CM ಏ.20ವರೆಗೂ ಯಾವುದೇ ಬದಲಾವಣೆ ಇಲ್ಲ : ಲಾಕ್ ಡೌನ್ ಬಗ್ಗೆ ಸಿಎಂ ಸ್ಪಷ್ಟನೆ CM
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಆರ್ಭಟ ಮುಂದುವರಿದಿದೆ. ನಿನ್ನೆ ಕರುನಾಡಲ್ಲಿ ಕೊರೊನಾ ಸ್ಫೋಟವಾಗಿದ್ದು, ಇಂದು ಸಿಎಂಬಿಎಸ್ ಯಡಿಯೂರಪ್ಪ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಮಹಾಮಾರಿ ಬೆಂಗಳೂರಿನಲಿ ಮಿತಿ ಮೀರಿದೆ. ಈ ಹಿನ್ನೆಲೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ.
ಈಗಿನ ನೈಟ್ ಕಫ್ರ್ಯೂ ಮುಂದುವರೆಸುತ್ತೇವೆ. ಈ ವಾರ ಆದಮೇಲೆ ಬೇರೆ ನಿರ್ಧಾರದ ಬಗ್ಗೆ ತೆಗೆದುಕೊಳ್ಳುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆ ಪಡೆಯುತ್ತೇನೆ.
20 ರಂದು ಮತ್ತೆ ಸಭೆ ನಡೆಸುತ್ತೇವೆ. 20ರ ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.
ಬೇರೆ ರಾಜ್ಯಗಳ ಮಾದರಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಬೇರೆ ರಾಜ್ಯಗಳ ಮಾದರಿ ಬೇಡ, ನಮ್ಮ ರಾಜ್ಯದಲ್ಲಿ ಬೇರೆಯದ್ದೇ ಪರಿಸ್ಥಿತಿ ಇದೆ ಎಂದು ಸಿಎಂ ಹೇಳಿದ್ದಾರೆ.