ADVERTISEMENT
Saturday, September 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

JDS | ರಾಷ್ಟ್ರೀಯ ಪಕ್ಷಗಳಿಂದ ಧರ್ಮಗಳ ನಡುವೆ ಬೆಂಕಿ : ನಿಖಿಲ್

Mahesh M Dhandu by Mahesh M Dhandu
April 26, 2022
in Hale Mysore, Newsbeat, ಹಳೇ ಮೈಸೂರು
jds
Share on FacebookShare on TwitterShare on WhatsappShare on Telegram

JDS | ರಾಷ್ಟ್ರೀಯ ಪಕ್ಷಗಳಿಂದ ಧರ್ಮಗಳ ನಡುವೆ ಬೆಂಕಿ : ನಿಖಿಲ್

ತುಮಕೂರು: ರಾಜ್ಯದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ಧರ್ಮಗಳ ನಡುವೆ ಬೆಂಕಿ ಹಚ್ಚಿ ಚುನಾವಣೆಯಲ್ಲಿ ಮತ ಪಡೆಯುತ್ತೇವೆ, ರಾಜ್ಯದ ಜನರನ್ನು ಯಾಮಾರಿಸುತ್ತೇವೆ ಎಂಬ ಭ್ರಮೆಯಲ್ಲಿದ್ದರೆ ಇದು ಸುಳ್ಳಾಗುವ ಸಮಯ ದೂರ ಇಲ್ಲ. ಜಾತಿ ಧರ್ಮದ ಲೆಕ್ಕಾಚಾರದ ಮೇಲೆ ರಾಜಕೀಯ ಮಾಡುವ ಕಾಂಗ್ರೆಸ್ ಹಿಜಾಬ್ ವಿಚಾರದಲ್ಲಿ ಯಾವ ಹೇಳಿಕೆಗಳನ್ನು ನೀಡಲಿಲ್ಲ. ಇನ್ನೂ ರಾಜ್ಯ ಸರ್ಕಾರ ಜನರನ್ನು ಎತ್ತಿಕಟ್ಟಿ ಮೌನವಾಗಿ ಕುಳಿತಿದೆ ಎಂದು ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

Related posts

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

September 11, 2026
ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

September 11, 2026

ಪ್ರಾದೇಶಿಕ ನಾಡು, ನುಡಿ ಜಲ ಸಂರಕ್ಷಣೆಗೆ ಸಂಪೂರ್ಣ ಬದ್ಧವಾದ ಜೆಡಿಎಸ್ ಪಕ್ಷದ ಜನತಾಜಲಧಾರೆ ರಥಯಾತ್ರೆ ಇಂದು ತುಮಕೂರು ತಾಲೂಕಿನ ಗುಬ್ಬಿಯಲ್ಲಿ ಸಂಚರಿಸಿತು.  ರಥಯಾತ್ರೆಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಭಾಗಿಯಾಗಿ ತೆರೆದ ವಾಹನದಲ್ಲಿ ಜೆಡಿಎಸ್ ಮುಖಂಡರೊಂದಿಗೆ ರೋಡ್ ಶೋ ನಡೆಸಿದರು. ಪೂರ್ಣ ಕುಂಭ ಹೊತ್ತ ನೂರಾರು ಮಹಿಳೆಯರು ಜನತಾ ಜಲಧಾರೆ ರಥಯಾತ್ರೆಗೆ ಸ್ವಾಗತ ಕೋರಿದರು. ಶ್ರೀ ಚನ್ನಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜನತಾ ಜಲಧಾರೆ ರಥಕ್ಕೆ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಪವಿತ್ರ ಜಲ ಸಂಗ್ರಹಿಸಲಾಯಿತು.

nikhil kumaraswamy slams congress - bjp saaksha tv

ಕಾರ್ಯಕ್ರಮದಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಹಲವು ವರ್ಷಗಳಿಂದ ಅವಕಾಶ ನೀಡುತ್ತಿದ್ದೀರಾ. ಆದರೆ, ಇವರು ಕೊಟ್ಟ ಯಾವ ಆಶ್ವಾಸನೆಗಳನ್ನು ಈಡೇರಿಸಲಿಲ್ಲ. ಕೇವಲ ಸುಳ್ಳಿನ ಆಶ್ವಾಸನೆ ನೀಡುತ್ತಿದ್ದಾರೆ.ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರವಾಗಿದೆ. ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ. ಕಾಂಗ್ರೆಸ್ ನವರು ಕಡಿಮೆಯೇನಲ್ಲ ಸಾವಿನ ಮೆನೆಯಲ್ಲಿ ರಾಜಕೀಯ ಮಾಡಲು ಹೊರಟಿದ್ದಾರೆ. ಸಂತೋಷ್ ಅವರ ಮನೆಗೆ ಸಾಲು ಸಾಲು ಕಾಂಗ್ರೆಸ್ ನಾಯಕರು ಹೋಗಿ ಮಾಧ್ಯಮಗಳ ಮುಂದೆ ಫೋಸ್ ನೀಡಿದ್ರು. ಇವರು ಪರ್ಸಂಟೇಜ್ ಪಡೆದಿಲ್ಲವೇ, ರಾಜ್ಯದ ಸಂಪತ್ತನ್ನು ಲೂಟಿ ಮಾಡಿಲ್ಲವೇ..? ಕಾಂಗ್ರೆಸ್ ಪಕ್ಷದವರು ಕುಳಿತು ಆತ್ಮವಾಲೋಕನ ಮಾಡಿಕೊಳ್ಳಬೇಕು. ಈ ರೀತಿ ಎರಡೂ ರಾಷ್ಟ್ರೀಯ ಪಕ್ಷಗಳು ನಡೆದುಕೊಳ್ಳುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಳೆದ ಒಂದು ತಿಂಗಳಿನಿಂದಲೂ ಧರ್ಮಧರ್ಮಗಳ ನಡುವೆ ಬೆಂಕಿ ಹಚ್ಚಿಕೊಂಡು ಸರ್ಕಾರ ಆಡಳಿತ ನಡೆಸುತ್ತಿದೆ. ಜನರನ್ನು ಎತ್ತಿಕಟ್ಟಿ ರಾಜ್ಯ ಬಿಜೆಪಿ ಸರ್ಕಾರ ಸದ್ಯ ಮೌನವಾಗಿ ಕುಳಿತಿದೆ, ಸರ್ಕಾರದ ಯಾವುದೇ ಆಕ್ಷೇಪಣೆ ಇಲ್ಲ. ಹಿಂದೂ ಪರಿಷತ್ತು, ಭಜರಂಗದಳವನ್ನು ಬಳಸಿಕೊಂಡು ಜನರ ಮದ್ಯೆ ಬೆಂಕಿ ಹಚ್ಚಿ ಕೂತು ತಮಾಷೆ ನೋಡುತ್ತಿದ್ದಾರೆ. ಸರ್ವ ಜನಾಂಗದ ಶಾಂತಿಯ ತೋಟವನ್ನು ಉಳಿಸುವ ಕೆಲಸ ಆಗಬೇಕಿದೆ. ನಾವೆಲ್ಲರು ಮೊದಲು ಭಾರತೀಯರು ನಾವೆಲ್ಲ ಅಣ್ಣ-ತಮ್ಮಂದಿರಂತೆ ಕೇವಲ ರಾಜಕೀಯ ಲಾಭಕ್ಕಾಗಿ ನಮ್ಮ ನಡುವಿನ ಸಾಮರಸ್ಯ ಹಾಳು ಮಾಡುತ್ತಿದ್ದಾರೆ. ನಾವು ಸರಿಯಾದ ತೀರ್ಮಾನ ಮಾಡಬೇಕು. ಪ್ರಾದೇಶಿಲ ಪಕ್ಷವನ್ನು ಉಳಿಸುವುದು ಅತ್ಯವಶ್ಯಕ. ರೈತರಿಗಾಗಿ, ಶೋಷಿತರಿಗಾಗಿ, ಬಡವರಿಗಾಗಿ, ಯುವಕರಿಗಾಗಿ ಈ ಪಕ್ಷ ಉಳಿಯಬೇಕಿದೆ ಎಂದು ಕರೆ ನೀಡಿದರು.

 ಗುಬ್ಬಿ ವಿಧಾನಸಭಾ ಕ್ಷೇತ್ರದ ಮುಂದಿನ ಅಭ್ಯರ್ಥಿ ನಾಗರಾಜ್ ಅವರು ಎಂದು ಈಗಾಗಲೇ ನಿರ್ಧಾರ ಆಗಿದೆ. ನಾವು ಇಲ್ಲಿನ ಶಾಸಕರಿಗೆ ಏನು ಅನ್ಯಾಯ ಮಾಡಿಲ್ಲ. ನಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ಈ ಕ್ಷೇತ್ರದ ಶಾಸಕರನ್ನು ಮಂತ್ರಿ ಮಾಡಿದ್ದೆವು. ಸ್ವಲ್ಪನಾದ್ರೂ ತಾಯಿ ಹೃದಯ ಇದ್ದರೆ ನಿಮ್ಮನ್ನು ಬೆಳೆಸಿದ ಪಕ್ಷಕ್ಕೆ ಬೆನ್ನಿಗೆ ಚೂರಿ ಚುಚ್ಚುವ ಕೆಲಸ ಮಾಡಿದ್ದೀರಿ. ನಾವೆಲ್ಲಾ ಅವರನ್ನು ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡಿದ್ದೀವಿ. ಯಾವ ಪಕ್ಷದಲ್ಲಿದ್ದೇನೆ ಎಂದು ಈ ಕ್ಷೇತ್ರದ ಶಾಸಕರಿಗೆ ಗೊತ್ತಿಲ್ಲ. ಇದು ಒಂದು ರೀತಿ ಬ್ಲಾಕ್‌ಮೇಲೆ ರಾಜಕಾರಣ ಆಗಿದೆ ಎಂದರು.

 ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಎಂ.ಟಿ. ಕೃಷ್ಣಪ್ಪ ಮತ್ತು ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ ಅವರು ಭಾಗಿಯಾಗಿದ್ದರು. nikhil kumaraswamy slams congress – bjp

Tags: #Saaksha TVJDSNikhil KumaraswamyTumakur
ShareTweetSendShare
Join us on:

Related Posts

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

by Shwetha
September 11, 2026
0

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ ಬರುತ್ತಿರುವ ಆಸ್ಟ್ರಲ್ ಪೇಜೆಂಟ್ಸ್ ತನ್ನ 10ನೇ ಎಡಿಷನ್ನ್ನು ಅದ್ದೂರಿಯಾಗಿ ಪೂರ್ಣಗೊಳಿಸಿತು. ನಗರದ ಕಿಂಗ್ಸ್ ಮೆಡೋಸ್‌ನಲ್ಲಿ...

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

by Shwetha
September 11, 2026
0

ರಾಜ್ಯ ರಾಜಕಾರಣದಲ್ಲಿ ಬಿಜೆಪಿಯ ಪಾದಯಾತ್ರೆ ಮತ್ತು ಕಾಂಗ್ರೆಸ್ ಸರ್ಕಾರದ ನೂರು ದಿನಗಳ ಸಂಭ್ರಮದ ನಡುವೆ ಹೊಸ ವಾಕ್ಸಮರ ಶುರುವಾಗಿದೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರ...

ಖರ್ಗೆ ಕುಟುಂಬದ ಟ್ರಸ್ಟ್‌ಗೆ ಬಿಡಿಎ ಸಿಎ ನಿವೇಶನ ಮಂಜೂರು ಆರೋಪ: ಲೋಕಾಯುಕ್ತ ತನಿಖೆ ಬಗ್ಗೆ ನಿರ್ಧರಿಸಲು ಹೈಕೋರ್ಟ್ ಸೂಚನೆ

ಖರ್ಗೆ ಕುಟುಂಬದ ಟ್ರಸ್ಟ್‌ಗೆ ಬಿಡಿಎ ಸಿಎ ನಿವೇಶನ ಮಂಜೂರು ಆರೋಪ: ಲೋಕಾಯುಕ್ತ ತನಿಖೆ ಬಗ್ಗೆ ನಿರ್ಧರಿಸಲು ಹೈಕೋರ್ಟ್ ಸೂಚನೆ

by Shwetha
September 11, 2026
0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಒಡೆತನದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ)ಯಿಂದ ನಿಯಮಬಾಹಿರವಾಗಿ ಸಿಎ ನಿವೇಶನ ಮಂಜೂರು ಮಾಡಲಾಗಿದೆ ಎಂಬ ಆರೋಪಕ್ಕೆ...

ನಕಲಿ GST ನೋಂದಣಿಗೆ ಕಡಿವಾಣ: ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯಗೊಳಿಸಲು ದೆಹಲಿ ಹೈಕೋರ್ಟ್ ಸೂಚನೆ

ನಕಲಿ GST ನೋಂದಣಿಗೆ ಕಡಿವಾಣ: ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯಗೊಳಿಸಲು ದೆಹಲಿ ಹೈಕೋರ್ಟ್ ಸೂಚನೆ

by Shwetha
September 11, 2026
0

ಕಳವುಗೊಂಡ ಅಥವಾ ದುರುಪಯೋಗಪಡಿಸಿಕೊಂಡ PAN ಮತ್ತು ಆಧಾರ್ ವಿವರಗಳನ್ನು ಬಳಸಿಕೊಂಡು ನಕಲಿ GST ನೋಂದಣಿ ಮಾಡಿಸಿ ಹಣಕಾಸು ವಂಚನೆ ನಡೆಸುತ್ತಿರುವ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ದೆಹಲಿ...

ಆಪರೇಷನ್ ಕರಾವಳಿ 2028:ಕೇಸರಿ ಕೋಟೆಯಲ್ಲಿ ಡಿಕೆಶಿ ಬ್ಯಾಟಿಂಗ್ 30 ವರ್ಷಗಳ ಬಿಜೆಪಿ ಪ್ರಾಬಲ್ಯಕ್ಕೆ ಲಗಾಮು ಹಾಕಲು ಕಾಂಗ್ರೆಸ್ ರಣತಂತ್ರ

ಆಪರೇಷನ್ ಕರಾವಳಿ 2028:ಕೇಸರಿ ಕೋಟೆಯಲ್ಲಿ ಡಿಕೆಶಿ ಬ್ಯಾಟಿಂಗ್ 30 ವರ್ಷಗಳ ಬಿಜೆಪಿ ಪ್ರಾಬಲ್ಯಕ್ಕೆ ಲಗಾಮು ಹಾಕಲು ಕಾಂಗ್ರೆಸ್ ರಣತಂತ್ರ

by Shwetha
September 11, 2026
0

ಕರ್ನಾಟಕ ರಾಜಕಾರಣದಲ್ಲಿ ಈಗಲೇ 2028ರ ವಿಧಾನಸಭಾ ಚುನಾವಣೆಯ ರಣಕಹಳೆ ಮೊಳಗಿದೆ. ರಾಜ್ಯದ ಅತ್ಯಂತ ಪ್ರಭಾವಿ ರಾಜಕೀಯ ತಂತ್ರಗಾರ ಎನಿಸಿಕೊಂಡಿರುವ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಈಗ ಬಿಜೆಪಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram