ಪಾಟ್ನಾ: ಬಿಹಾರ ವಿಧಾನಸಭೆಯಲ್ಲಿ ಸಿಎಂ ನಿತೀಶ್ ಕುಮಾರ್ ವಿಶ್ವಾಸಮತ ಗೆದ್ದಿದ್ದಾರೆ. ವಿಶ್ವಾಸಮತ ಯಾಚನೆ ವೇಳೆ ಎನ್ಡಿಎ ಮೈತ್ರಿಕೂಟದ ಪರ ಒಟ್ಟು 129 ಶಾಸಕರು ಮತ ಚಲಾಯಿಸಿದ್ದಾರೆ.
243 ಸದಸ್ಯರ ವಿಧಾನಸಭೆಯಲ್ಲಿ ಸರಳ ಬಹುಮತಕ್ಕೆ 122 ಸದಸ್ಯರ ಬಲ ಅವಶ್ಯವಿತ್ತು. ಈ ಪೈಕಿ 129 ಮತಗಳು ಸರ್ಕಾರದ ಪರ ಚಲಾವಣೆಯಾಗಿವೆ. ಈ ವೇಳೆ ಮಾತನಾಡಿದ ಸಿಎಂ, ಹಿಂದಿನ ಮೈತ್ರಿ ವೇಳೆ ಆರ್ ಜೆಡಿ ಭ್ರಷ್ಟಾಚಾರದಲ್ಲಿ ತೊಡಗಿತ್ತು. ಸದ್ಯ ಎನ್ ಡಿಎ ಸರ್ಕಾರ ಈ ಭ್ರಷ್ಟಾಚಾರದ ವಿರುದ್ಧ ತನಿಖೆ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.
ನಿತೀಶ್ ಕುಮಾರ್ ಅವರು ಮಹಾಘಟಬಂಧನ್ ನಿಂದ ದೂರವಾಗಿ ಎನ್ ಡಿಎ ಮೈತ್ರಿ ಸೋರಿಕೊಂಡಿದ್ದಾರೆ. ಹೀಗಾಗಿ ವಿಶ್ವಾಸ ಮತಯಾಚನೆ ನಡೆಯಿತು. ಮಾಜಿ ಸಿಎಂ ಹಾಗೂ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನಾಯಕ ತೇಜಸ್ವಿ ಯಾದವ್ ಅವರ ನಿವಾಸಕ್ಕೆ ಪೊಲೀಸ್ ಭದ್ರತೆ ನಿಯೋಜಿಸಲಾಗಿತ್ತು.