ಕಲಬುರಗಿ: ಇಂದು ಬಿಡುಗಡೆಯಾದ ಸಚಿವರ ಖಾತೆ ಹಂಚಿಕೆ ಪಟ್ಟಿಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಹಸ್ತಕ್ಷೇಪವಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.
ಈ ವಿಚಾರವಾಗಿ ಕಲಬುರಗಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ, ಖಾತೆ ಹಂಚಿಕೆಯಲ್ಲಿ ನನ್ನ ಪಾತ್ರವಿದೆ ಎನ್ನುವ ಆರೋಪಗಳೆಲ್ಲಾ ಶುದ್ಧ ಸುಳ್ಳು. ಯಡಿಯೂರಪ್ಪ ಅವರು ನಾಲ್ಕು ದಶಕಗಳ ಹೋರಾಟದ ಮೂಲಕ ಮುಖ್ಯಮಂತ್ರಿ ಆದವರು. ಡಿಸಿಎಂ ಆಗಿ, ಸಿಎಂ ಆಗಿ ಅಪಾರ ರಾಜಕೀಯ ಅನುಭವ ಹೊಂದಿದ್ದಾರೆ. ಯಡಿಯೂರಪ್ಪ ಅವರಿಗೆ ಯಾರ ಹಸ್ತಕ್ಷೇಪದ ಅಗತ್ಯವೂ ಬೀಳೋದಿಲ್ಲ. ಅಲ್ಲದೇ ನನ್ನ ಹಸ್ತಕ್ಷೇಪ ವಂತೂ ಇಲ್ಲವೇ ಇಲ್ಲ. ನನ್ನ ಹಸ್ತಕ್ಷೇಪದ ಬಗ್ಗೆ ಆರೋಪಗಳ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸ್ಷಷ್ಟಪಡಿಸಿದ್ದಾರೆ.
ಖಾತೆ ಹಂಚಿಕೆಯಲ್ಲಿ ಆಗಿರುವ ಸಚಿವ ಅಸಮಾಧಾನ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರಿಹರಿಸಲಿದ್ದಾರೆ. ಅಸಮಾಧಾನಗೊಂಡವರೊಂದಿಗೆ ಸಿಎಂ ಮಾತನಾಡಿ ಸಮಸ್ಯೆ ಬಗೆಹರಿಸಲಿದ್ದಾರೆ ಎಂದು ವಿಜಯೇಂದ್ರ ತಿಳಿಸಿದರು.
ಕಾಂಗ್ರೆಸ್ ಮೊಸರಲ್ಲಿ ಕಲ್ಲು ಹುಡುಕುವ ಯತ್ನ
ರೈತರ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ರ್ಯಾಲಿ ಮಾಡಿದ್ದಾರೆ. ರ್ಯಾಲಿಯಲ್ಲಿ ಬಿಜೆಪಿ ಸರ್ಕಾರದ ವೈಫಲ್ಯ ಎತ್ತಿ ಹಿಡಿಯುತ್ತೇವೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ. ಆದರೆ, ಉಪಚುನಾವಣೆಗಳಲ್ಲಿ ಸೋಲು ಅನುಭವಿಸುವ ಮೂಲಕ ಕಾಂಗ್ರೆಸ್ ಪಕ್ಷ ಹಾಗೂ ಮುಖಂಡರು ಹತಾಶರಾಗಿದ್ದಾರೆ. ತಮ್ಮ ಅಸ್ತಿತ್ವ ಕಳೆದು ಹೋಗುವ ಗಂಡಾಂತರದಲ್ಲಿರುವ ಕಾಂಗ್ರೆಸ್ ನಾಯಕರು ರೈತರ ಹೆಸರಲ್ಲಿ ಮೊಸಳೆ ಕಣ್ಣೀರು ಸುರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅದರಲ್ಲಿ ಕಾಂಗ್ರೆಸ್ ಪಕ್ಷ ಯಶಸ್ವಿಯಾಗಲ್ಲ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.
ಸಿಎಂ ಯಡಿಯೂರಪ್ಪ ಆಡಳಿತದಲ್ಲಿ ರಾಜ್ಯದಲ್ಲಿ ರೈತರು ಸುಭದ್ರರಾಗಿದ್ದಾರೆ, ಅವರಿಗೆ ಯಾವುದೇ ಆತಂಕ ಇಲ್ಲ ಎಂಬುದು ಮೇಲ್ನೋಟಕ್ಕೆ ಕಾಣುತ್ತದೆ. ಕಾಂಗ್ರೆಸ್ ನವರು ಮೊಸರಲ್ಲಿ ಕಲ್ಲು ಹುಡುಕುವ ಯತ್ನದಲ್ಲಿ ಯಶಸ್ವಿಯಾಗಲ್ಲ ಎಂದು ವಿಜಯೇಂದ್ರ ತಿರುಗೇಟು ನೀಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel