ಬೆಂಗಳೂರು: ಇತ್ತೀಚೆಗೆ ಇಡಿ ದಾಳಿಗಳು ಸಾಮಾನ್ಯ ಎನ್ನುವಂತಾಗಿದೆ. ಆದರೆ, ತನಿಖೆಗೆ ಕೆಲವು ಮಾನದಂಡಗಳಿರುತ್ತವೆ. ಎಲ್ಲವೂ ಪಾತದರ್ಶಕವಾಗಿ ನಡೆಯಬೇಕು. ಆದರೆ, ಯಾವುದೇ ಹಣಕಾಸು ವಹಿವಾಟು ನಡೆದಿಲ್ಲ. ಹಣಕಾಸಿನ ವಿಚಾರ ಎಲ್ಲೂ ತನಿಖೆಯಾಗಿಲ್ಲ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ (D K Suresh) ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿಯವರು ಹತ್ತು ಹದಿನೈದು ದಿನದ ಹಿಂದೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಲ್ಲಿ ಯಾವುದೇ ಹಣಕಾಸು ವಹಿವಾಟು ನಡೆದಿಲ್ಲ. ಹಣಕಾಸಿನ ವಿಚಾರ ಎಲ್ಲೂ ತನಿಖೆಯಾಗಿಲ್ಲ. ಕೊನೆಗೆ ಈ ಕೇಸ್ ನಲ್ಲಿ ಏನೂ ಇಲ್ಲ ಅನ್ನೋದು ಅವರಿಗೆ ಗೊತ್ತಾಗುತ್ತದೆ ಎಂದಿದ್ದಾರೆ.
ಲೋಕಾಯುಕ್ತದಲ್ಲಿ 120 ಬಿ ಹಾಕಿದ್ದಾರೆ. ಇದರಲ್ಲಿ ಲೋಕಾಯುಕ್ತ ಪ್ರವೇಶಕ್ಕೆ ಅವಕಾಶವಿದೆ. ಆ ನಿಟ್ಟಿನಲ್ಲಿ ತನಿಖೆ ನಡೆದಾಗ ಸತ್ಯಾಂಶ ಹೊರಗೆ ಬರುತ್ತದೆ. ಇದೊಂದು ರಾಜಕೀಯ ಪ್ರೇರಿತ ದಾಳಿಯಾಗಿದೆ. ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ. ನ್ಯಾಯಾಲಯದಲ್ಲಿ ಕೂಲಂಕಷವಾಗಿ ತನಿಖೆ ನಡೆದಿದೆ. ಇದಕ್ಕೆ ಸಿಎಂ ಹೆದರಬೇಕಿಲ್ಲ. ಇದರಲ್ಲಿ ಏನು ಇಲ್ಲ ಎಂದು ಅವರಿಗೂ ಕೊನೆಗೆ ಅರಿವಾಗುತ್ತದೆ ಎಂದು ಹೇಳಿದ್ದಾರೆ.
ಚನ್ನಪಟ್ಟಣ ಚುನಾವಣೆ ಟಿಕೆಟ್ ವಿಚಾರವಾಗಿ ಮಾತನಾಡಿ, ಸಹೋದರನ ಜೊತೆ ಪ್ರತಿದಿನ ಭೇಟಿ ಮಾಡುತ್ತೇನೆ. ಅದರಲ್ಲಿ ಹೊಸದೇನು ಇಲ್ಲ. ಅಭ್ಯರ್ಥಿ ತಯಾರಿ ಬಗ್ಗೆ ಮಾತನಾಡಿದ್ದೇವೆ. ಮುಖಂಡರು ಕಾರ್ಯಕರ್ತರ ಜೊತೆ ಚರ್ಚಿಸಿದ್ದೇವೆ. ಜನ ನನಗೆ ವಿಶ್ರಾಂತಿ ಕೊಟ್ಟಿದ್ದಾರೆ. ವಿಶ್ರಾಂತಿ ತೆಗೆದುಕೊಳ್ಳಿ ಎಂದಿದ್ದಾರೆ. ಅಚ್ಚರಿಯ ಅಭ್ಯರ್ಥಿ ಕಣಕ್ಕೆ ಇಳಿಯಲಿದ್ದಾರೆ ಎಂದಿದ್ದಾರೆ.