ಬಾಲಿವುಡ್ ನಟ ಸುಶಾಂತ್ ಸಾವಿನ ನಂತರ ಹಲವಾರು ಚರ್ಚೆಗಳು ತಾರಕಕ್ಕೇರಿವೆ. ಅಲ್ದೇ ಇದು ಆತ್ಮಹತ್ಯೆ ಅಲ್ಲ ಸುಶಾಂತ್ ರದ್ದು ನಿಯೋಜಿತ ಕೊಲೆ ಎನ್ನುವ ಮಾತುಗಳು ಬಿಟೌನ್ ನಲ್ಲಿ ವ್ಯಾಪಕವಾಗಿ ಸದ್ದು ಮಾಡ್ತಿದೆ. ಇನ್ನೂ ಇತ್ತೀಚೆಗಷ್ಟೇ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಸಹ ಈ ವಿಚಾರವಾಗಿ ಮಾತನಾಡಿದ್ದು, ಸುಸಾಂತ್ ರ ಸಾವಿನ ಹಿಂದೆ ಹಲವು ದೊಡ್ಡ ಮಂದಿಯ ಕೈವಾಡವಿದೆ. ಸುಶಾಂತ್ ಸಾವಿನ ಪ್ರಕರಣವನ್ನು ಸಿಬಿಐ ಗೆ ಒಪ್ಪಿಸಬೇಂದು ಪ್ರಧಾನಿ ಮೋದಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದರು. ಇದು ಸುಶಾಂತ್ ರ ಅಭಿಮಾನಿಗಳ ಹೋರಾಟಕ್ಕೆ ಬಲ ತುಂಬಿತ್ತು. ಇದೀಗ ನಿರ್ಭಯಾ ಅತ್ಯಾಚಾರಿಗಳನ್ನು ನೇಣಿಗೇರಿಸಲು ಸತತ 7 ವರ್ಷಗಳ ಕಾಲ ಕಾನೂನು ಹೋರಾಟ ನಡೆಸಿ ವಿಜಯ ಸಾಧಿಸಿದ್ದ ವಕೀಲೆ ಸೀಮಾ ಕುಶ್ವಾಹ ಸಹ ಈ ಹೋರಾಟದಲ್ಲಿ ಅಖಾಡಕ್ಕಿಳಿದಿದ್ದಾರೆ.
ಸುಶಾಂತ್ ರದ್ದು ಆತ್ಮಹತ್ಯೆ ಅಲ್ಲ. ಅವರ ಸಾವಿನ ಹಿಂದೆ ಬೇರೆ ಯಾವುದೋ ಸಂಚು ನಡೆದಿರುವ ಸಾಧ್ಯತೆಯಿದೆ ಎಂದು ಅನುಮಾನ ವ್ಯಕ್ತಪಡಿಸಿರುವ ಸೀಮಾ ಅವರು ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ಸುಶಾಂತ್ ರ ಸಾವಿನ ಹಿಂದಿನ ಅಸಲಿ ಕಾರಣ ತಿಳಿಯುವ ಹಕ್ಕು ಪ್ರತಿಯೊಬ್ಬ ಭಾರತೀಯರಿಗೂ ಇದೆ. ಆದರೇ ಈಗಾಗಲೇ ಒಂದು ತಿಂಗಳಿಗೂ ಹೆಚ್ಚು ಸಮಯ ಕಳೆದಿದ್ದರೂ ಪೊಲೀಸರು ಸತ್ಯವನ್ನು ಬಹಿರಂಗ ಪಡಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ಗೆ ಒಪ್ಪಿಸಿ ಎಂದು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.
ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡಲು ಬಂದ ಉಪೇಂದ್ರ ಅಣ್ಣನ ಮಗ
ನಟ ಉಪೇಂದ್ರ (Upendra) ಅಣ್ಣನ ಮಗ ನಿರಂಜನ್ ಸುಧೀಂದ್ರಗೆ (Niranjan Sudhendra) ಅರ್ಜುನ್ ಸರ್ಜಾ (Arjun Sarja) ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ‘ಸೀತಾ ಪಯಣ’ ಎಂಬ...