ಅದನ್ನು ಆಡಳಿತದಲ್ಲಿ ತೋರಿಸಿ, ಅದನ್ನು ಬಿಟ್ಟು ಈ ರೀತಿ ಭೋಜನ ಕೂಟಗಳನ್ನು ನಡೆಸುವ ಅಗತ್ಯವೇನಿದೆ ಎಂದು ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

Related posts

ಪುಟಿನ್‌ ಗೆ ಭಾರತದ ಪ್ರವಾಸದ ವೇಳೆ ‘ಅತೀ ರಹಸ್ಯ’ ಭದ್ರತೆ – ಮಲ, ಮೂತ್ರವೂ ರಷ್ಯಾಕ್ಕೆ ವಾಪಸ್!

ಪುಟಿನ್‌ ಗೆ ಭಾರತದ ಪ್ರವಾಸದ ವೇಳೆ ‘ಅತೀ ರಹಸ್ಯ’ ಭದ್ರತೆ – ಮಲ, ಮೂತ್ರವೂ ರಷ್ಯಾಕ್ಕೆ ವಾಪಸ್!

December 5, 2025
ನಾಟಿಕೋಳಿ ರುಚಿ ಬಿಡಿ, ಬಡವರ ಹಾಸ್ಟೆಲ್ ಊಟ ಮಾಡಿ: ಅಹಿಂದ ಕಾಳಜಿ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಆರ್ ಅಶೋಕ್ ಬಹಿರಂಗ ಸವಾಲ್

ನಾಟಿಕೋಳಿ ರುಚಿ ಬಿಡಿ, ಬಡವರ ಹಾಸ್ಟೆಲ್ ಊಟ ಮಾಡಿ: ಅಹಿಂದ ಕಾಳಜಿ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಆರ್ ಅಶೋಕ್ ಬಹಿರಂಗ ಸವಾಲ್

December 5, 2025

ಒಂದೆಡೆ ಸರ್ಕಾರಿ ನಾಯಕರು ಐಷಾರಾಮಿ ಊಟದ ಸಭೆಗಳಲ್ಲಿ ಮಗ್ನರಾಗಿದ್ದರೆ, ಇನ್ನೊಂದೆಡೆ ಬಡವರು ನರಳಾಡುತ್ತಿದ್ದಾರೆ. ರಾಜ್ಯದ ಆರೋಗ್ಯ ಇಲಾಖೆ ಸಂಪೂರ್ಣವಾಗಿ ಹದಗೆಟ್ಟಿದೆ. ಗರ್ಭಿಣಿಯರು ಮತ್ತು ಮಕ್ಕಳು ಚಿಕಿತ್ಸೆ ಸಿಗದೆ ಬಲಿಯಾಗುತ್ತಿರುವ ಘಟನೆಗಳು ವರದಿಯಾಗುತ್ತಿವೆ. ಅತ್ತ ಶಿಕ್ಷಣ ಇಲಾಖೆಯೂ ಕಂಗೆಟ್ಟಿದ್ದು, ರಾಜ್ಯಾದ್ಯಂತ ಸುಮಾರು 7 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿವೆ. ಶಿಕ್ಷಕರ ನೇಮಕಾತಿಯಾಗದೆ ಮಕ್ಕಳ ಶಿಕ್ಷಣಕ್ಕೆ ಆಪತ್ತು ಬಂದೊದಗಿದೆ ಎಂದು ನಿಖಿಲ್ ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದರು.

ಗುಂಡಿ ಮುಚ್ಚುವ ಯೋಗ್ಯತೆಯೂ ಈ ಸರ್ಕಾರಕ್ಕಿಲ್ಲ

ಬೆಂಗಳೂರು ನಗರದ ದುಸ್ಥಿತಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಅವರು, ರಾಜ್ಯಕ್ಕೆ ಅತಿ ಹೆಚ್ಚು ಆದಾಯ ತಂದುಕೊಡುವ ರಾಜಧಾನಿಯ ರಸ್ತೆಗಳು ಮರಣಕೂಪಗಳಾಗಿವೆ. ರಸ್ತೆ ಯಾವುದು, ಫುಟ್‌ಪಾತ್ ಯಾವುದು ಎಂದು ತಿಳಿಯದಂತಾಗಿದೆ. ಕೇವಲ 15 ಸಾವಿರ ಗುಂಡಿಗಳನ್ನು ಮುಚ್ಚುವ ಯೋಗ್ಯತೆ ಈ ಸರ್ಕಾರಕ್ಕಿಲ್ಲವೇ? ಈಗಾಗಲೇ ಗುಂಡಿಗಳಿಗೆ ಬಿದ್ದು 500 ರಿಂದ 600 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆ ನೇರ ಹೊಣೆಯನ್ನು ಸರ್ಕಾರವೇ ಹೊರಬೇಕು ಎಂದು ಆಗ್ರಹಿಸಿದರು.

ಬ್ರದರ್ಸ್ ನಾಟಕ ಅಭಿಯಾನ

ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಬ್ರದರ್ಸ್ ಬಾಂಧವ್ಯದ ಬಗ್ಗೆಯೂ ನಿಖಿಲ್ ಕುಮಾರಸ್ವಾಮಿ ಲೇವಡಿ ಮಾಡಿದರು. ಕಾಂಗ್ರೆಸ್ ನಾಯಕರು ಯಾವಾಗ ಬ್ರದರ್ ಆಗುತ್ತಾರೋ, ಯಾವಾಗ ಅದು ಕ್ಯಾನ್ಸಲ್ ಆಗುತ್ತದೆಯೋ ಯಾರಿಗೂ ಗೊತ್ತಿಲ್ಲ. ಒಳಗೊಳಗೆ ಅಧಿಕಾರಕ್ಕಾಗಿ ಕಚ್ಚಾಾಟ ನಡೆಯುತ್ತಿದ್ದು, ಯಾರ ಪರ ಸಹಿ ಹಾಕಬೇಕು ಎಂದು ಎ, ಬಿ, ಸಿ ಟೀಮ್‌ಗಳು ರಚನೆಯಾಗಿವೆ. ಕಾಂಗ್ರೆಸ್ ಹೈಕಮಾಂಡ್ ಅಸ್ತಿತ್ವದಲ್ಲಿದ್ದರೆ ಈ ಗೊಂದಲಗಳನ್ನು ಸರಿಪಡಿಸಲಿ ಎಂದು ಸವಾಲು ಹಾಕಿದರು.

ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಎಂ.ಕೃಷ್ಣಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಮೊದಲ ಸಭೆಯಲ್ಲಿ ಪಕ್ಷ ಸಂಘಟನೆ ಕುರಿತು ಚರ್ಚಿಸಲಾಯಿತು. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು ಜಿಬಿಎ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕೋರ್ ಕಮಿಟಿ ಪ್ರವಾಸ ಕೈಗೊಂಡು, ತಾಲೂಕು ಮಟ್ಟದಲ್ಲಿ ಸಂಘಟನೆಯನ್ನು ಚುರುಕುಗೊಳಿಸಲು ಸೂಚನೆ ನೀಡಲಾಯಿತು.

ಸಭೆಯಲ್ಲಿ ಪ್ರಮುಖ ನಾಯಕರಾದ ಸಾ.ರಾ. ಮಹೇಶ್, ಎ. ಮಂಜು, ಹೆಚ್.ಕೆ. ಕುಮಾರಸ್ವಾಮಿ, ನೇಮಿರಾಜ್ ನಾಯ್ಕ್, ಕರೆಮ್ಮ ನಾಯಕ್, ಬಂಡೆಪ್ಪ ಕಾಶೆಂಪೂರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ShareTweetSendShare
Join us on:

Related Posts

ಪುಟಿನ್‌ ಗೆ ಭಾರತದ ಪ್ರವಾಸದ ವೇಳೆ ‘ಅತೀ ರಹಸ್ಯ’ ಭದ್ರತೆ – ಮಲ, ಮೂತ್ರವೂ ರಷ್ಯಾಕ್ಕೆ ವಾಪಸ್!

ಪುಟಿನ್‌ ಗೆ ಭಾರತದ ಪ್ರವಾಸದ ವೇಳೆ ‘ಅತೀ ರಹಸ್ಯ’ ಭದ್ರತೆ – ಮಲ, ಮೂತ್ರವೂ ರಷ್ಯಾಕ್ಕೆ ವಾಪಸ್!

by Shwetha
December 5, 2025
0

ಭಾರತ ಪ್ರವಾಸಕ್ಕೆ ಬರುತ್ತಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭದ್ರತಾ ವ್ಯವಸ್ಥೆಯ ಬಗ್ಗೆ ಈಗ ಜಾಗತಿಕ ಮಟ್ಟದಲ್ಲೇ ಚರ್ಚೆ ಶುರುವಾಗಿದೆ. ಸಾಮಾನ್ಯ ರಾಷ್ಟ್ರಾಧ್ಯಕ್ಷರಿಗೆ ನೀಡುವ ಭದ್ರತೆಗಿಂತಲೂ...

ನಾಟಿಕೋಳಿ ರುಚಿ ಬಿಡಿ, ಬಡವರ ಹಾಸ್ಟೆಲ್ ಊಟ ಮಾಡಿ: ಅಹಿಂದ ಕಾಳಜಿ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಆರ್ ಅಶೋಕ್ ಬಹಿರಂಗ ಸವಾಲ್

ನಾಟಿಕೋಳಿ ರುಚಿ ಬಿಡಿ, ಬಡವರ ಹಾಸ್ಟೆಲ್ ಊಟ ಮಾಡಿ: ಅಹಿಂದ ಕಾಳಜಿ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಆರ್ ಅಶೋಕ್ ಬಹಿರಂಗ ಸವಾಲ್

by Shwetha
December 5, 2025
0

ಬೆಂಗಳೂರು: ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಸರ್ಕಾರಿ ಹಾಸ್ಟೆಲ್ಗಳಲ್ಲಿ ಬಡ ಹೆಣ್ಣು ಮಕ್ಕಳ ಸುರಕ್ಷತೆ ಆತಂಕಕ್ಕೀಡಾಗಿದ್ದು, ಈ ವಿಚಾರವಾಗಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ದೆಹಲಿಯಲ್ಲಿ ಡಿಕೆಶಿ ಬ್ರಹ್ಮಾಸ್ತ್ರ: ಸಿದ್ದರಾಮಯ್ಯ ಬಣದ ಸಚಿವರಿಗೆ ಕಂಟಕ, ಹೈಕಮಾಂಡ್ ಅಂಗಳದಲ್ಲಿ ಸಚಿವರ ತಲೆದಂಡದ ಪಟ್ಟಿ

ದೆಹಲಿಯಲ್ಲಿ ಡಿಕೆಶಿ ಬ್ರಹ್ಮಾಸ್ತ್ರ: ಸಿದ್ದರಾಮಯ್ಯ ಬಣದ ಸಚಿವರಿಗೆ ಕಂಟಕ, ಹೈಕಮಾಂಡ್ ಅಂಗಳದಲ್ಲಿ ಸಚಿವರ ತಲೆದಂಡದ ಪಟ್ಟಿ

by Shwetha
December 5, 2025
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಯಲ್ಲಿ ಹೈಕಮಾಂಡ್ ನಾಯಕರಿಗೆ ಸಲ್ಲಿಸಿರುವ ಗೌಪ್ಯ ವರದಿಯೊಂದು ರಾಜ್ಯ...

Scholarship Alert:ಬಿ.ಎಡ್ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ, ಸಿಗಲಿದೆ 25,000 ರೂ ಪ್ರೋತ್ಸಾಹಧನ ಇಂದೇ ಅಪ್ಲೈ ಮಾಡಿ

Scholarship Alert:ಬಿ.ಎಡ್ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ, ಸಿಗಲಿದೆ 25,000 ರೂ ಪ್ರೋತ್ಸಾಹಧನ ಇಂದೇ ಅಪ್ಲೈ ಮಾಡಿ

by Shwetha
December 5, 2025
0

ಬೆಂಗಳೂರು: ದೇಶದ ಭವಿಷ್ಯವನ್ನು ರೂಪಿಸುವ ಶಿಕ್ಷಕ ವೃತ್ತಿಯನ್ನು ಆಯ್ದುಕೊಂಡು, ಬಿ.ಎಡ್ (B.Ed) ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಶಿಕ್ಷಣ ಕ್ಷೇತ್ರದಲ್ಲಿ...

ಸಂಕ್ರಾಂತಿ ಕ್ರಾಂತಿ ಕೋಡಿಶ್ರೀಗಳ ಸ್ಫೋಟಕ ಭವಿಷ್ಯಕ್ಕೆ ಬೆಚ್ಚಿಬಿದ್ದ ರಾಜಕೀಯ ವಲಯ ಹೈಕಮಾಂಡ್ ನಡೆಗೆ ಸಿದ್ದರಾಮಯ್ಯ ಶರಣಾಗತಿ!?

ಸಂಕ್ರಾಂತಿ ಕ್ರಾಂತಿ ಕೋಡಿಶ್ರೀಗಳ ಸ್ಫೋಟಕ ಭವಿಷ್ಯಕ್ಕೆ ಬೆಚ್ಚಿಬಿದ್ದ ರಾಜಕೀಯ ವಲಯ ಹೈಕಮಾಂಡ್ ನಡೆಗೆ ಸಿದ್ದರಾಮಯ್ಯ ಶರಣಾಗತಿ!?

by Shwetha
December 5, 2025
0

ರಾಜ್ಯ ರಾಜಕೀಯದಲ್ಲಿ ಸದ್ಯದ ವಿದ್ಯಮಾನಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ದೇಹಭಾಷೆಯಲ್ಲಿನ ಬದಲಾವಣೆಗಳು ಅಚ್ಚರಿ ಮೂಡಿಸುತ್ತಿವೆ. ಇದಕ್ಕೆ ಪೂರಕವೆಂಬಂತೆ ಪ್ರಸಿದ್ಧ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳ ಭವಿಷ್ಯವಾಣಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram