ನವದೆಹಲಿ: ದೆಹಲಿಯ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳು ಗಲ್ಲಿಗೇರಲು ಇನ್ನೂ ಕೇವಲ 10 ದಿನಗಳು ಮಾತ್ರ ಬಾಕಿ ಇವೆ. ಈ ಮಧ್ಯೆ ಗಲ್ಲು ಶಿಕ್ಷೆಯಿಂದ ಪಾರಾಗಲು ದೋಷಿಗಳು ನಾನಾ ರೀತಿಯ ಪ್ರಯತ್ನಗಳ ಮೊರೆ ಹೋಗುತ್ತಿದ್ದಾರೆ. ನಿರ್ಭಯಾ ಅಪರಾಧಿಗಳಲ್ಲಿ ಒಬ್ಬನಾದ ವಿನಯ್ ಶರ್ಮಾ ಇದೀಗ ತಮ್ಮ ಕ್ಷಮಾದಾನ ಅರ್ಜಿ ತಿರಸ್ಕೃತವಾಗಿರುವ ಕ್ರಮ ಪ್ರಶ್ನಿಸಿ ಚುನಾವಣಾ ಆಯೋಗದ ಕದತಟ್ಟಿದ್ದಾರೆ.
ವಿನಯ್ ಕ್ಷಮಾದಾನ ಅರ್ಜಿಯನ್ನು ದೆಹಲಿ ಗೃಹ ಸಚಿವ ಮನೀಷ್ ಸಿಸೋಡಿಯ ತಿರಸ್ಕರಿಸಿದಾಗ ದೆಹಲಿಯಲ್ಲಿ ಚುನಾವಣಾ ನೀತಿಸಂಹಿತೆ ಜಾರಿಯಲ್ಲಿತ್ತು. ಆಗ ಅವರು ಸಚಿವರಾಗಿರಲಿಲ್ಲ. ಈ ವೇಳೆ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದು ಸರಿಯೇ? ಇದಕ್ಕೆ ಕಾನೂನಿನ ಮಾನ್ಯತೆಯಿದೆಯೆ? ಎಂದು ವಿನಯ್ ಪರ ವಕೀಲ ಎ.ಪಿ. ಸಿಂಗ್ ಚುನಾವಣಾ ಆಯೋಗವನ್ನು ಪ್ರಶ್ನಿಸಿದ್ದಾರೆ.
ರಿಜಿಸ್ಟ್ರೇಷನ್ ದಾಖಲೆ ರೆಡಿ ಇಟ್ಟುಕೊಳ್ಳಿ :ನಿಮ್ಮ ಭಯ ಮತ್ತು ಆತಂಕ ನನಗೆ ಅರ್ಥವಾಗುತ್ತಿದೆ; RSS ದಾಖಲೆ ಕೇಳಿ ಬಿಜೆಪಿಯನ್ನು ಕೆಣಕಿದ ಖರ್ಗೆ
ರಾಜ್ಯ ಸಚಿವ ಸಂಪುಟ ರಚನೆಯಾಗಿ ಖಾತೆ ಹಂಚಿಕೆಯಾದ ಬೆನ್ನಲ್ಲೇ ಕರ್ನಾಟಕ ರಾಜಕಾರಣದಲ್ಲಿ ವಾಕ್ಸಮರ ತಾರಕಕ್ಕೇರಿದೆ. ಪ್ರಮುಖವಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಬಿಜೆಪಿ ನಡುವಿನ ಜಟಾಪಟಿ...








