ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಹತ್ಯೆ ಪ್ರಕರಣದ ಅಪರಾಧಿಗಳ ಯಾವುದೇ ಮನವಿಗಳು ವಿಚಾರಣೆಗೆ ಬಾಕಿ ಉಳಿದಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಹೀಗಾಗಿ ವಿಚಾರಣಾಧೀನ ನ್ಯಾಯಾಲಯ ಗಲ್ಲುಶಿಕ್ಷೆಗೆ ಹೊಸ ದಿನಾಂಕ ನಿಗದಿಗೊಳಿಸಬಹುದು ಎಂದು ಸುಪ್ರೀಂ ಹೇಳಿದೆ.
ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸುವ ಕುರಿತು ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್. ನಾಲ್ವರಲ್ಲಿ ಮೂವರ ಕ್ಷಮಾದಾನ ಅರ್ಜಿಗಳನ್ನು ರಾಷ್ಟ್ರಪತಿಗಳು ಈಗಾಗಲೇ ತಿರಸ್ಕರಿಸಿದ್ದಾರೆ. ಹಾಗೇ ನಾಲ್ಕನೇ ಅಪರಾಧಿಯು ಕ್ಷಮಾದಾನ ಅರ್ಜಿಯನ್ನು ಇನ್ನೂ ಸಲ್ಲಿಸದಿರುವುದರಿಂದ ಗಲ್ಲುಶಿಕ್ಷೆಗೆ ವಿಚಾರಣಾಧೀನ ನ್ಯಾಯಾಲಯ ಹೊಸ ದಿನಾಂಕ ನಿಗದಿಪಡಿಸಬಹುದು ಎಂದು ಸ್ಪಷ್ಟಪಡಿಸಿದೆ.
ಇನ್ನು, ಮುಖೇಶ್ಸಿಂಗ್, ಅಕ್ಷಯ್ ಕುಮಾರ್, ವಿನಯ್ ಶರ್ಮ ಮತ್ತು ಪವನ್ ಗುಪ್ತ ಈ ನಾಲ್ವರು ಅಪರಾಧಿಗಳಿಗೆ ಅತಿ ಶೀಘ್ರದಲ್ಲೇ ಮರಣದಂಡನೆ ಶಿಕ್ಷೆ ದಿನಾಂಕ ನಿಗದಿಯಾಗಲಿದ್ದು, ನಿರ್ಭಯಾ ಪೋಷಕರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.