ಮುದ್ರಾ ಯೋಜನೆಯಡಿ 51 % ಸಾಲ SC, ST, OBC ಗಳಿಗೆ ಪ್ರಧಾನ – ನಿರ್ಮಲಾ ಸೀತಾರಾಮನ್
ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಮಂಜೂರಾದ ಒಟ್ಟು ಸಾಲದಲ್ಲಿ ಶೇಕಡಾ 51 ಕ್ಕಿಂತ ಹೆಚ್ಚು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ನೀಡಲಾಗಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮುದ್ರಾ ಯೋಜನೆಯ 7 ನೇ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಸೀತಾರಾಮನ್ ಅವರು, ಈ ಯೋಜನೆಯು ಸಾಮಾಜಿಕ ನ್ಯಾಯವನ್ನು ಕಾರ್ಯರೂಪಕ್ಕೆ ತರುತ್ತದೆ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಲ್ಪಿಸಿದಂತೆ ಸಬ್ಕಾ ಸಾಥ್, ಸಬ್ಕಾ ವಿಕಾಸ್ನ ನಿಜವಾದ ಮನೋಭಾವವನ್ನು ಸಾಕಾರಗೊಳಿಸುತ್ತದೆ ಎಂದು ಹೇಳಿದರು.
ಈ ಯೋಜನೆಯು ವಿಶೇಷವಾಗಿ ಸಣ್ಣ ಉದ್ಯಮಗಳಿಗೆ ಅನುಕೂಲಕರ ವಾತಾವರಣವನ್ನು ಸೃಷ್ಟಿಸಲು ಸಹಾಯ ಮಾಡಿದೆ ಮತ್ತು ತಳಮಟ್ಟದಲ್ಲಿ ದೊಡ್ಡ ಪ್ರಮಾಣದ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸಹಾಯ ಮಾಡಿದೆ ಎಂದು ಅವರು ಹೇಳಿದರು. ಕಾರ್ಪೊರೇಟ್ ಅಲ್ಲದ, ಕೃಷಿಯೇತರ ಸಣ್ಣ, ಅಥವಾ ಸೂಕ್ಷ್ಮ ಉದ್ಯಮಗಳಿಗೆ 10 ಲಕ್ಷ ರೂಪಾಯಿಗಳವರೆಗೆ ಸಾಲವನ್ನು ಒದಗಿಸುವುದಕ್ಕಾಗಿ ಈ ಯೋಜನೆಯನ್ನು 8ನೇ ಏಪ್ರಿಲ್ 2015 ರಂದು ಮೋದಿಯವರು ಪ್ರಾರಂಭಿಸಿದರು.
ಯೋಜನೆಯಡಿ ಇದುವರೆಗೆ 18 ಲಕ್ಷ 60 ಸಾವಿರ ಕೋಟಿ ರೂಪಾಯಿ ಮೊತ್ತದ 34 ಕೋಟಿ 42 ಲಕ್ಷಕ್ಕೂ ಹೆಚ್ಚು ಸಾಲ ಮಂಜೂರಾಗಿದೆ. ಮಹಿಳಾ ಉದ್ಯಮಿಗಳಿಗೆ ಸುಮಾರು 68% ಸಾಲಗಳು ಮತ್ತು 22 % ಸಾಲವನ್ನು ಪ್ರಾರಂಭದಿಂದಲೂ ಯಾವುದೇ ಸಾಲವನ್ನು ಪಡೆಯದ ಹೊಸ ಉದ್ಯಮಿಗಳಿಗೆ ನೀಡಲಾಗಿದೆ ಎಂದು ತಿಳಿಸಿದರು.