ತ.ನಾಡಿನಲ್ಲಿ ಭಾರಿಮಳೆಗೆ ಮನೆ ಕುಸಿದು 9 ಮಂದಿ ಸಾವು
ತಮಿಳುನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ವೇಲೂರು ಜಿಲ್ಲೆಯ ಪೆರ್ನಂಬೆಟ್ ನಲ್ಲಿ ಮನೆ ಕುಸಿದು ನಾಲ್ಕು ಮಕ್ಕಳು ಸೇರಿದಂತೆ ಒಂಬತ್ತು ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.
ಈ ದುರ್ಘಟನೆಯಲ್ಲಿ ನಾಲ್ವರು ಮಕ್ಕಳು ನಾಲ್ವರು ಮಹಿಳೆಯರು ಸೇರಿದಂತೆ ಓರ್ವ ಪುರುಷ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕ ಇಲಾಖೆ ದೌಡಾಯಿಸಿದ್ದು ರಕ್ಷಣಾ ಕಾರ್ಯ ನಡೆಯುತ್ತಿದೆ.
ಘಟನೆಯಲ್ಲಿ ಸಾವನ್ನಪ್ಪಿರುವವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು 5 ಲಕ್ಷ ರುಪಾಯಿಗಳ ಸಹಾಯಧನವನ್ನ ಘೋಷಿಸಿದ್ದಾರೆ. ಈ ಹಿಂದೆ ತಮಿಳುನಾಡು ಆಂದ್ರಪ್ರದೇಶ ಕರ್ನಾಟಕ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಬಗ್ಗೆ ಹವಮಾನ ಇಲಾಖೆ ಮುನ್ಸೂಚನೆ ನೀಡಿತ್ತು.
ಇದೇ ಅವಧಿಯಲ್ಲಿ ತಮಿಳುನಾಡಿನ ಕೃಷ್ಣಗಿರಿ, ಧರ್ಮಪುರಿ, ವೆಲ್ಲೂರು, ತಿರುಪತ್ತೂರು, ಈರೋಡ್ ಮತ್ತು ಸೇಲಂ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.