ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರು | ಹೊರ ಕಳುಹಿಸಿದ ಸಿಬ್ಬಂದಿ
ಉಡುಪಿ : ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಿದ್ದು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯಲು ಮುಂದಾಗಿದ್ದು, ಆದರೆ ಪರೀಕ್ಷಾ ಕೇಂದ್ರದ ಸಿಬ್ಬಂದಿ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ.
ಉಡುಪಿಯ ವಿದ್ಯೋದಯ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಾದ ಆಲಿಯಾ ಹಾಗೂ ರೇಶಂ ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯಲು ಮುಂದಾಗಿದ್ದರು. ಆದರೆ ಈ ವೇಳೆ ಪರೀಕ್ಷಾ ಕೇಂದ್ರದ ಸಿಬ್ಬಂದಿ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ. ಆಗ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರ ನಡುವೆ ವಾಗ್ವಾದ ನಡೆದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಉಡುಪಿ ತಹಶೀಲ್ದಾರ್ ಅರ್ಚನಾ ಭಟ್ ಹಾಗೂ ಉಡುಪಿ ನಗರ ಠಾಣಾ ಪೊಲೀಸರು ವಿದ್ಯಾರ್ಥಿನಿಯರನ್ನು ಮನವೊಲಿಸಲು ಪ್ರಯತ್ನ ಪಟ್ಟಿದ್ದಾರೆ. ಆದರೆ ಇದಕ್ಕೆ ವಿದ್ಯಾರ್ಥನಿಯರು ಒಪ್ಪದೆ ಇರುವಾಗ ಪರೀಕ್ಷಾ ಕೇಂದ್ರದಿಂದ 10.45ಕ್ಕೆ ಹೊರಗೆ ಕಳುಹಿಸಲಾಗಿದೆ.
ಆಲಿಯಾ ಹಾಗೂ ರೇಶಂ ವಿದ್ಯಾರ್ಥನಿಯರು ಹಿಜಾಬ್ ಅವಕಾಶ ನಿರಾಕರಣೆ ಹಿನ್ನೆಲೆ ಪರೀಕ್ಷೆ ಬರೆಯದೇ ಹೊರಗೆ ನಡೆದಿದ್ದಾರೆ. ಪರೀಕ್ಷಾ ಕೇಂದ್ರದಿಂದ ಹೊರ ಹೋದ ಆಲಿಯಾ ವಾಗ್ವಾದ ನಡೆಸಿದ್ದಾರೆ.