ADVERTISEMENT
Friday, February 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಅಂತಾರಾಷ್ಟ್ರೀಯ ನ್ಯಾಯಾಲಯದ ಮೆಟ್ಟಲೇರಿದ ನಿರ್ಭಯಾ ಆರೋಪಿಗಳು

admin by admin
March 17, 2020
in International
nirbhaya
Share on FacebookShare on TwitterShare on WhatsappShare on Telegram

Related posts

ಅಯೋಗ್ಯ ಪಾಕ್ ಗೆ ಆಂಗ್ ಭಂಗ್ ಯೋಗ..

ಅಯೋಗ್ಯ ಪಾಕ್ ಗೆ ಆಂಗ್ ಭಂಗ್ ಯೋಗ..

May 8, 2025
ಟರ್ಕಿ ಹೋಟೆಲ್ ನಲ್ಲಿ ಅಗ್ನಿ ದುರಂತ: ಮೃತರ ಸಂಖ್ಯೆ 76ಕ್ಕೆ ಏರಿಕೆ!

ಟರ್ಕಿ ಹೋಟೆಲ್ ನಲ್ಲಿ ಅಗ್ನಿ ದುರಂತ: ಮೃತರ ಸಂಖ್ಯೆ 76ಕ್ಕೆ ಏರಿಕೆ!

January 22, 2025

ನಿರ್ಭಯಾ ಅತ್ಯಾಚಾರ ಪ್ರಕರಣದ ದೋಷಿಗಳು ಇಲ್ಲಿಯವರೆಗೆ ಶಿಕ್ಷೆ ಯಿಂದ ತಪ್ಪಿಸಿಕೊಳ್ಳಲು ದಿನಕ್ಕೊಂದು ನಾಟಕವಾಡಿ, ತಮ್ಮ ಬತ್ತಳಿಕೆಯಲ್ಲಿದ್ದ ಎಲ್ಲಾ ಆಸ್ತ್ರಗಳು ಮುಗಿಯಿತು ಎಂದು ಗೊತ್ತಾಗುತ್ತಿದ್ದಂತೆ, ಗಲ್ಲು ಶಿಕ್ಷೆಯನ್ನು ಪ್ರಶ್ನಿಸಿ ಅಂತಾರಾಷ್ಟ್ರೀಯ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ರಾಷ್ಟ್ರಪತಿ, ಹೈಕೋರ್ಟ್, ಸುಪ್ರೀಂ ಕೋರ್ಟ್ ಎಂದು ದಿನಕ್ಕೊಂದು ಮನವಿ‌ಪತ್ರ, ಕ್ಯುರೇಟಿವ್ ಅರ್ಜಿ ಸಲ್ಲಿಸಿ ಕೊನೆಗೆ ಸುಪ್ರೀಂಕೋರ್ಟ್ ನಿಂದ ಕಾನೂನಿನ ಎಲ್ಲಾ ಹೋರಾಟದ ಬಾಗಿಲುಗಳು ಮುಚ್ಚಿದೆ, ಶಿಕ್ಷೆಗೆ ತಯಾರಾಗಿ ಎಂಬ ಸೂಚನೆ ಬರುತ್ತಿದ್ದಂತೆ, ಅಂತಾರಾಷ್ಟ್ರೀಯ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ದೆಹಲಿ ನ್ಯಾಯಾಲಯ ಮಾರ್ಚ್ 20ರಂದು ಬೆಳಗ್ಗೆ 5.30ಕ್ಕೆ ಗಲ್ಲಿಗೇರಿಸಲು ಆದೇಶಿಸಿದ್ದು, ಅಕ್ಷಯ್ ಸಿಂಗ್, ಪವನ್ ಗುಪ್ತಾ ಹಾಗೂ ವಿನಯ್ ಶರ್ಮಾ ಅವರು ಅಂತರಾಷ್ಟ್ರೀಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಸೋಮವಾರ ಬೆಳಗ್ಗೆಯಷ್ಟೇ ಗಲ್ಲು ಶಿಕ್ಷೆಗೊಳಗಾಗಿರುವ ಅಪರಾಧಿಗಳಲ್ಲಿ ಒಬ್ಬನಾದ ಮುಖೇಶ್ ಸಿಂಗ್ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿತ್ತು. ನ್ಯಾಯಾಧೀಶ ಅರುಣ್ ಮಿಶ್ರಾ ಹಾಗೂ ಎಂ.ಆರ್.ಶಾ ಅವರಿದ್ದ ಪೀಠ ಅರ್ಜಿಯ ವಿಚಾರಣೆ ನಡೆಸಿ, ಈ ಅರ್ಜಿ ವಿಚಾರಣೆಗೆ ಯೋಗ್ಯವಲ್ಲ ಎಂದು ಹೇಳಿ ತಿರಸ್ಕರಿಸಿತ್ತು. ಗಲ್ಲುಶಿಕ್ಷೆಯನ್ನು ಮತ್ತೊಮ್ಮೆ ತಡೆಹಿಡಿಯಲು ಸಾಧ್ಯವಿಲ್ಲ ಎಂದು ತಿಳಿಸಿತ್ತು. ವರದಿಗಳ ಪ್ರಕಾರ ಸನ್ನಿವೇಶಗಳ ಪ್ರಕಾರ ಎಲ್ಲಾ ಕಾನೂನು ಅವಕಾಶ ಬಳಸಿಕೊಂಡಿದ್ದೀರಿ. ಇನ್ಯಾವುದೇ ಅವಕಾಶಗಳು ಬಾಕಿ ಉಳಿದಿಲ್ಲ. ನಿನಗೆ(ಮುಖೇಶ್ ಸಿಂಗ್) ಕ್ಷಮಾದಾನ ಅರ್ಜಿ ಸಲ್ಲಿಸಲು ಅವಕಾಶ ದೊರಕಿದೆ. ಅದು ವಜಾಗೊಂಡಿದೆ. ಕ್ಯೂರೇಟಿವ್ ಅರ್ಜಿ ಕೂಡಾ ವಜಾಗೊಂಡಿದೆ. ಇನ್ನೇನು ಅವಕಾಶ ಉಳಿದಿದೆ ಎಂದು ಸುಪ್ರೀಂಕೋರ್ಟ್ ಕೇಳಿರುವುದಾಗಿ ತಿಳಿದು ಬಂದಿದೆ.
ಮುಖೇಶ್ ವಕೀಲ ಎಂಎಲ್ ಶರ್ಮಾ ಮೂಲಕ ಅರ್ಜಿ ಸಲ್ಲಿಸಿದ್ದ. ಪ್ರಕರಣದ ಆ್ಯಮಿಕಸ್ ಕ್ಯೂರಿ ಗ್ರೋವರ್, ದಿಲ್ಲಿ ಸರ್ಕಾರ, ಕೇಂದ್ರ ಸರ್ಕಾರ ಕ್ರಿಮಿನಲ್ ಸಂಚು ನಡೆಸಿದ್ದು ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಕೋರಿದ್ದ.
ನ್ಯಾಯಾಧೀಶರು ಅರ್ಜಿಯಲ್ಲಿ ಮಾಡಲಾದ ಸಹಿ ಕುರಿತು ಪ್ರಶ್ನಿಸಿದ್ದು, ಮುಖೇಶ್ ಅಫಿಡೆವಿಟ್‍ನಲ್ಲಿ ಆತ ಸಹಿ ಮಾಡಿಲ್ಲ. ಬದಲಿಗೆ ಆತನ ಸಹೋದರ ಸುರೇಶ್ ಅರ್ಜಿಗೆ ಸಹಿ ಮಾಡಿದ್ದಾನೆ. ನೀವು ಸಲ್ಲಿಸಿದ ಅರ್ಜಿಗೆ ಸುರೇಶ್ ಹೇಗೆ ಸಹಿ ಮಾಡಿದ, ಜೈಲಿನಲ್ಲಿ ಏನಾಯಿತು ಎಂಬುದು ಅವನಿಗೆ ಹೇಗೆ ಗೊತ್ತಾಯಿತು? ಇದು ಮುಖೇಶ್‍ಗೆ ತಿಳಿದಿಲ್ಲವೆಂದು ಅವನಿಗೆ ಹೇಗೆ ಗೊತ್ತಾಯಿತು ಎಂದು ಪ್ರಶ್ನಿಸಿದರು. ಮುಖೇಶ್ ಪರವಾಗಿ ಆತ ಮಾತನಾಡಲು ಸಾಧ್ಯವಿಲ್ಲ. ಏಕೆಂದರೆ ಇದು ಮುಖೇಶ್ ಸಲ್ಲಿಸಿದ್ದ ಅರ್ಜಿ. ಈ ಅರ್ಜಿಯನ್ನು ನೀವೇ ಹಿಂಪಡೆಯುತ್ತಿರೋ ಅಥವಾ ನಾವೇ ವಜಾ ಮಾಡಬೇಕೇ ಎಂದು ನ್ಯಾಯಾಧೀಶ ಅರುಣ್ ಮಿಶ್ರಾ ದೋಷಿಗಳ ಪರ ವಕೀಲ ಶರ್ಮಾ ಅವರನ್ನು ಪ್ರಶ್ನಿಸಿದ್ದಾರೆ. ಅಲ್ಲದೆ ಮುಖೇಶ್ ಪರ ವಕೀಲ ಶರ್ಮಾ ಅವರನ್ನು ಈ ನ್ಯಾಯಾಲಯದ ವಕೀಲರ ವಿರುದ್ಧ ವಂಚನೆಯ ಗಂಭೀರ ಆರೋಪ ಮಾಡುತ್ತಿದ್ದೀರಿ. ನಿಮ್ಮ ಜ್ಞಾನದ ಮೂಲ ಯಾವುದು? ಜೈಲಿನಲ್ಲಿ ಏನಾಯಿತು ಎಂಬ ವೈಯಕ್ತಿಕ ವಿಚಾರ ಸುರೇಶ್‍ಗೆ ಹೇಗೆ ಗೊತ್ತಾಯಿತು ಎಂದು ಪ್ರಶ್ನಿಸಿರುವುದಾಗಿ ವರದಿಗಳು ತಿಳಿಸಿವೆ.
ವಕೀಲರ ವಿರುದ್ಧ ವಂಚನೆಯ ಗಂಭೀರ ಆರೋಪದ ಕುರಿತು ದ್ವಿಸದಸ್ಯರ ಪೀಠ ವಿರೋಧ ವ್ಯಕ್ತಪಡಿಸುತ್ತಿದ್ದಂತೆ ಮುಖೇಶ್ ಪರ ವಕೀಲ ಎಂ.ಎಲ್.ಶರ್ಮಾ ಅವರು ಅರ್ಜಿಯನ್ನು ಹಿಂಪಡೆಯುವಂತೆ ಮುಖೇಶ್ ಗೆ ಸೂಚಿಸಿದ್ದು, ಆತ ಅರ್ಜಿಯನ್ನು ಹಿಂಪಡೆದಿದ್ದ. ಇದೀಗ ನಿರ್ಭಯಾ ಅತ್ಯಾಚಾರಿಗಳ ಎಲ್ಲಾ ಅರ್ಜಿಗಳು ತಿರಸ್ಕತವಾಗಿರುವ ಹಿನ್ನೆಲೆಯಲ್ಲಿ, ತಮ್ಮ ಗಲ್ಲು ಶಿಕ್ಷೆಯನ್ನು ಪ್ರಶ್ನಿಸಿ ಅವರು ಅಂತಾರಾಷ್ಟ್ರೀಯ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

Tags: Nirbhaya CaseNirbhaya rapistsSupreme Court
ShareTweetSendShare
Join us on:

Related Posts

ಅಯೋಗ್ಯ ಪಾಕ್ ಗೆ ಆಂಗ್ ಭಂಗ್ ಯೋಗ..

ಅಯೋಗ್ಯ ಪಾಕ್ ಗೆ ಆಂಗ್ ಭಂಗ್ ಯೋಗ..

by Shwetha
May 8, 2025
0

ಆಪರೇಷನ್ ಸಿಂಧೂರ... ಈ ರಣಬೇಟೆ..ಪಾಕಿಸ್ತಾನದ ಎದೆಯಲ್ಲಿ ಅವಲಕ್ಕಿ ಕುಟ್ಟಿದಂತೆ ಮಾಡ್ಬಿಟ್ಟಿದೆ.. ತಮ್ಮದು ಕೆಚ್ಚೆದೆ.. ಕೆಚ್ಚೆದೆ ಅಂತಿದ್ದವರ ಗುಂಡಿಗೆ ಗಢಗಢನೇ ಅಲ್ಲಾಡಿ ಹೋಗಿದೆ... ಹೃದಯ ಒಂದ್ಸಾರಿ.. ಬಲಕ್ಕೆ ಓಡಿ...

ಟರ್ಕಿ ಹೋಟೆಲ್ ನಲ್ಲಿ ಅಗ್ನಿ ದುರಂತ: ಮೃತರ ಸಂಖ್ಯೆ 76ಕ್ಕೆ ಏರಿಕೆ!

ಟರ್ಕಿ ಹೋಟೆಲ್ ನಲ್ಲಿ ಅಗ್ನಿ ದುರಂತ: ಮೃತರ ಸಂಖ್ಯೆ 76ಕ್ಕೆ ಏರಿಕೆ!

by Author2
January 22, 2025
0

ಇಸ್ತಾಂಬುಲ್:‌ ವಾಯುವ್ಯ ಟರ್ಕಿಯ ಸ್ಕೀ ರೆಸಾರ್ಟ್‌ನಲ್ಲಿರುವ (Turkey Ski Resort) ಹೋಟೆಲ್‌ ನಲ್ಲಿ ಸಂಭವಿಸಿದ ಅಗ್ನಿ ದುರಂತರದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಸಂಖ್ಯೆ 76ಕ್ಕೆ ಏರಿಕೆಯಾಗಿದ್ದು, 51 ಜನ...

ಅಧಿಕಾರ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್!

ಅಧಿಕಾರ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್!

by Author2
January 21, 2025
0

ಷಿಂಗ್ಟನ್‌: ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್‌ ಟ್ರಂಪ್‌ (Donald Trump) ಅಧಿಕಾರ ಸ್ವೀಕರಿಸಿದ್ದಾರೆ. ಈ ವೇಳೆ ವಿದೇಶಗಳಿಗೆ ತೆರಿಗೆ ವಿಧಿಸುವ ಮಹತ್ವದ ಘೋಷಣೆ ಮಾಡಿದ್ದಾರೆ. ಅಲ್ಲದೇ, 80...

ಭಾರತೀಯ ಮೂಲದ ಯುವಕ ಅಮೆರಿಕದಲ್ಲಿ ಹತ್ಯೆ

ಭಾರತೀಯ ಮೂಲದ ಯುವಕ ಅಮೆರಿಕದಲ್ಲಿ ಹತ್ಯೆ

by Author2
January 20, 2025
0

ವಾಷಿಂಗ್ಟನ್: ಭಾರತೀಯ ಮೂಲದ ಯುವಕ ಅಮೆರಿಕದಲ್ಲಿ ಹತ್ಯೆಯಾಗಿರುವ ಘಟನೆ ನಡೆದಿದೆ. ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಗೆ ಭಾರತೀಯ ಮೂಲದ ಯುವಕ ಸಾವನ್ನಪ್ಪಿದ್ದಾನೆ. ಅಮೆರಿಕದ (America) ವಾಷಿಂಗ್ಟನ್ ಡಿಸಿಯ...

ನೈಜೀರಾಯಾದಲ್ಲಿ ಭಾರೀ ಅಗ್ನಿ ಅವಘಡ!

ನೈಜೀರಾಯಾದಲ್ಲಿ ಭಾರೀ ಅಗ್ನಿ ಅವಘಡ!

by Author2
January 19, 2025
0

ನೈಜೀರಿಯಾದಲ್ಲಿ ದೊಡ್ಡ ಅಗ್ನಿ ದುರಂತವೊಂದು ಸಂಭವಿಸಿದೆ. ಗ್ಯಾಸೋಲಿನ್ ಟ್ಯಾಂಕರ್‌ ಏಕಾಏಕಿ ಸ್ಫೋಟಗೊಂಡ ಪರಿಣಾಮ 70ಕ್ಕೂ ಅಧಿಕ ಜನರು ಸಾವನ್ನಪ್ಪಿ, 56ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ನಡೆದಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram